Breaking: ಕರ್ನಾಟಕದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ
ಬೆಂಗಳೂರು, ನವೆಂಬರ್ 29: ಕರ್ನಾಟಕದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆದರೆ ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
2016ನೇ ಸಾಲಿನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲಾದ 51 ನಗರ ಸ್ಥಳೀಯ ಸಂಸ್ಥೆಗಳ ಅವಧಿಯು 2021ಗೆ ಮುಕ್ತಾಯಗೊಳ್ಳಲಿದೆ. ಕ್ಷೇತ್ರ ವಿಂಗಡನೆ ಮಾಡಿ, ವಾರ್ಡ್ವಾರು ಮೀಸಲಾತಿಯನ್ನು ನಿಗದಿಪಡಿಸಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ.
5 ನಗರ ಸಭೆ, 19 ಪುರಸಭೆ ಹಾಗೂ 34 ಪಟ್ಟಣ ಪಂಚಾಯಿತಿಗಳ 1185 ವಾರ್ಡ್ಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಮಾಡಲು 16 ಡಿಸೆಂಬರ್ ಕೊನೆಯ ದಿನವಾಗಿದೆ. ನಾಪಪತ್ರ ವಾಪಸ್ ಪಡೆಯಲು 18 ಡಿಸೆಂಬರ್ ಕೊನೆಯ ದಿನವಾಗಿದೆ.

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ಪಾಲನೆ ಮಾಡಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಚುನಾವಣಾ ಪ್ರಕ್ರಿಯೆಯ ಪ್ರಮುಖ ದಿನಾಂಕಗಳು
ಚುನಾವಣಾ ಅಧಿಸೂಚನೆ- ಡಿಸೆಂಬರ್ 8
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ- 15 ಡಿಸೆಂಬರ್
ನಾಮಪತ್ರ ಪರಿಶೀಲಿಸುವ ದಿನ- ಡಿಸೆಂಬರ್ 16
ನಾಮಪತ್ರ ವಾಪಸ್ ಪಡೆಯುವ ದಿನ- ಡಿಸೆಂಬರ್ 18
ಮತದಾನ ನಡೆಯುವ ದಿನ- ಡಿಸೆಂಬರ್- 27
ಮರುಮತದಾನ ಇದ್ದಲ್ಲಿ ನಡೆಸಬೇಕಾದ ದಿನ- ಡಿಸೆಂಬರ್ 29
ಮತ ಎಣಿಕೆ ದಿನ- ಡಿಸೆಂಬರ್ 30
ಚುನಾವಣೆ ನಡೆಸಲಾಗುವ ಸ್ಥಳೀಯ ಸಂಸ್ಥೆಗಳು
* ಚಿಕ್ಕಮಗಳೂರು ನಗರಸಭೆ
* ತುಮಕೂರು ಜಿಲ್ಲೆಯ ಶಿರಾ ನಗರಸಭೆ
* ಗದಗ ಜಿಲ್ಲೆಯ ಗದಗ- ಬೆಟಗೇರಿ ನಗರಸಭೆ
* ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆ
* ಬೆಂಗಳೂರಿನ ಹೆಬ್ಬಗೋಡಿ ನಗರಸಭೆ ಸೇರಿದಂತೆ 19 ಪುರಸಭೆ ಹಾಗೂ 34 ಪಟ್ಟಣ ಪಂಚಾಯಿತಿಗಳ 1185 ವಾರ್ಡ್ಗಳಿಗೆ ಚುನಾವಣೆ ನಡೆಯಲಿದೆ.
Recommended Video
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications