ಚಿಕ್ಕಮಗಳೂರು: ಕಾಡೆಮ್ಮೆ ಹೋಯ್ತು, ಕಾಡಾನೆ ಬಂತು..!
Recommended Video

ಚಿಕ್ಕಮಗಳೂರು, ಜುಲೈ.19: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದ ಸಮೀಪ ವಾಟೆಕಾನ್ ಎಂಬಲ್ಲಿ ಆನೆ ಪ್ರತ್ಯಕ್ಷವಾಗಿದೆ. ಏಕಾಏಕಿ ಕಾಫಿತೋಟದಿಂದ ಗ್ರಾಮದ ರಸ್ತೆಗೆ ಆನೆ ನುಗ್ಗಿದ್ದನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ರವಿ ಎಂಬುವವರ ತೋಟಕ್ಕೆ ನುಗ್ಗಿದ ಆನೆ ಕೆಲಕಾಲ ಅಲ್ಲಿಯೇ ಘರ್ಜಿಸಿದ್ದು, ಗ್ರಾಮಸ್ಥರನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಬೆಳಗ್ಗೆಯಿಂದ ಸಂಜೆವರೆಗೂ ಕಾಫಿ ತೋಟದಲ್ಲೇ ಬೀಡು ಬಿಟ್ಟಿದ್ದ ಕಾಡಾನೆ, ರಸ್ತೆ ದಾಟಿ ಕಾಫಿ ತೋಟದ ಒಳಗೆ ಪ್ರಯಾಣ ಮಾಡುವಾಗ ಗ್ರಾಮದ ಯುವಕರು ಗಜರಾಜನ ಚಿತ್ರವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ.
ಕೆಲವು ಗಂಟೆಗಳ ಕಾಲ ಆನೆಯನ್ನು ಕಂಡು ಗ್ರಾಮಸ್ಥರು ಹಾಗೂ ವಾಹನ ಸವಾರರು ಭಯಭೀತರಾಗಿದ್ದರು. ಆದರೆ ಕೆಲ ಸಮಯದ ನಂತರ ಆನೆ ಎಲ್ಲಿಯೂ ಕಾಣಿಸಿಕೊಂಡಿಲ್ಲ.

ಆನೆ ಕಾಫಿ ತೋಟಕ್ಕೆ ನುಗ್ಗಿದ್ದರಿಂದ ಕಾಫಿ ಗಿಡಗಳೆಲ್ಲಾ ನಾಶವಾಗಿವೆ. ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಿನ್ನೆ ಬುಧವಾರ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಬಳಿ ಬೆಳಗ್ಗೆ 11 ಗಂಟೆ ಸುಮಾರಿಗೆ ಏಕಾಏಕಿ ಕಾಡೆಮ್ಮೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದರು. ಕಾಫಿತೋಟದ ಮೂಲಕ ಊರಂಚಿಗೆ ಬಂದ ಕಾಡೆಮ್ಮೆಯನ್ನು ಓಡಿಸಲು ಗ್ರಾಮಸ್ಥರು ಕೆಲ ಕಾಲ ಹರಸಾಹಸಪಟ್ಟಿದ್ದರು.

ಇನ್ನು ಕೆಲ ಯುವಕರು ಅಪರೂಪದ ಅತಿಥಿ ಗ್ರಾಮಕ್ಕೆ ಲಗ್ಗೆ ಇಟ್ಟಿದ್ದನ್ನು ಕಂಡು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದು ಎಂಜಾಯ್ ಮಾಡಿದ್ದರು. ಕಾಡೆಮ್ಮೆ ಬೆಳಗ್ಗೆಯಿಂದ ಗ್ರಾಮದಲ್ಲಿ ಬೀಡು ಬಿಟ್ಟಿದ್ದು, ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡೆಮ್ಮೆ ಓಡಿಸಲು ಹರಸಾಹಸ ಪಡುತ್ತಿದ್ದರು. ಇದೀಗ ಕಾಡಾನೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಶುರುವಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications