ಕರ್ತವ್ಯಕ್ಕೆ ಹಾಜರಾಗದಿದ್ದರೆ ಬಂಧನ, ಚುನಾವಣಾ ಆಯೋಗ ಎಚ್ಚರಿಕೆ
Recommended Video

ಬೆಂಗಳೂರು, ಮೇ 03: ಬಾಲಿಷ ನೆವಗಳನ್ನು ಒಡ್ಡಿಯೋ ಅಥವಾ ಬೇಜವಬ್ದಾರಿತನದಿಂದಲೋ ಸರ್ಕಾರಿ ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ತಪ್ಪಿಸಿಕೊಳ್ಳುವಂತಿಲ್ಲ, ಹಾಗೇನಾದರೂ ಕರ್ತವ್ಯದಿಂದ ತಪ್ಪಿಸಿಕೊಂಡಲ್ಲಿ ಜೈಲು ಸೇರಬೇಕಾಗುತ್ತದೆ ಜಾಗೃತೆ.
ಚುನಾವಣಾ ಕರ್ತವ್ಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುವವರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಹೇಳಿದ್ದು, ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಇತಿಹಾಸ ಹೊಂದಿರುವವರನ್ನು ಗುರುತಿಸಿ ಎಚ್ಚರಿಕೆ ಸಹ ನೀಡಲಾಗಿದೆ ಎಂದರು.
ಚುನಾವಣಾ ಕರ್ತವ್ಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುವವರ ಸಂಖ್ಯೆ ಬೆಂಗಳೂರಿನಲ್ಲೇ ಹೆಚ್ಚಿದ್ದು 1500 ಹೆಚ್ಚು ಅಧಿಕಾರಿಗಳು ಕುಂಟು ನೆವ ಹೇಳಿ ಕರ್ತವ್ಯದಿಂದ ತಪ್ಪಿಸಿಕೊಳ್ಳುವ ಗುಣ ಹೊಂದಿದ್ದಾರಂತೆ. ಆದರೆ ಬೇರೆ ಜಿಲ್ಲೆಗಳಲ್ಲಿ ಈ ಸಮಸ್ಯೆ ಇಲ್ಲವಂತೆ.

ಚುನಾವಣಾ ಆಯೋಗದ ನಿಯಮಾವಳಿ ಸೆಕ್ಷನ್ 134 ರ ಪ್ರಕಾರ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ದಿಂದ ತಪ್ಪಿಸಿಕೊಳ್ಳುವುದು ಅಪರಾಧ. ಚುನಾವಣಾ ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗಬೇಕು ಎಂದು ಸಂಜೀವ್ ಕುಮಾರ್ ಹೇಳಿದರು.
ರಾಜ್ಯಾದ್ಯಂತ ಚುನಾವಣಾ ಕಾರ್ಯಕ್ಕೆ ಒಟ್ಟು 3.50 ಲಕ್ಷ ಸಿಬ್ಬಂದಿ ಬೇಕಾಗುತ್ತದೆ. ಪ್ರತಿ ಮತಗಟ್ಟೆಗೆ ಐವರು ಸಿಬ್ಬಂದಿ ಬೇಕು. ಇವಿಎಂ ಎಂ-3 ಇರುವಲ್ಲಿ ನಾಲ್ಕು ಜನ ಸಾಕು ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ 5.69 ಕೋಟಿಗೆ ಏರಿಕೆ ಆಗಿದೆ ಎಂದ ಅವರು, ಮಹಿಳಾ ಮತದಾರರ ನೋಂದಣಿ ಪ್ರಮಾಣ ಶೇ.16 ರಷ್ಟು ಹೆಚ್ಚಾಗಿದೆ. ಪುರುಷ ಮತ್ತು ಮಹಿಳಾ ಮತದಾರರ ಅನುಪಾತ 1000 ಕ್ಕೆ 974 ಇದೆ. 2013 ರಲ್ಲಿ ಆ ಪ್ರಮಾಣ 952 ಇತ್ತು. ಈ ಬಾರಿ 15.44 ಲಕ್ಷ ಯುವ ಮತದಾರರು ಹೆಸರು ನೋಂದಾಯಿಸಿದ್ದಾರೆ ಎಂದು ತಿಳಿಸಿದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications