ಕರ್ನಾಟಕದ 11 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ
ಬೆಂಗಳೂರು, ಮೇ. 20: ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅಧಿಕಾರಾವಧಿಯು ಮುಂದಿನ ತಿಂಗಳು ಮುಗಿಯಲಿದೆ. ಇದರ ಬೆನ್ನಲ್ಲೇ ಭಾರತದ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಮುಂದಿನ ತಿಂಗಳ ಜೂನ್ 13 ರಂದು ಚುಣಾವಣೆ ನಡೆಯಲಿದೆ.
17.06.2024 ರಂದು ನಿವೃತ್ತರಾಗುವ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ವಿಧಾನಸಭೆಯ ಸದಸ್ಯರು (ಎಂಎಲ್ಎ) ಆಯ್ಕೆ ಮಾಡುವ ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲಾಗುತ್ತಿದೆ. ಈ ಕೆಳಗಿನ ವಿವರಗಳ ಪ್ರಕಾರ ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅಧಿಕಾರದ ಅವಧಿಯು 17.06.2024 ರಂದು ಮುಕ್ತಾಯಗೊಳ್ಳಲಿದೆ ಎಂದು ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ.

ನಿವೃತ್ತಿಯಾಗಲಿರುವ ಕರ್ನಾಟಕ ವಿಧಾನ ಪರಿಷತ್ ಸದಸ್ಯರು
1. ಅರವಿಂದ್ ಕುಮಾರ್ ಅರಳಿ
2. ಎನ್.ಎಸ್. ಬೋಸರಾಜು
3. ಕೆ. ಗೋವಿಂದರಾಜ್
4. ಡಾ. ತೇಜಸ್ವಿನಿ ಗೌಡ
5. ಮುನಿರಾಜು ಗೌಡ ಪಿ.ಎಂ.
6. ಕೆ.ಪಿ. ನಂಜುಂಡಿ ವಿಶ್ವಕರ್ಮ
7. ಬಿ.ಎಂ. ಫಾರೂಕ್
8. ರಘುನಾಥ ರಾವ್ ಮಲ್ಕಾಪುರೆ
9. ಎನ್. ರವಿ ಕುಮಾರ್
10. ಎಸ್. ರುದ್ರೇಗೌಡ
11. ಕೆ ಹರೀಶ್ ಕುಮಾರ್
ಕರ್ನಾಟಕ ವಿಧಾನ ಪರಿಷತ್ ಚುನಾವಣೆ
1. ಅಧಿಸೂಚನೆ ಹೊರಡಿಸುವ ದಿನಾಂಕ: 27ನೇ ಮೇ, 2024 (ಸೋಮವಾರ)
2. ನಾಮಪತ್ರ ಸಲ್ಲಿಕೆ ಮಾಡುವ ಕೊನೆಯ ದಿನಾಂಕ: ಜೂನ್ 03, 2024 (ಸೋಮವಾರ)
3. ನಾಮಪತ್ರಗಳ ಪರಿಶೀಲನೆ: ಜೂನ್ 04, 2024 (ಮಂಗಳವಾರ)
4. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ: ಜೂನ್ 06, 2024 (ಗುರುವಾರ)
5. ಮತದಾನದ ದಿನಾಂಕ: 13ನೇ ಜೂನ್, 2024 (ಗುರುವಾರ)
6. ಮತದಾನದ ಸಮಯ- ಬೆಳಗ್ಗೆ 09:00 ರಿಂದ ಸಂಜೆ 04:00
7. ಮತಗಳ ಎಣಿಕೆ ನಡೆಯುವ ದಿನಾಂಕಾ: 13ನೇ ಜೂನ್, 2024 (ಗುರುವಾರ) ಸಂಜೆ 05:00 ಗಂಟೆಗೆ
8. ಚುನಾವಣೆ ಮುಗಿಯುವ ದಿನಾಂಕ: 15ನೇ ಜೂನ್, 2024 (ಶನಿವಾರ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications