ಜೆಡಿಯುನ 15 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಬಳ್ಳಾರಿ, ಏಪ್ರಿಲ್. 16 : ಕರ್ನಾಟಕ ವಿಧಾನಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಯುನ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಪ್ರಕಟ ಮಾಡಿದೆ. ಎರಡನೇ ಪಟ್ಟಿ ಏಪ್ರಿಲ್ 22 ರಂದು ಬಿಡುಗಡೆ ಆಗಲಿದೆ.
ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್ ಅವರು ಪಟ್ಟಿಯನ್ನು ಪ್ರಕಟಿಸಿದ್ದು, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಟಪಾಲ್ ಗಣೇಶ್, ಕೂಡ್ಲಿಗಿ ಎಸ್ಟಿ ವಿಧಾನಸಭಾ ಕ್ಷೇತ್ರದಿಂದ ಜಿ. ಈಶಪ್ಪ ಸ್ಪರ್ಧಿಸುತ್ತಿದ್ದಾರೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ಕುಮಾರ್ ನೇತೃತ್ವದ ಜೆಡಿಯು ನೇತೃತ್ವದಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು, ಸಮಾಜದ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಮಾಜಮುಖಿ ಚಿಂತನೆ ಉಳ್ಳವರಾಗಿದ್ದಾರೆ. ಕರ್ನಾಟಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ದುಡಿಯುವ ದೂರದೃಷ್ಟಿ ಉಳ್ಳವರು ಆಗಿದ್ದು, ಮತದಾರರು ಬೆಂಬಲಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ನಮ್ಮ ಪಕ್ಷದ ತತ್ವ, ಸಿದ್ಧಾಂತ ಮತ್ತು ನೀತಿಗಳನ್ನು ಮೆಚ್ಚಿಕೊಂಡಿರುವ ವಿವಿಧ ಪಕ್ಷಗಳ ಮುಖಂಡರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದು, ನಮ್ಮೊಂದಿಗೆ ಸಂಪರ್ಕದಲ್ಲಿ ಇದ್ದಾರೆ ಎಂದು ಮಹಿಮಾ ಜೆ. ಪಟೇಲ್ ತಿಳಿಸಿದ್ದಾರೆ.

- ಅರುಣಕುಮಾರ ಸಿ.ಪಾಟೀಲ- ಆಳಂದ,
- ಹಜರತ್ ಅಲಿ ಶೇಖ್- ಕುಂದಗೋಳ,
- ಟಪಾಲ್ ಗಣೇಶ್- ಬಳ್ಳಾರಿ ನಗರ,
- ಜಿ.ಎನ್.ತೋಟದ್- ನವಲಗುಂದ,
- ಡಿ.ಕೆ.ಹಿತ್ತಲಮನಿ- ರಾಣೆಬೆನ್ನೂರು,
- ವಿಜಯೇಂದ್ರ ರೆಡ್ಡಿ- ಚಿಕ್ಕನಾಯಕನಹಳ್ಳಿ,
- ಬಿ.ರಾಮಯ್ಯ- ನೆಲಮಂಗಲ,
- ರಾಜು ನಾಯಕ ವಾಡಿ- ಹುಬ್ಬಳ್ಳಿ ಸೆಂಟ್ರಲ್,
- ರಾಜೀವ್ ಕೋಟ್ಯಾನ್-ಕುಂದಾಪುರ
- ಪುರುಷೋತ್ತಮ ಎಸ್- ದೊಡ್ಡಬಳ್ಳಾಪುರ,
- ದೊಡ್ಡಪ್ಪ ಮಾಲಿ.ಪಾಟೀಲ್- ಗುರುಮಿಠಕಲ್
- ಎಸ್.ಎಸ್.ರಡ್ಡೇರ- ಗದಗ,
- ಎಚ್.ರಾಮಚಂದ್ರಪ್ಪ- ಹೊಳಲ್ಕೆರೆ
- ಜಿ.ಈಶಪ್ಪ-ಕೂಡ್ಲಗಿ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications