ಮದುವೆ-ಹುಟ್ಟುಹಬ್ಬಕ್ಕೆ ಚುನಾವಣಾ ಆಯೋಗದ ಅನುಮತಿ ಬೇಕಿಲ್ಲ!
ಬೆಂಗಳೂರು, ಏಪ್ರಿಲ್ 11: ಮದುವೆ, ಹುಟ್ಟುಹಬ್ಬ ಸೇರಿದಂತೆ ಇನ್ನಿತರ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಚುನಾವಣಾ ಆಯೋಗದ ಅನುಮತಿಯ ಅಗತ್ಯವಿಲ್ಲವೆಂದು ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಮದುವೆ, ಹುಟ್ಟುಹಬ್ಬಗಳಂತಹ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ನೀಡುವಂತೆ ಸಾರ್ವಜನಿಕರು ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಮಾದರಿ ನೀತಿ ಸಂಹಿತೆ ಜಾರಿ ದಳದ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದಾರೆ. ವಾಸ್ತವವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿಯ ಅಗತ್ಯವಿರುವುದಿಲ್ಲವೆಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟೀಕರಿಸಿದ್ದಾರೆ.
ಹಾಗೆಯೇ, ರಾಜಕೀಯ ವ್ಯಕ್ತಿಗಳು ಭಾಗವಹಿಸದಿರುವ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಸಹ ಅನುಮತಿಯ ಅಗತ್ಯವಿರುವುದಿಲ್ಲ. ಆದರೆ, ಸಾರ್ವಜನಿಕರು ಆಯೋಜಿಸುವ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಮಾದರಿ ನೀತಿ ಸಂಹಿತಿ ಜಾರಿ ದಳದ ಅಧಿಕಾರಿಗಳು ಕಣ್ಣಿಟ್ಟಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಆಯೋಜಿಸುವ ಕಾರ್ಯಕ್ರಮಗಳಲ್ಲಿ ರಾಜಕೀಯ ವ್ಯಕ್ತಿಗಳು ಉಡುಗೊರೆ ಹಂಚುತ್ತಿರುವುದು ಇಲ್ಲವೆ ಊಟದ ವ್ಯವಸ್ಥೆ ಸೇರಿದಂತೆ ಮತದಾರರನ್ನು ಒಲಿಸಲು ಯಾವುದೇ ರೀತಿಯ ಆಮಿಷಗಳನ್ನು ಒಡ್ಡುತ್ತಿದ್ದಾರೆ ಅಂತಹವರ ಮೇಲೆ ಆಯೋಗವು ಕಾನೂನಿನ ರೀತಿ ಕ್ರಮ ಕೈಗೊಳ್ಳುತ್ತದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ನಗದು ಮಿತಿ :
ಸಾರ್ವಜನಿಕರು ತಮ್ಮೊಂದಿಗೆ ಯಾವುದೇ ದಾಖಲೆಗಳಿಲ್ಲದೆ 50 ಸಾವಿರ ರೂ.ವರೆಗಿನ ಮೊತ್ತವನ್ನು ತಮ್ಮೊಂದಿಗೆ ಪ್ರಯಾಣದ ವೇಳೆಯಲ್ಲಿ ಇಟ್ಟುಕೊಳ್ಳಲು ಅವಕಾಶವಿದೆ. ಹಾಗೆಯೇ, ರೂ.10,000/-ಇಲ್ಲವೇ ಅದಕ್ಕಿಂತ ಹೆಚ್ಚಿನ ಮೌಲ್ಯದ ಉಡುಗೊರೆಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಲು ದಾಖಲೆಗಳ ಅವಶ್ಯಕತೆ ಇರುವುದಿಲ್ಲ.
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ 1255 ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು, ಚುನಾವಣೆಯ ವೇಳೆ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಸ್ಥಾಪಿಸಲಾಗಿದೆ. ವಾಹನಗಳು ಮತ್ತು ಲಗೇಜುಗಳನ್ನು ತಪಾಸಿಸುವ ವೇಳೆ ಸಾರ್ವಜನಿಕರು ಸಹಕರಿಸುವಂತೆ ಆಯೋಗವು ಮನವಿ ಮಾಡಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications