Vote From Home: ಚುನಾವಣಾ ಆಯೋಗದ ಕಾರ್ಯಕ್ಕೆ ಏನಂದ್ರು ಹಿರಿಯರ ನಾಗರಿಕರು
ಬೆಂಗಳೂರು, ಮೇ 02: ಕರ್ನಾಟಕ ರಾಜ್ಯ ಚುನಾವಣಾ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಭಾರತದ ಚುನಾವಣಾ ಆಯೋಗವು ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಿದೆ. ಆಯೋಗದ ಈ ಉಪಕ್ರಮಕ್ಕೆ ರಾಜ್ಯದ ಹಿರಿಯ ನಾಗರಿಕರು ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯಾದ್ಯಂತ ಮನೆಯಿಂದಲೇ ಮತದಾನಕ್ಕಾಗಿ ಒಟ್ಟು ಸುಮಾರು 80,000 ಸೂಪರ್ ಸೀನಿಯರ್ (ಹಿರಿಯ ನಾಗರಿಕರು/ವೃದ್ಧರು) ಮನೆಯಿಂದಲೇ ಮತ ಚಲಾಯಿಸಲು ಆಯೋಗದೊಂದಿಗೆ ನೋಂದಣಿ ಮಾಡಿಕೊಂಡಿದ್ದಾರೆ.

ಮತದಾನ ಪ್ರಮಾಣ ಹೆಚ್ಚಳಕ್ಕೆ ಆಯೋಗ ಹೀಗೆ ಮನೆಯಿಂದ ಮತದಾನಕ್ಕೆ ಅವಕಾಶ ನೀಡಿದೆ. ಈ ಕುರಿತು ಮಂಗಳೂರು ಮೂಲದ ಮಾರ್ನಮಿಕಟ್ಟಾ ನಿವಾಸಿ ಪ್ರಮೀಳಾ ಬಾಸ್ಕರ್ ಎಂಬುವವರು ಪ್ರಶಂಶೆ ವ್ಯಕ್ತಪಡಿಸಿದ್ದಾರೆ. ನೋಂದಣಿ ಆಗಿದ್ದ ನನ್ನಿಂದ ಮತದಾನ ಪಡೆಯಲು ಮಧ್ಯಾಹ್ನ 1 ಗಂಟೆಗೆ ಮನೆಗೆ ಬಂದ ಚುನಾವಣಾಧಿಕಾರಿಗಳಿಗೆ ಈಗ ಮತದಾನ ಪ್ರಕ್ರಿಯೆ ಮಾಡಬಹುದೇ ಎಂದು ಕೇಳಿದ್ದರು.
ಆದರೆ ನಾನು ಬೇಸರಿಂದಲೇ ಈಗ ಊಟ ಸಮಯವಾಗಿದೆ ಎಂದು ಹೇಳಿದ್ದೆ. ಅಷ್ಟಕ್ಕೆ ಅವರು ಸ್ವಲ್ಪ ಸಮಯದ ನಂತರ ಮತ್ತೆ ಬಂದು ಮತದಾನ ಪ್ರಕ್ರಿಯೆ ಮುಗಿಸಿದರು. ಈ ಮೂಲಕ ಹಿರಿಯ ನಾಗರಿಕರ ಭಾವನೆಗಳಿಗೆ ಚುನಾವಣಾಧಿಕಾರಿಗಳು ಸ್ಪಂದಿಸಿದ್ದಾರೆ. ಸ್ನೇಹಪರವಾಗಿ ಮತದಾನ ಪ್ರಕ್ರಿಯೆ ಮುಗಿಸಿದರು.
ಹಿರಿಯ ನಾಗರಿಕರಿಗಾಗಿ ತಂದ ಈ ಉಪಕ್ರಮ ಹೆಚ್ಚು ಪ್ರಯೋಜನಕಾರಿಯಾಗಿದೆ. ಮನೆಯಿಂದ ಮತದಾನ ಕೆಲಸ ಕೆಲವೇ ನಿಮಿಷಗಳದ್ದು. ಅಧಿಕಾರಿಗಳು ಮನೆಗೆ ಬಂದು ಮತದಾನ ಪ್ರಕ್ರಿಯೆ ಮುಗಿಸಿ ಹೋಗುವವರೆಗೆ ತಗುಲಿದ ಸಮಯ ಕೇವಲ 10 ರಿಂದ 15 ನಿಮಿಷ ಎಂದು ಪ್ರಮಿಳಾ ಭಾಸ್ಕರ್ ವಿವರಿಸಿದರು.

ಬೆಂಗಳೂರಿನ ಬಸವನಗುಡಿಯ ನಿವಾಸಿಯೊಬ್ಬರು ಚುನಾವಣಾ ಆಯೋಗದ ಕಾರ್ಯ ಶ್ಲಾಘಿಸಿದ್ದಾರೆ. ಚುನಾವಣಾ ಆಯೋಗದ ಈ ಮನೆಯಿಂದ ಮತದಾನ ಘೋಷಣೆ ಒಂದು ವರದಾನವಾಗಿದೆ ಎಂದು ಅಭಿಪ್ರಾಯಪಟ್ಟರು.
ಶತಾಯುಷಿ ಶ್ಲಾಘನೆ
ಇತ್ತೀಚೆಗಷ್ಟೇ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ 103 ವರ್ಷ 4 ತಿಂಗಳ ವಯೋವೃದ್ಧ ಶತಾಯುಷಿ ಮಹದೇವ ಮಹಾಲಿಂಗ ಮಾಳಿ ಅವರು ಮನೆಯಿಂದಲೇ ಮತವನ್ನು ಚಲಾಯಿಸಿದರು. ಈ ಮೂಲಕ ಅವರುಚಿಕ್ಕೋಡಿ-ಸಾದಲಗಾ ವಿಧಾನಸಭಾ ಕ್ಷೇತ್ರದ ಅತ್ಯಂತ ಹಿರಿಯ ಮತದಾರರೆನಿಸಿಕೊಂಡಿದ್ದಾರೆ.
ಮಹದೇವ ಮಹಾಲಿಂಗ ರವರು ಎಲ್ಲಾ ಮತದಾರರಿಗೂ ಸ್ಪೂರ್ತಿಯ ಸೆಲೆಯಾಗಿದ್ದಾರೆ. ಈ ವಯಸ್ಸಿನಲ್ಲಿಯೂ ತಮ್ಮ ಕೆಲಸಗಳನ್ನು ಸ್ವತ: ತಾವೇ ಮಾಡಿಕೊಳ್ಳುವ ಮಹದೇವ ಮಹಾಲಿಂಗ ಮಾಳಿ ಅವರು ಮತದಾನದ ಪ್ರಾಮುಖ್ಯತೆ ವಿವರಿಸಿದರು.
ಚುನಾವಣಾ ಆಯೋಗದ ಈ ನೂತನ ಸೇವೆಯನ್ನು ಶ್ಲಾಘಿಸಿದರು. ಜವಾಬ್ದಾರಿಯುತ ಪ್ರತಿ ಪ್ರಜೆಗಳು ತಪ್ಪದೇ ಮತವನ್ನು ಚಲಾಯಿಸಬೇಕೆಂದು ಕರೆ ನೀಡಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications