Electricity Price: ಕನ್ನಡಿಗರಿಗೆ ಗುಡ್ನ್ಯೂಸ್, ಬರೋಬ್ಬರಿ 15 ವರ್ಷಗಳ ಬಳಿಕ ವಿದ್ಯುತ್ ದರ ಇಳಿಕೆ
ಬೆಂಗಳೂರು, ಏಪ್ರಿಲ್ 01: ಕರ್ನಾಟಕದ ಜನರಿಗೆ ಕರ್ನಾಟಕ ರಾಜ್ಯ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗವು ಸಿಹಿ ಸುದ್ದಿ ನೀಡಿದೆ. ಎಲ್ಲ ವರ್ಗದ ವಿದ್ಯುತ್ ಬಳಕೆದಾರರಿಗೆ ಖುಷಿ ನೀಡುವ ಸುದ್ದಿಯೊಂದು ಹೊರಬಿದ್ದಿದ್ದು, ಬರೋಬ್ಬರಿ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ.
ಗೃಹ ಬಳಕೆಯಲ್ಲಿ 100 ಯುನಿಟ್ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್ಗೆ 1.10 ರೂ. ಕಡಿಮೆ ಮಾಡಲಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಏಪ್ರಿಲ್ 01 ಸೋಮವಾರದಿಂದಲೇ ಜಾರಿಯಾಗಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್ ದರ ನಿಗದಿ ಮಾಡಲಾಗಿದೆ.

ಈ ಹಿಂದೆ ಪ್ರತಿ ಯುನಿಟ್ ಗೆ 0-100ರ ವರೆಗೆ 4.75 ಪೈಸೆ ಇತ್ತು. 100ರ ಮೇಲಿನ ಬಳಕೆಯ ಪ್ರತಿ ಯುನಿಟ್ಗೆ 7 ರೂಪಾಯಿ ದರ ನಿಗದಿ ಮಾಡಲಾಗಿತ್ತು. ಆದರೆ ಇಂದಿನಿಂದ ದರ ಪರಿಷ್ಕರಣೆ ಮಾಡಲಾಗಿದ್ದು, 100 ಯುನಿಟ್ ಮೇಲಿನ ಬಳಕೆದಾರರ ಪ್ರತಿ ಯುನಿಟ್ಗೆ 5.90 ರೂಪಾಯಿ ಮಾತ್ರ ಪಾವತಿ ಮಾಡಬೇಕಾಗಿದೆ.
ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆ ಗೃಹಜ್ಯೋತಿ ಜಾರಿಯಲ್ಲಿದೆ. ಈ ಯೋಜನೆಯ ಪ್ರಕಾರ 200 ಯುನಿಟ್ ಒಳಗೆ ಬಳಸುವವರಿಗೆ ಸರ್ಕಾರ ಉಚಿತ ವಿದ್ಯುತ್ ನೀಡುತ್ತಿದೆ. ಹೀಗಾಗಿ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ ಎಂದು ವರದಿಯಾಗಿದೆ.
ಹೀಗಾಗಿ 200 ಯುನಿಟ್ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ವಿದ್ಯುತ್ ದರ ಕಡಿಮೆಯಾಗಲಿದೆ. ಮುಖ್ಯವಾದ ವಿಚಾರವೆಂದರೆ ಪರಿಷ್ಕೃತ ದರದ ಬಿಲ್ ಗ್ರಾಹಕರಿಗೆ ಏಪ್ರಿಲ್ನಲ್ಲಿ ಬರುವ ಬಿಲ್ನಲ್ಲಿ ಬರುವುದಿಲ್ಲ. ಬದಲಾಗಿ ಮೇ ತಿಂಗಳಿನಲ್ಲಿ ಬರುವ ಬಿಲ್ನಲ್ಲಿ ಈ ದರ ಅನ್ವಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications