ಕರ್ನಾಟಕ ಚುನಾವಣೆ 2023: 'ಚುನಾವಣಾ ಆ್ಯಪ್' ಬಿಡುಗಡೆ; ಮತದಾರರ ಎಲ್ಲ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು, ಮೇ 10ರಂದು ರಾಜ್ಯದ ಎಲ್ಲ 224 ಕ್ಷೇತ್ರಗಳಿಗೆ ಏಕಕಾಲದಲ್ಲಿ ಮತದಾನ ನಡೆಯಲಿದೆ. ಇದೇ ವೇಳೆ ಮತದಾರರ ಸಮಸ್ಯೆಗಳಿಗೆ ಸ್ಪಂದಿಸಲು ಚುನಾವಣಾ ಆಯೋಗವು 'ಚುನಾವಣಾ ಆ್ಯಪ್' ಅನ್ನು ಬಿಡುಗಡೆಗೊಳಿಸಿದೆ.
ಈ 'ಚುನಾವಣಾ ಆ್ಯಪ್'ನಲ್ಲಿ ಪ್ರತಿ ಕ್ಷೇತ್ರಗಳ ಮತಗಟ್ಟೆ ವಿವರ, ಅಭ್ಯರ್ಥಿಗಳ ವಿವರ, ಚುನಾವಣಾ ವೇಳಾಪಟ್ಟಿ ಸೇರಿದಂತೆ ಹಲವು ಮಾಹಿತಿಗಳನ್ನು ಕ್ಷಣ ಮಾತ್ರದಲ್ಲಿ ಒದಗಿಸಲಾಗುತ್ತದೆ. ಮತದಾರರ ಯಾವುದೇ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲಾಗುತ್ತದೆ.

ಮತದಾರರು 'ಚುನಾವಣಾ ಆ್ಯಪ್' ಬಳಸಿಕೊಂಡು ಸುಲಭವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಚುನಾವಣಾ ಆಯೋಗ ಹಲವು ಉಪಯುಕ್ತ ಮಾಹಿತಿಗಳುಳ್ಳ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಮತದಾರರು Chunavana ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಪರಿಹಾರ ಕಂಡುಕೊಳ್ಳಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
'ಚುನಾವಣಾ ಆ್ಯಪ್'ನಲ್ಲಿ ಏನೆಲ್ಲಾ ಮಾಹಿತಿಗಳಿವೆ?
* ಅಂಗವಿಕಲರು, ದಿವ್ಯಾಂಗರು ಮತ್ತು ಹಿರಿಯ ನಾಗರಿಕರು ಮತದಾನ ಕೇಂದ್ರಕ್ಕೆ ಬರಲು ಉಚಿತ ಸಾರಿಗೆ ವ್ಯವಸ್ಥೆ ಮತ್ತು ಗಾಲಿ ಕುರ್ಚಿ ವ್ಯವಸ್ಥೆಗೆ 'ಚುನಾವಣಾ ಆ್ಯಪ್'ನಲ್ಲಿ ಬುಕ್ ಮಾಡಬಹುದಾಗಿದೆ.
* "ಚುನಾವಣಾ ಆ್ಯಪ್'ನಲ್ಲಿ ಇಡೀ ಚುನಾವಣೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಒದಗಿಸಲಾಗುತ್ತದೆ.
* ಪ್ರತಿ ಮತಗಟ್ಟೆಯ ವಿವರ ಮತ್ತು ಮತಗಟ್ಟೆ ಅಧಿಕಾರಿಗಳ ಮಾಹಿತಿಯನ್ನು 'ಚುನಾವಣಾ ಆ್ಯಪ್'ನಲ್ಲಿ ಪಡೆಯಬಹುದು.

* ಮತದಾರರು ತಮ್ಮ ಊರಿನ ಮತದಾರರ ಪಟ್ಟಿಯಲ್ಲಿ ಹೆಸರು ಖಾತರಿ ಮತ್ತು ಮತದಾರ ಚೀಟಿಯ ವಿವರವನ್ನು ಪಡೆಯಬಹುದಾಗಿದೆ.
* ಮತದಾರರು ತಾವು ಮತದಾನ ಮಾಡುವ ಮತಗಟ್ಟೆ ತಲುಪಲು ಜಿಪಿಎಸ್ ವ್ಯವಸ್ಥೆಯನ್ನು 'ಚುನಾವಣಾ ಆ್ಯಪ್'ನಲ್ಲಿ ಪಡೆದುಕೊಳ್ಳಬಹುದು.
* ಮತದಾರರು ತಾವು ಮತದಾನ ಮಾಡುವ ಕ್ಷೇತ್ರದ ಪ್ರತಿ ಅಭ್ಯರ್ಥಿಯ ವಿವರವನ್ನು 'ಚುನಾವಣಾ ಆ್ಯಪ್'ನಲ್ಲಿ ಪಡೆಯವಹುದು.
* ಮತದಾನದ ಪ್ರಮಾಣವನ್ನು ಈ 'ಚುನಾವಣಾ ಆ್ಯಪ್'ನಲ್ಲಿ ನೋಡಬಹುದು.
* ಮತಗಟ್ಟೆಯ ಸುತ್ತಮುತ್ತಲಿನ ಆಸ್ಪತ್ರೆ, ಪೊಲೀಸ್ ಠಾಣೆ ವಿವರ ದೊರೆಯುತ್ತದೆ. ಪಾರ್ಕಿಂಗ್ ಸ್ಥಳವನ್ನು ಪತ್ತೆ ಮಾಡಬಹುದು.
ಮೇ 10ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರಿಗೆ ಮಾತ್ರ ಮತದಾನ ನಡೆಯಲಿದ್ದು, ಚುನಾವಣಾ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕತೆಯಿಂದ ನಡೆಸಲು ಸಾರ್ವಜನಿಕರು ಸಹಕರಿಸಬೇಕೆಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಭಾಗವಾಗಿ 224 ಕ್ಷೇತ್ರಗಳಿಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ.
-
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ












Click it and Unblock the Notifications