ರಾಜ್ಯದಲ್ಲಿ ಚುನಾವಣಾ ಫಲಿತಾಂಶ 4 ಗಂಟೆ ತಡ: ಆಯೋಗ

ಬೆಂಗಳೂರು, ಮೇ 21: ಮತ ಎಣಿಕೆಗೆ ಚುನಾವಣಾ ಆಯೋಗವು ಸರ್ವ ಸನ್ನದ್ಧವಾಗಿದ್ದು, ರಾಜ್ಯದಲ್ಲಿ ಚುನಾವಣಾ ಫಲಿತಾಂಶ ನಾಲ್ಕು ಗಂಟೆ ತಡವಾಗಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಆಯುಕ್ತ ಸಂಜೀವ್ ಕುಮಾರ್ ಹೇಳಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಸುಪ್ರಿಂ ಕೋರ್ಟ್‌ ಆದೇಶದ ಪ್ರಕಾರ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ 40 ವಿವಿಪ್ಯಾಟ್‌ಗಳನ್ನು ಸಹ ಎಣಿಕೆ ಮಾಡಿ ತಾಳೆ ನೋಡಬೇಕಿರುವ ಕಾರಣ ಚುನಾವಣಾ ಫಲಿತಾಂಶವು ನಾಲ್ಕು ಗಂಟೆ ತಡವಾಗಲಿದೆ ಎಂದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗೆ 28 ಮತ ಎಣಿಕೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಮತ ಎಣಿಕೆಗೆ 3,324 ಟೇಬಲ್‌ಗಳನ್ನು ಸಿದ್ದಪಡಿಸಲಾಗಿದೆ. 11,000 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಮತ ಎಣಿಕೆ ಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭ

ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭ

ಮೇ 23ರಂದು ಬೆಳಗ್ಗೆ 8ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.

31 ಮತಗಟ್ಟೆಗಳ ಪ್ರತ್ಯೇಕ ಮತ ಎಣಿಕೆ

31 ಮತಗಟ್ಟೆಗಳ ಪ್ರತ್ಯೇಕ ಮತ ಎಣಿಕೆ

ಒಟ್ಟು 90,000 ಅಂಚೆ ಮತಗಳು ಬಂದಿದ್ದು, ಇವುಗಳ ಎಣಿಕೆ ಬೆಳಿಗ್ಗೆ 8 ಕ್ಕೆ ಪ್ರಾರಂಭವಾಗಲಿದೆ. 31 ಮತಗಟ್ಟೆಗಳಲ್ಲಿ ಅಣಕು ಮತದಾನದ ಮತಗಳನ್ನು ಸರಿಪಡಿಸಿಲ್ಲ. ಹಾಗಾಗಿ ಆ ಮತ ಯಂತ್ರಗಳನ್ನು ಪ್ರತ್ಯೇಕವಾಗಿ ಎಣಿಕೆ ಮಾಡಲಾಗುತ್ತದೆ.

ಮಧ್ಯಾಹ್ನ ಮೂರು ಗಂಟೆಯಿಂದ ಫಲಿತಾಂಶ ಪ್ರಕಟಣೆ

ಮಧ್ಯಾಹ್ನ ಮೂರು ಗಂಟೆಯಿಂದ ಫಲಿತಾಂಶ ಪ್ರಕಟಣೆ

ಮಧ್ಯಾಹ್ನ 3 ಗಂಟೆಯಿಂದ ಫಲಿತಾಂಶ ಪ್ರಕಟಣೆ ಪ್ರಾರಂಭವಾಗುವ ನಿರೀಕ್ಷೆ ಇದೆ. ರಾತ್ರಿ ಏಳು ಗಂಟೆ ವೇಳೆಗೆ 28 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಬಹುದು. ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಆದಷ್ಟು ಬೇಗ ಫಲಿತಾಂಶ ಪ್ರಕಟಣೆ ಮಾಡಲು ಪ್ರಯತ್ನಿಸಲಿದ್ದೇವೆ ಎಂದು ಸಂಜೀವ್ ಕುಮಾರ್ ಹೇಳಿದರು.

ರಾಜ್ಯದಲ್ಲಿ ಏಪ್ರಿಲ್ 18, 23ಕ್ಕೆ ನಡೆದಿತ್ತು ಚುನಾವಣೆ

ರಾಜ್ಯದಲ್ಲಿ ಏಪ್ರಿಲ್ 18, 23ಕ್ಕೆ ನಡೆದಿತ್ತು ಚುನಾವಣೆ

ರಾಜ್ಯದಲ್ಲಿ ಏಪ್ರಿಲ್ 18 ರಂದು 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿತ್ತು , ಉಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನವು ಏಪ್ರಿಲ್ 23 ರಂದು ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+