'ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿ'
ದಾವಣಗೆರೆ, ಜನವರಿ 14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹೇಗಾದರೂ ಬಿಜೆಪಿ ಬಾವುಟ ಹಾರಿಸಲು ಪಕ್ಷ ಸಾಕಷ್ಟು ಶ್ರಮಿಸುತ್ತಿದೆ. ಈ ನಡುವೆ ಟಿಕೆಟ್ ಗಾಗಿ ಭಾರಿ ಲಾಬಿ ನಡೆಯುತ್ತಿದೆ. ಬಿಜೆಪಿ ಮುಖಂಡ ಎಚ್.ಎಸ್ ನಾಗರಾಜ್ ಅವರು, ತಾವು ಕೂಡಾ ಟಿಕೆಟ್ ಅಕಾಂಕ್ಷಿ ಎಂದು ಘೋಷಿಸಿದ್ದಾರೆ.
'ಬಿ ಫಾರಂ ಬಿಡುಗಡೆಯಾಗುವವರೆಗೂ ಪಕ್ಷದ ಅಭ್ಯರ್ಥಿ ಯಾರೆಂಬುದು ಅಂತಿಮವಾಗದು,ನಾನು ಕೂಡಾ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ಮುಖಂಡ ಎಚ್.ಎಸ್. ನಾಗರಾಜ್ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಪಕ್ಷವೊಂದರಲ್ಲಿ ಕಾರ್ಯಕರ್ತನಾಗುವುದೇ ಅತಿ ದೊಡ್ಡ ಸ್ಥಾನ ಎಂದು ಭಾವಿಸಿದ್ದೇನೆ. ಟಿಕೆಟ್ ನೀಡಿದಲ್ಲಿ ಸ್ಪರ್ಧಿಸುತ್ತೇನೆ, ಇಲ್ಲವಾದರೆ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದರು.

ಹೈಕಮಾಂಡ್ ಪಕ್ಷದ ಅಭ್ಯರ್ಥಿಗಳನ್ನು ನಿರ್ಧರಿಸಲಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷ ಅಮಿತ್ ಷಾ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಬಿ ಫಾರಂ ಬಿಡುಗಡೆಯಾಗುವವರೆಗೂ ಪಕ್ಷದ ಅಭ್ಯರ್ಥಿ ಯಾರೆಂಬುದು ಖಚಿತವಲ್ಲ ಎಂದವರು ತಿಳಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ದಕ್ಷಿಣ ಕ್ಷೇತ್ರಕ್ಕೆ ಜಿಲ್ಲಾಧ್ಯಕ್ಷ ಯಶವಂತರಾವ್ ಅವರೇ ಅಭ್ಯರ್ಥಿ ಎಂದು ಘೋಷಿಸಿರುವುದರಿಂದ ಪಕ್ಷದಲ್ಲಿ ಗೊಂದಲವಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಯಾರಿಗೇ ಟಿಕೆಟ್ ಕೊಟ್ಟರೂ ಕಾರ್ಯಕರ್ತರು ವಿಚಲಿತರಾಗುವುದಿಲ್ಲ ಎಂದರು.
2013ರಲ್ಲಿ ಈ ಕ್ಷೇತ್ರದಲ್ಲಿ 66320 ಮತಗಳನ್ನು ಗಳಿಸಿ ಕಾಂಗ್ರೆಸ್ಸಿನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಭರ್ಜರಿ ಜಯ ದಾಖಲಿಸಿದ್ದರು. ಜೆಡಿಎಸ್ ನ ಕೆರೆಕಟ್ಟೆ ಸೈಯದ್ ಸೈಫುಲ್ಲಾ ಅವರಿಗೆ 26162 ಮತಗಳು ಸಿಕ್ಕಿತ್ತು. 2008ರಲ್ಲಿ ಎರಡನೇ ಸ್ಥಾನ ಗಳಿಸಿ ಉತ್ತಮ ಸ್ಪರ್ಧೆ ನೀಡಿದ್ದ ಬಿಜೆಪಿಯ ಯಶವಂತರಾವ್ ಜಾಧವ್ ಅವರ ಪರ ಬಿಎಸ್ ಯಡಿಯೂರಪ್ಪ ಅವರು ನಿಂತಿರುವುದು ಜಿಲ್ಲಾ ಬಿಜೆಪಿ ಘಟಕದಲ್ಲಿ ಗೊಂದಲ ಮೂಡಿಸಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications