ಸಾರ್ವತ್ರಿಕ ಚುನಾವಣೆ: ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯಕ್ಕೆ ಪತ್ರ: ಸೂಚನೆಗಳೇನು?
ಬೆಂಗಳೂರು, ಮಾರ್ಚ್ 07: 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುವುದು ಬಾಕಿ ಇದೆ. ಇನ್ನೊಂದು ವಾರದಲ್ಲಿ ಅಧಿಕೃತ ದಿನಾಂಕ ಘೋಷಣೆ ಆಗಲಿದೆ. ಇದಕ್ಕು ಮೊದಲೇ ಭಾರತೀಯ ಚುನಾವಣೆ ಆಯೋಗವು (ECI) ಕರ್ನಾಟಕ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದೆ.
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಆದ ದಿನದಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಸಂಬಂಧ ಕರ್ನಾಟಕ ರಾಜ್ಯ ಚುನಾವಣಾಧಿಕಾರಿಗಳು ಮತ್ತು ಬೆಂಗಳೂರು ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದೆ. ಹಾಗಾದರೆ ಪತ್ರ ಮೂಲಕ ನೀಡಿರುವ ಪ್ರಮುಖ ಸೂಚನೆಗಳೇನು? ಎಂಬ ಮಾಹಿತಿ ಇಲ್ಲಿದೆ.

ಪತ್ರದಲ್ಲಿ ಏನಿದೆ?
ಭಾರತೀಯ ಚುನಾವಣೆ ಆಯೋಗದ ಪತ್ರದಲ್ಲಿ '' ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುತ್ತದೆ. ಆದ್ದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವಂತಹ ಗೋಡೆ ಬರಹ (Wall writings), ಪೋಸ್ಟರ್ (posters), ಬ್ಯಾನರ್ (banners) ಮುಂತಾದವುಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ.
ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಳ್ಳಬೇಕೆಂದು ಸೂಚನೆ ನೀಡಿದೆ. ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಇದರೊಂದಿಗೆ ಲಗತ್ತಿಸಿರುವ ಪ್ರಪತ್ರದಲ್ಲಿ ಈ ಕಚೇರಿಯ ಇಮೇಲ್ ವಿಳಾಸ [email protected] [email protected] ಗೆ ಸಲ್ಲಿಸುವಂತೆ ಹಾಗೂ ಅದರ ಪ್ರತಿಯನ್ನು ಈ ಕಛೇರಿಗೆ ಸಲ್ಲಿಸುವಂತೆ ಆಯೋಗ ನಿರ್ದೇಶಿಸಿದೆ'.

ತ್ವರಿತ ತೆರವಿಗೆ ಸೂಚನೆ
ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಕೇವಲ ಗಂಟೆಗಳಲ್ಲಿ ಪಕ್ಷಗಳು ಭಾವುಟ, ಬ್ಯಾನರ್ಗಳು, ರಸ್ತೆ ಬದಿಯ ಬರಹ ಸೇರಿದಂತೆ ಯಾವುದೇ ರಾಜಕೀಯ ಮತ್ತು ಪಕ್ಷಗಳಿಗೆ ಸಂಬಂಧಿಸಿದಂತಹ ಮತ್ತು ನಿಯಮ ಉಲ್ಲಂಘನೆಗೆ ಕಾರಣಾಗುವ ಪೋಸ್ಟರ್ಗಳನ್ನು ತ್ವರಿತಗತಿಯಲ್ಲಿ ತೆರವಿಗೆ ಆಯೋಗ ಸೂಚನೆ ನೀಡಿದೆ.
ಕೇಂದ್ರ ಆಯೋಗದ ಸೂಚನೆ ಬೆನ್ನಲ್ಲೆ ಬೆಂಗಳೂರು ಚುನಾವಣಾಧಿಕಾರಿಗಳು ಸೇರಿದಂತೆ ರಾಜ್ಯ ಚುನಾವಣಾಧಿಕಾರಿಗಳು ಬ್ಯಾನರ್ ತೆರವಿಗೆ ತಂಡಗಳನ್ನು ರಚಿಸಲಿದ್ದಾರೆ. ಈಗಾಗಲೇ ಎಲ್ಲೆಲ್ಲಿ ಇಂತಹ ಬ್ಯಾನರ್, ಪ್ಲೆಕ್ಸ್ ಗಳಿವೆ ಎಂಬುದೆಲ್ಲದರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications