ಅಸೆಂಬ್ಲಿ ಚುನಾವಣೆ: 'ಅಲ್ಲಾ ಹಾಗೂ ರಾಮನ ವಿರುದ್ಧದ ಸೆಣಸು'
Recommended Video

ಬಂಟ್ವಾಳ, ಜನವರಿ 23: ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿವಾದಿತ ಹೇಳಿಕೆ ನೀಡಿದ್ದಾರೆ. ಬಂಟ್ವಾಳ ಕ್ಷೇತ್ರದ ಕಲ್ಲಡ್ಕದಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಮಾತನಾಡುತ್ತಾ, ಮುಂಬರುವ ವಿಧಾನಸಭೆ ಚುನಾವಣೆಯು ಅಲ್ಲಾ ಹಾಗೂ ರಾಮನ ನಡುವಿನ ಯುದ್ಧ ಎಂದು ಘೋಷಿಸಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಈ ಮೂಲಕ ಬಿಜೆಪಿಯ ಮುಖ್ಯ ಅಜೆಂಡಾ ಎನಿಸಿಕೊಂಡಿರುವ ಹಿಂದೂತ್ವ ಪ್ರತಿಪ್ರಾದನೆಯನ್ನು ಮತ್ತೊಮ್ಮೆ ಹೊರಹಾಕಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆ ರಮಾನಾಥ್ ರೈ ಮತ್ತು ರಾಜೇಶ್ ನಾಯಕ್ ಅವರ ನಡುವಿನ ಸ್ಪರ್ಧೆಯಲ್ಲ, ಅಲ್ಲಾ ಮತ್ತು ರಾಮನ ನಡುವಿನ ಸ್ಪರ್ಧೆಯಾಗಿದೆ, ಬಂಟ್ವಾಳ ಯಾರನ್ನು ಆಯ್ಕೆಮಾಡಲಿದೆ? ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.
ಅಲ್ಲಾನನ್ನು ಮತ್ತೊಮ್ಮೆ ಆಯ್ಕೆ ಮಾಡುವಿರಾ? ಅಥವಾ ರಾಮನನ್ನು ನಂಬಿದವರನ್ನು ಆಯ್ಕೆ ಮಾಡುತ್ತೀರಾ?ಬಂಟ್ವಾಳಕ್ಕೆ ಯಾರು ಬೇಕೆನ್ನುವುದನ್ನು ಜನ ತೀರ್ಮಾನಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಈ ಮೂಲಕ 'ಬಂಟ್ವಾಳದಲ್ಲಿ ಮುಸ್ಲಿಮರ ಮತಗಳಿಂದ 6 ಸಲ ಆಯ್ಕೆಯಾಗಿದ್ದೇನೆ' ಎಂದು ಸಚಿವ ರಮಾನಾಥ ರೈ ನೀಡಿದ್ದ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಹಿಂದೂಗಳ ಮತಗಳು ಬೇಡವೆನ್ನುವವರಿಗೆ ನಾವು ಬೆಂಬಲಿಸಬೇಕಾ? ನೀವೇ ತೀರ್ಮಾನಿಸಿ ಎಂದಿದ್ದಾರೆ.
ಬಿಜೆಪಿ ಹಾಗೂ ಕಾಂರ್ಗೆಸ್ ನಡುವಿನ ಹೋರಾಟವಲ್ಲ, 6 ಸಲ ಶಾಸಕನಾಗಿ ಆಯ್ಕೆಯಾಗಿರುವ ವ್ಯಕ್ತಿಗೆ ಹಿಂದೂಗಳ ವೋಟು ಬೇಡವಾಗಿದೆ. ಇದು ಬಂಟ್ವಾಳದ ವಿಷ್ಯ ಮಾತ್ರವಲ್ಲ, ಇಡೀ ಜಿಲ್ಲೆಯ ಘನತೆಯ ಪ್ರಶ್ನೆಯಾಗಿದೆ ಎಂದು ಸುನೀಲ್ ಕುಮಾರ್ ಅವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications