ತ್ರಿಪುರದಲ್ಲಿ ಬಿಜೆಪಿ ಹೂಡಿದ ತಂತ್ರ ಕರ್ನಾಟಕದಲ್ಲೂ ಫಲಿಸುವುದೇ?
ಬೆಂಗಳೂರು, ಏಪ್ರಿಲ್ 27: ಕಳೆದ 25 ವರ್ಷಗಳಿಂದ ಅಧಿಪತ್ಯ ನಡೆಸುತ್ತಿದ್ದ ಸಿಪಿಐ(ಎಂ) ಪಕ್ಷವನ್ನು ನಿರ್ನಾಮ ಮಾಡಿರುವ ಬಿಜೆಪಿ, ಪ್ರಪ್ರಥಮ ಬಾರಿಗೆ ಈಶಾನ್ಯ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಈಗ ಕರ್ನಾಟಕದಲ್ಲೂ ತ್ರಿಪುರ ತಂತ್ರ ಬಳಸಲು ಯತ್ನಿಸುತ್ತಿದೆ.
ತ್ರಿಪುರದಲ್ಲಿ ಶೇ.91ರಷ್ಟು ಮತ ಚಲಾವಣೆಯಾಗಿದ್ದು, ಇಲ್ಲಿನ ಫಲಿತಾಂಶವನ್ನು ಇಲ್ಲಿನ ಯುವಜನತೆ, ಗುಡ್ಡಗಾಡು ಮತದಾರರು ನಿರ್ಧರಿಸಿದ್ದರು. ತ್ರಿಪುರಾ ಗುಡ್ಡಗಾಡು ಪ್ರದೇಶವಾಗಿರುವುದರಿಂದ ಜನರಲ್ಲಿ ಭರವಸೆ ಮೂಡಿಸುವುದು ಆದ್ಯ ಕರ್ತವ್ಯವಾಗಿತ್ತು.
ಬಿಜೆಪಿ ಗೆಲುವಿನಲ್ಲಿ ಯುವ ಜನತೆಯನ್ನು ಸೆಳೆಯುವಲ್ಲಿ ಬಿಜೆಪಿಯ ಸೋಷಿಯಲ್ ಮೀಡಿಯಾ ಕೂಡ ಸಾಕಷ್ಟು ಕೆಲಸ ಮಾಡಿತ್ತು. ಈಗ ಕರ್ನಾಟಕದಲ್ಲೂ ಇದೇ ರೀತಿ ಕಾರ್ಯತಂತ್ರ ಜಾರಿಯಲ್ಲಿದೆ.

ಜನ ನಾಯಕನಾಗಿ ಬಿ ಶ್ರೀರಾಮುಲು
ಲೋಕಸಭಾ ಸದಸ್ಯ ಬಿ ಶ್ರೀರಾಮುಲು ಅವರನ್ನು ಸ್ಟಾರ್ ಪ್ರಚಾರಕರಾಗಿ ಮಾತ್ರವಲ್ಲ. ಬುಡಕಟ್ಟು ಜನಾಂಗ, ಪರಿಶಿಷ್ಟ ಜಾತಿ, ಪಂಗಂಡದ ಮತಗಳನ್ನು ಸೆಳೆಯಲು ತ್ರಿಪುರ, ನಾಗಾಲ್ಯಾಂಡ್ ಮಾದರಿಯಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ.
ಶ್ರೀರಾಮುಲು ಅವರನ್ನು ಜನನಾಯಕರನ್ನಾಗಿ ಬಿಂಬಿಸಲಾಗುತ್ತಿದ್ದು, ವಾಲ್ಮೀಕಿ ನಾಯಕ ಸಮುದಾಯ ಮತಗಳಷ್ಟೇ ಅಲ್ಲ, ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಭಾಗದಲ್ಲಿ ಬಿಜೆಪಿ ಕಹಳೆ ಊದಲು ಆರಂಭಿಸಿದೆ.
ಪ್ರಚಾರದ ವೇಳೆ ಆಪ್ತ ಗೆಳೆಯ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಳಸಿಕೊಳ್ಳುತ್ತಿರುವುದು ಲಾಭವೇ ಹೊರತೂ ನಷ್ಟವಲ್ಲ ಎಂದು ರಾಜಕೀಯ ವಿಶ್ಲೇಷಕ ಸಂದೀಪ್ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ.
ಹೀಗಾಗಿ, ಮೊಳಕಾಲ್ಮೂರು ಅಲ್ಲದೆ, ಬಾದಾಮಿಯಿಂದ ಸ್ಪರ್ಧಿಸಿರುವ ಬಿ ಶ್ರೀರಾಮುಲು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕಠಿಣ ಸ್ಪರ್ಧೆಯೊಡ್ಡಲಿದ್ದಾರೆ ಎಂಬ ಮಾಹಿತಿಯಿದೆ. ಒಟ್ಟಾರೆ, ಗಾಲಿ ರೆಡ್ಡಿ ಹಾಗೂ ಶ್ರೀರಾಮುಲು ಜೋಡಿಯ ಉಸ್ತುವಾರಿಯಲ್ಲಿರುವ ಐದಾರು ಜಿಲ್ಲೆಗಳಲ್ಲಿ ಬಿಜೆಪಿ ಗೆದ್ದು, ಅಧಿಕಾರ ಚುಕ್ಕಾಣಿ ಹಿಡಿಯುವ ತಂತ್ರ ಫಲಿಸುವುದೇ ಕಾದು ನೋಡಬೇಕಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications