Get Updates
Get notified of breaking news, exclusive insights, and must-see stories!

ಸಿಪಿವೈ ಬೇನಾಮಿ ಆಸ್ತಿ ಆರೋಪಕ್ಕೆ ಎಚ್ಡಿಕೆ ತಿರುಗೇಟು

ರಾಮನಗರ, ಏಪ್ರಿಲ್ 08: ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ ಕುಮಾರಸ್ವಾಮಿ ಮೇಲೆ ಅಕ್ರಮ ಅಸ್ತಿ ಗಳಿಕೆ ಆರೋಪ ಮಾಡಿದ್ದ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಅವರಿ​ಗೆ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದು, ಆರೋಪ ಸಾಬೀತು ಮಾಡುವಂತೆ ನೋಟಿಸ್​ ಜಾರಿ ಮಾಡಿದ್ದಾರೆ.

ಕಳೆದ ವಾರ ಚನ್ನಪಟ್ಟಣದಲ್ಲಿ ಜೆಡಿಎಸ್​ ಸಮಾವೇಶ ನಡೆದ ನಂತರ ಪತ್ರಿಕಾಗೋಷ್ಠಿ ನಡೆಸಿದ್ದ ಸಿ.ಪಿ ಯೋಗೀಶ್ವರ್​ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ, ಸಿಂಗಪೂರ್​, ಮಲೇಷ್ಯಾದಲ್ಲಿ ಬೇನಾಮಿ ಆಸ್ತಿಗಳಿವೆ ಅದರ ದಾಖಲೆಗಳು ನನ್ನ ಬಳಿ ಇವೆ ಎಂದು ಮಾಧ್ಯಮಗಳ ಎದುರೇ ಕುಮಾರಸ್ವಾಮಿ ವಿರುದ್ಧ ಆರೋಪಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ತಮ್ಮ ವಕೀಲರ ಮೂಲಕ ನೋಟಿಸ್​ ನೀಡಿದ್ದಾರೆ.

Elections 2018 : HD Kumaraswamy serves notice to CP Yogeshwar regarding illegal assets

ಒಂದು ವಾರದಲ್ಲಿ ಆರೋಪಕ್ಕೆ ತಕ್ಕ ದಾಖಲೆ ಒದಗಿಸಬೇಕು. ಇಲ್ಲದಿದ್ದರೆ ಬಹಿರಂಗ ಕ್ಷಮೆಯಾಚಿಸಬೇಕೆಂದು ಕುಮಾರಸ್ವಾಮಿ ಅವರ ಲೀಗಲ್ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ. ತಮ್ಮ ವಕೀಲ ಕೆ.ಎಂ.ಲೋಕೇಶ್ ಮೂಲಕ ಲೀಗಲ್ ನೋಟಿಸ್ ನೀಡಿದ್ದಾರೆ.
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+