ಟಿಕೆಟ್ ಘೋಷಣೆಗೂ ಮುನ್ನ ಕಾಲಭೈರವೇಶ್ವರನ ಮೊರೆ ಹೋದ ಡಿಕೆ ಶಿವಕುಮಾರ್; ನಾಳೆ ಮೊದಲ ಪಟ್ಟಿ ಬಿಡುಗಡೆ

ಯುಗಾದಿ ಹಬ್ಬದಂದು ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಮಂಡ್ಯ, ಮಾರ್ಚ್‌ 21: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಡಿ.ಕೆ.ಶಿವಕುಮಾರ ಟಿಕೆಟ್ ಘೋಷಣೆಗೆ ಮುನ್ನ ಕಾಲಭೈರವೇಶ್ವರನ ಮೊರೆ ಹೋಗಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿರುವ ಕಾಲಭೈರವೇಶ್ವರ ಸ್ವಾಮಿ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನೂ ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

Karnataka Elections: First List Congress Candidates Released On March 22 Says DK Shivakumar

ಉರಿಗೌಡ, ನಂಜೇಗೌಡ ಅವರ ವಿಚಾರವಾಗಿ ಮಾತನಾಡಿದ ಅವರು, ನಾವ್ಯಾರೂ ಹೇಡಿಗಳಲ್ಲ. ಸಿ.ಟಿ ರವಿಯೇ ಉರಿಗೌಡ, ಅಶ್ವತ್ಥ ನಾರಾಯಣ ನಂಜೇಗೌಡ. ಅವರೇ ಹೊಸದಾಗಿ ಕಥೆ ಬರೆಯುತ್ತಿದ್ದಾರೆ. ಸಿನಿಮಾ ಮಾಡಲು ಮತ್ತೊಬ್ಬ ಸಿದ್ಧನಾಗಿದ್ದಾನೆ. ಇದು ಇಡೀ ಒಕ್ಕಲಿಗ ಸಮುದಾಯಕ್ಕೆ ಮಸಿ ಬಳಿಯುವ ಪ್ರಯತ್ನ. ನಾವು ಇದನ್ನು ಖಂಡಿಸುತ್ತೇವೆ.

ಈ ವಿಚಾರದಲ್ಲಿ ನಮ್ಮ ಸ್ವಾಮಿಗಳು ಹೋರಾಟದ ನಾಯಕತ್ವ ವಹಿಸಬೇಕೇ ಹೊರತು, ಯಾರನ್ನೋ ಕರೆದು ಸಂಧಾನ ಮಾಡಬಾರದು. ಈ ಸಮಾಜದ ಮಠದ ಪೀಠಾಧಿಪತಿಗಳಾಗಿ ಈ ವಿಚಾರದಲ್ಲಿ ಹೋರಾಟದ ನೇತೃತ್ವ ವಹಿಸುವುದು ಅವರ ಜವಾಬ್ದಾರಿ. ಒಕ್ಕಲಿಗರ ಸಂಘ, ಸಂಸ್ಥೆಗಳು ಸೇರಿದಂತೆ ಹಿಂದೂ ಧರ್ಮದ ಎಲ್ಲಾ ಮಠಾಧೀಶರನ್ನು ಸೇರಿಸಿಕೊಂಡು ಈ ರಾಷ್ಟ್ರದ್ರೋಹಿ, ಸಮಾಜದ್ರೋಹಿಗಳ ವಿರುದ್ಧ ಹೋರಾಟ ಮಾಡಬೇಕಿದೆ.

Karnataka Elections: First List Congress Candidates Released On March 22 Says DK Shivakumar

ನಮ್ಮದು ದೊಡ್ಡ ಸಮಾಜ. ಹೀಗಾಗಿ ನಾವು ಭಿಕ್ಷೆ ಬೇಡುವ ಅಗತ್ಯವಿಲ್ಲ. ನಮಗೆ ಛಲ, ಸ್ವಾಭಿಮಾನ ಇದೆ. ನಾವು ಯಾವ ರೀತಿ ಉತ್ತರ ನೀಡಬೇಕೋ ನೀಡುತ್ತೇವೆ. ಅವರು ಸಿನಿಮಾನಾದರೂ ಮಾಡಲಿ, ಏನಾದರೂ ಮಾಡಿಕೊಳ್ಳಲಿ. ಆದರೆ, ಈ ಭೂಮಿ ತಾಯಿಯ ಒಕ್ಕಲುತನ ಮಾಡಿ ಸ್ವಾಭಿಮಾನದಿಂದ ಬದುಕುತ್ತಿರುವ ಈ ಸಮುದಾಯಕ್ಕೆ ಅಪಮಾನ ಮಾಡುವುದು ಬೇಡ. ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತಂದರೆ ನಾವು ಸಹಿಸುವುದಿಲ್ಲ.

ಸಿನಿಮಾ ತೆಗೆಯುವ ವಿಚಾರದಲ್ಲಿ ಅವರಿಗೆ ಹಿನ್ನಡೆಯಾಯಿತೇ ಎಂದು ಕೇಳಿದ ಪ್ರಶ್ನೆಗೆ, 'ಅವರು ಯಾವ ಸಿನಿಮಾ ಬೇಕಾದರೂ ಮಾಡಲಿ. ಈ 40% ಕಮಿಷನ್ ಭ್ರಷ್ಟಾಚಾರ, ಕೋವಿಡ್ ಸಮಯದಲ್ಲಿ ಮಾಡಿದ ಅಕ್ರಮಗಳ ಬಗ್ಗೆ ಸಿನಿಮಾ ಮಾಡಲಿ ಸಾಕು ಎಂದರು.

Karnataka Elections: First List Congress Candidates Released On March 22 Says DK Shivakumar

ಉರಿಗೌಡ, ನಂಜೇಗೌಡರನ್ನು ಪಠ್ಯ ಪುಸ್ತಕಕ್ಕೆ ಸೇರಿಸುವ ವಿಚಾರವಾಗಿ ಮಾತನಾಡಿ, ವರು ಯಾರು ಎಂದು ಯಾರಿಗೂ ಗೊತ್ತಿಲ್ಲ. ನಿಮಗೆ ಪಾಠ ಮಾಡಿದ ಶಿಕ್ಷಕರನ್ನು ಕೇಳಿ. ಇಲ್ಲವೇ ಸಿ.ಟಿ ರವಿ ಹಾಗೂ ಅಶ್ವತ್ಥ್ ನಾರಾಯಣ ಅವರಿಗೆ ಪಾಠ ಮಾಡಿದ ಶಿಕ್ಷಕರನ್ನೇ ಕೇಳಿ. ಅವರಿಗೆ ಈ ಉರಿಗೌಡ, ನಂಜೇಗೌಡ ಯಾರು ಎಂದು ಗೊತ್ತಿಲ್ಲ ಎಂದರು.

ಡಿ.ಕೆ. ಸುರೇಶ್ ರಾಜ್ಯ ರಾಜಕಾರಣಕ್ಕೆ ಕುರಿತು ಮಾತನಾಡಿ, ಅವರನ್ನ ರಾಮನಗರದಲ್ಲಿ ಕಣಕ್ಕಿಳಿಸಲು ಪಕ್ಷದಲ್ಲಿ ಒತ್ತಡ ಇದೆ. ಆದರೆ ಅವರು ನಾನು ಲೋಕಸಭೆಯಲ್ಲಿ ಉಳಿಯುವುದಾಗಿ ಹೇಳಿದ್ದಾರೆ. ಹೀಗಾಗಿ ರಾಮನಗರದಲ್ಲಿ ಸ್ಥಳೀಯರನ್ನೇ ಅಭ್ಯರ್ಥಿ ಮಾಡುತ್ತೇವೆ ಎಂದರು.

ಚಿಂಚನಸೂರು ಅವರು ಪಕ್ಷ ಸೇರುತ್ತಾರಾ ಎಂಬ ಪ್ರಶ್ನೆಗೆ, 'ಅವರು ನನ್ನ ಜತೆ ಮಾತನಾಡಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರು ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿಯಾಗಲಿದ್ದಾರೆ ಎಂದು ತಿಳಿಸಿದರು.

ಚಿಂಚನಸೂರು ಹಾಗೂ ಅವರ ಪತ್ನಿ ಬಂದು ನಾವು ಇದೇ ಪಕ್ಷದಲ್ಲಿ ಇರುತ್ತೇವೆ ಎಂದು ಕಾಲಿಗೆ ಬಿದ್ದಿದ್ದರು ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಕುರಿತು ಮಾತನಾಡಿ, ಚಿಂಚನಸೂರು ಅವರನ್ನು ರಾಜಕೀಯವಾಗಿ ಬೆಳಸಿ ಮಂತ್ರಿ ಮಾಡಿದ್ದು ಕಾಂಗ್ರೆಸ್. ಕೆಲವು ಭಿನ್ನಾಭಿಪ್ರಾಯಗಳಿಂದ ಪಕ್ಷ ತೊರೆದಿದ್ದರು. ಈಗ ಅಲ್ಲಿ ರಾಜೀನಾಮೆ ನೀಡಿದ್ದಾರೆ. ಬೇಕಾದಷ್ಟು ಮಂದಿ ನಮ್ಮ ಪಕ್ಷದಿಂದ ಅವರ ಪಕ್ಷಕ್ಕೆ ಹೋಗಿದ್ದಾರೆ. ಅಶೋಕ್, ಯಡಿಯೂರಪ್ಪ ಅವರ ಬಗ್ಗೆ ಯಾರು ಏನೆಲ್ಲಾ ಮಾತನಾಡಿದ್ದರು.

ಯಡಿಯೂರಪ್ಪನವರ ಬಗ್ಗೆ ಬಿಜೆಪಿ ನಾಯಕರು ಇತ್ತೀಚೆಗೆ ಏನೆಲ್ಲಾ ಮಾತನಾಡುತ್ತಿದ್ದಾರೆ. ದೇವೇಗೌಡರ ಬಗ್ಗೆ ಎ. ಮಂಜು ಅವರು ಏನೆಲ್ಲಾ ಹೇಳಿದ್ದರು. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ನಾವು ಯಾರಿಗೂ ಒತ್ತಡ ಹಾಕಿಲ್ಲ. ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಭವಿಷ್ಯದ ಬೆಳಕು ಕಾಣುತ್ತಿದೆ. ಪುಟ್ಟಣ್ಣ ದಡ್ಡರೇ? ಜೆಡಿಎಸ್ ನಿಂದ ಅನೇಕ ಶಾಸಕರು, ಮಾಜಿ ಶಾಸಕರು, ಹಾಲಿ ಪರಿಷತ್ ಸದಸ್ಯರು ಪಕ್ಷ ಸೇರಿದ್ದಾರೆ. ಅವರು ಕೂಡ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಆಲೋಚಿಸಿ ತೀರ್ಮಾನಿಸುತ್ತಿದ್ದಾರೆ' ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+