ಎ ಮಂಜುಗೆ ಮತ್ತೆ ನೋಟಿಸ್ ನೀಡಿದ ರೋಹಿಣಿ ಸಿಂಧೂರಿ
ಹಾಸನ, ಏಪ್ರಿಲ್ 10: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ಮತ್ತೊಂದು ನೋಟಿಸ್ ನೀಡಲಾಗಿದೆ. ಈ ಹಿಂದೆ ಏಪ್ರಿಲ್ ಮೊದಲ ವಾರದಲ್ಲಿ ನೀಡಿದ್ದ ನೋಟಿಸ್ ಗೆ ಉತ್ತರಿಸಲು ಏಳು ದಿನಗಳ ಕಾಲಾವಕಾಶ ಕೇಳಿದ್ದರು.
ಬಗರ್ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಕ್ಕೆ ಅಂಕಿತ ಹಾಕಿದ ಆರೋಪದ ಮೇಲೆ ಅರಕಲಗೂಡು ಚುನಾವಣಾ ಅಧಿಕಾರಿ ನೋಟಿಸ್ ನೀಡಿದ್ದು, 2 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ಎ. ಮಂಜು ಅವರು ಸಭೆ ನಡೆಸದೆ 800 ಕ್ಕೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಿದ ಆರೋಪ ಕೇಳಿ ಬಂದಿದೆ. ಜತೆಗೆ ಅರ್ಜಿಗಳನ್ನು ತಿದ್ದಿ ಅನರ್ಹರಿಗೆ ಸಾಗುವಳಿ ಚೀಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ ಹಿಂದಿನ ದಿನಾಂಕದಲ್ಲಿ ಸಭೆ ನಡೆಸಿರುವುದಾಗಿ ಸಹಿ ಮಾಡಿರುವುದು ತನಿಖೆಯಿಂದ ಬಯಲಾಗಿದೆ ಎಂದು ತಿಳಿದು ಬಂದಿದೆ.
ಇದಕ್ಕೂ ಮುನ್ನ ಲೋಕೋಪಯೋಗಿ ಇಲಾಖೆಗೆ ಸೇರಿರುವ ಪರಿವೀಕ್ಷಣಾ ಬಂಗಲೆ (ಐಬಿ) ಯನ್ನು ಎ ಮಂಜು ಅವರು ತಮ್ಮ ವಶದಲ್ಲಿರಿಸಿಕೊಂಡ ಆರೋಪ ಕೇಳಿ ಬಂದಿತ್ತು. ಎ ಮಂಜು ಅವರ ಬೆಂಬಲಿಗರು ಚುನಾವಣೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ತೊಡಗಿದ್ದು ಕಂಡು ಬಂದಿತ್ತು. ಚುನಾವಣೆ ರಿಟರ್ನಿಗ್ ಅಧಿಕಾರಿ ರೋಹಿಣಿ ನೇತೃತ್ವದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ , ಈ ಬಗ್ಗೆ ಪ್ರಶ್ನಿಸಿ, ಕಾರ್ಯಕರ್ತರನ್ನು ತೆರವುಗೊಳಿಸಲು ಯತ್ನಿಸಿದ್ದರು. ಆದರೆ, ಕಾರ್ಯಕರ್ತರು ಮಾತು ಕೇಳದಿದ್ದಾಗ, ಬಂಗಲೆಗೆ ಬೀಗ ಹಾಕಿ, ಸಚಿವ ಎ ಮಂಜುಗೆ ನೋಟಿಸ್ ಜಾರಿಗೊಳಿಸಲಾಗಿತ್ತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications