ಪರಿಷ್ಕೃತ ವೇತನ ಜಾರಿಗೆ ಚುನಾವಣಾ ಆಯೋಗ ಒಪ್ಪಿಗೆ
ಬೆಂಗಳೂರು, ಏಪ್ರಿಲ್ 19: ರಾಜ್ಯ ಸರ್ಕಾರದ ನೌಕರರಿಗೆ ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗ ಒಪ್ಪಿಗೆ ನೀಡಿದೆ.
ರಾಜ್ಯ ಸರ್ಕಾರ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಅನುಮತಿ ಕೇಳಿತ್ತು. ಸರ್ಕಾರಿ ನೌಕರರ ವೇತನವನ್ನು 2017ರ ಜುಲೈ ಒಂದರಿಂದ ಪೂರ್ವಾನ್ವಯವಾಗುವಂತೆ ಶೇ 30ರಷ್ಟು ಹೆಚ್ಚಿಸಲು ಆರನೇ ವೇತನ ಆಯೋಗ ಶಿಫಾರಸು ಮಾಡಿದೆ. ಇದರಿಂದ ಒಟ್ಟು 5.20 ಲಕ್ಷ ನೌಕರರಿಗೆ ಪ್ರಯೋಜನವಾಗಲಿದೆ.
ವೇತನ ಹೆಚ್ಚಳ ಶಿಫಾರಸು ರಾಜ್ಯದಲ್ಲಿನ ಅನುದಾನಿತ ಶಿಕ್ಷಣ ಸಂಸ್ಥೆಗಳ, ಸ್ಥಳೀಯ ಸಂಸ್ಥೆಗಳ, ಪದವಿ ಶಿಕ್ಷಣ ವಿದ್ಯಾಲಯ ಹಾಗೂ ವಿಶ್ವವಿದ್ಯಾಲಯಗಳಲ್ಲಿನ ಸುಮಾರು 73,000 ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದೆ.

ಕನಿಷ್ಠ ವೇತನ 17,000 ರೂ. ಮತ್ತು ಗರಿಷ್ಠ ವೇತನ 1,50,600ರೂ. ನಿಗದಿಪಡಿಸುವಂತೆಯೂ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.8,500ರೂ. ಕನಿಷ್ಠ ಪಿಂಚಣಿ ಮತ್ತು 75,300ರೂ. ಗರಿಷ್ಠ ಪಿಂಚಣಿಗೂ ಶಿಫಾರಸು ಮಾಡಲಾಗಿದೆ.
ಇದರಿಂದಾಗಿ ಈವರೆಗೆ ಡಿಗ್ರೂಪ್ ನೌಕರರಿಗೆ ಇದ್ದ ಆರಂಭಿಕ ಕನಿಷ್ಠ ಮೂಲವೇತನ 9,600 ರೂ. ಇನ್ನು 17,000ರೂ.ಗೆ ಏರಿಕೆಯಾಗಲಿದೆ. ಶೇ 45.25ರಷ್ಟಿದ್ದ ತುಟ್ಟಿಭತ್ಯೆ ಮೂಲವೇತನದಲ್ಲಿ ವಿಲೀನವಾಗಲಿದೆ. ಜತೆಗೆ ಶೇ 30ರ ಫಿಟ್ ಮೆಂಟ್ ನೌಕರರಿಗೆ ಸಿಗಲಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಏಪ್ರಿಲ್ನಿಂದ ಪಾವತಿ: ಆಯೋಗದ ಶಿಫಾರಸಿನ ಪ್ರಕಾರ, ಪರಿಷ್ಕೃತ ದರವನ್ನು ಈ ವರ್ಷ ಏಪ್ರಿಲ್ 1ರಿಂದಲೇ ಪಾವತಿಸಬೇಕಾಗುತ್ತದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಪ್ರತಿ ವರ್ಷ 10,508ರೂ. ಕೋಟಿ ಹೆಚ್ಚುವರಿ ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಇನ್ನಿತರ ಶಿಫಾರಸುಗಳು
* ಹಾಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನೂ 60 ವರ್ಷಗಳಿಗೆ ಮುಂದುವರಿಸಬೇಕು
* ಸ್ವಯಂ ನಿವೃತ್ತಿಗೆ ಕನಿಷ್ಠ ಸೇವಾ ಅರ್ಹತೆ ಮಿತಿ 15ರಿಂದ 10 ವರ್ಷಕ್ಕೆ ಇಳಿಕೆ
* ಪೂರ್ಣ ಪ್ರಮಾಣದ ಪಿಂಚಿಣಿ ಪಡೆಯಲು ಇರುವ ವಯಸ್ಸಿನ ಅರ್ಹತೆಯನ್ನು 33 ವರ್ಷಗಳಿಗೆ ಬದಲಾಗಿ 30 ವರ್ಷಗಳಿಗೆ ಇಳಿಕೆ
* ಮನೆ ಬಾಡಿಗೆ ಭತ್ಯೆಯನ್ನು ಪರಿಷ್ಕೃತ ಮೂಲ ವೇತನ ಆಧರಿಸಿ ಶೇ 24, ಶೇ 16 ಮತ್ತು ಶೇ 8ರಂತೆ ಪರಿಷ್ಕರಿಸಬೇಕು
* ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪ್ರಸಕ್ತ ಮೂಲ ಪಿಂಚಣಿಯ ಶೇ 30ರಷ್ಟು ಹೆಚ್ಚಳ ಮಾಡಬೇಕು
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications