ಅಸೆಂಬ್ಲಿ ಚುನಾವಣೆ: 'ಅಲ್ಲಾ ಹಾಗೂ ರಾಮನ ವಿರುದ್ಧದ ಸೆಣಸು'
Recommended Video

ಬಂಟ್ವಾಳ, ಜನವರಿ 23: ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿವಾದಿತ ಹೇಳಿಕೆ ನೀಡಿದ್ದಾರೆ. ಬಂಟ್ವಾಳ ಕ್ಷೇತ್ರದ ಕಲ್ಲಡ್ಕದಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಮಾತನಾಡುತ್ತಾ, ಮುಂಬರುವ ವಿಧಾನಸಭೆ ಚುನಾವಣೆಯು ಅಲ್ಲಾ ಹಾಗೂ ರಾಮನ ನಡುವಿನ ಯುದ್ಧ ಎಂದು ಘೋಷಿಸಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಈ ಮೂಲಕ ಬಿಜೆಪಿಯ ಮುಖ್ಯ ಅಜೆಂಡಾ ಎನಿಸಿಕೊಂಡಿರುವ ಹಿಂದೂತ್ವ ಪ್ರತಿಪ್ರಾದನೆಯನ್ನು ಮತ್ತೊಮ್ಮೆ ಹೊರಹಾಕಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆ ರಮಾನಾಥ್ ರೈ ಮತ್ತು ರಾಜೇಶ್ ನಾಯಕ್ ಅವರ ನಡುವಿನ ಸ್ಪರ್ಧೆಯಲ್ಲ, ಅಲ್ಲಾ ಮತ್ತು ರಾಮನ ನಡುವಿನ ಸ್ಪರ್ಧೆಯಾಗಿದೆ, ಬಂಟ್ವಾಳ ಯಾರನ್ನು ಆಯ್ಕೆಮಾಡಲಿದೆ? ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.
ಅಲ್ಲಾನನ್ನು ಮತ್ತೊಮ್ಮೆ ಆಯ್ಕೆ ಮಾಡುವಿರಾ? ಅಥವಾ ರಾಮನನ್ನು ನಂಬಿದವರನ್ನು ಆಯ್ಕೆ ಮಾಡುತ್ತೀರಾ?ಬಂಟ್ವಾಳಕ್ಕೆ ಯಾರು ಬೇಕೆನ್ನುವುದನ್ನು ಜನ ತೀರ್ಮಾನಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಈ ಮೂಲಕ 'ಬಂಟ್ವಾಳದಲ್ಲಿ ಮುಸ್ಲಿಮರ ಮತಗಳಿಂದ 6 ಸಲ ಆಯ್ಕೆಯಾಗಿದ್ದೇನೆ' ಎಂದು ಸಚಿವ ರಮಾನಾಥ ರೈ ನೀಡಿದ್ದ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಹಿಂದೂಗಳ ಮತಗಳು ಬೇಡವೆನ್ನುವವರಿಗೆ ನಾವು ಬೆಂಬಲಿಸಬೇಕಾ? ನೀವೇ ತೀರ್ಮಾನಿಸಿ ಎಂದಿದ್ದಾರೆ.
ಬಿಜೆಪಿ ಹಾಗೂ ಕಾಂರ್ಗೆಸ್ ನಡುವಿನ ಹೋರಾಟವಲ್ಲ, 6 ಸಲ ಶಾಸಕನಾಗಿ ಆಯ್ಕೆಯಾಗಿರುವ ವ್ಯಕ್ತಿಗೆ ಹಿಂದೂಗಳ ವೋಟು ಬೇಡವಾಗಿದೆ. ಇದು ಬಂಟ್ವಾಳದ ವಿಷ್ಯ ಮಾತ್ರವಲ್ಲ, ಇಡೀ ಜಿಲ್ಲೆಯ ಘನತೆಯ ಪ್ರಶ್ನೆಯಾಗಿದೆ ಎಂದು ಸುನೀಲ್ ಕುಮಾರ್ ಅವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications