ಕರ್ನಾಟಕದ 11 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಆಗಸ್ಟ್ 07: ಕೆಎಎಸ್ ಅಧಿಕಾರಿಗಳನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಿದ್ದ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಈಗ 11 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಗುರುವಾರ ಸಂಜೆ ಆದೇಶ ಹೊರಡಿಸಿದೆ.
ಜುಲೈ 23ರಂದು 18 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು, ಈ ಪೈಕಿ ಹರ್ಷ ಗುಪ್ತಾ, ಶ್ರೀವತ್ಸ ಕೃಷ್ಣ ಅವರ ವರ್ಗಾವಣೆ ಸರ್ಕಾರದ ತಪ್ಪು ನಡೆಗೆ ಸಾಕ್ಷಿಯಾಗಿದೆ. ಹರ್ಷ ಗುಪ್ತಾ ಅವರನ್ನು ಮೈಸೂರು ಕಾಗದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. [ಪೂರ್ಣ ವಿವರ ಇಲ್ಲಿದೆ]
ಈ ಬಾರಿ ವರ್ಗಾವಣೆಗೊಂಡವರ ಪೈಕಿ ಅಜಯ ಸೇಠ್ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಗೊಂಡಿದ್ದಾರೆ. ಎಂ.ವಿ.ಜಯಂತಿ,ಅಂಜುಮ್ ಪರ್ವೆಜ್, ಪಲ್ಲವಿ ಆಕರಾತಿ ಅವರ ವರ್ಗಾವಣೆ ಗಮನ ಸೆಳೆಯುತ್ತದೆ.

ವರ್ಗಾವಣೆಗೊಂಡ ಅಧಿಕಾರಿಗಳ ಹೆಸರು ಹಾಗೂ ಹುದ್ದೆಗಳ ವಿವರ:
* ಅಜಯ ಸೇಠ್-ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಬೆಂಗಳೂರು.
* ಡಾ.ಪಿ.ಸಿ.ಜಾಫರ್-ರಿಜಿಸ್ಟ್ರಾರ್, ಲೋಕಾಯುಕ್ತ, ಬೆಂಗಳೂರು.
* ಎಂ.ವಿ.ಜಯಂತಿ-ಪ್ರಾದೇಶಿಕ ಆಯುಕ್ತೆ, ಬೆಂಗಳೂರು ವಿಭಾಗ, ಬೆಂಗಳೂರು.
* ಅಂಜುಮ್ ಪರ್ವೆಜ್-ವ್ಯವಸ್ಥಾಪಕ ನಿರ್ದೇಶಕ. ಕೃಷ್ಣಾ ಭಾಗ್ಯ ಜಲ ನಿಗಮ, ಬೆಂಗಳೂರು.
* ಆರ್.ಆರ್.ಜನ್ನು- ಆಯುಕ್ತ, ಧಾರ್ವಿುಕ ದತ್ತಿ ಇಲಾಖೆ ಮತ್ತು ಹೆಚ್ಚುವರಿ ಕಾರ್ಯದರ್ಶಿ, ಕಂದಾಯ ಇಲಾಖೆ, ಬೆಂಗಳೂರು.
* ಖುಷ್ಬೂ ಗೋಯಲ್ ಚೌಧರಿ-ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಧಾರವಾಡ.
* ರಮಣದೀಪ್ ಚೌಧರಿ-ಜಿಲ್ಲಾಧಿಕಾರಿ, ಕೊಪ್ಪಳ.
* ಪಲ್ಲವಿ ಆಕರಾತಿ-ಜಿಲ್ಲಾಧಿಕಾರಿ, ತುಮಕೂರು.
* ಎಸ್.ಎಸ್. ನಕುಲ್-ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಬಳ್ಳಾರಿ.
* ಡಿ.ಎಸ್.ರಮೇಶ್- ಯೋಜನಾ ನಿರ್ದೇಶಕ, ರಾಜ್ಯ ನೀರು ಮತ್ತು ಒಳಚರಂಡಿ ಯೋಜನೆ, ಬೆಂಗಳೂರು.
* ಎಂ.ಜಿ.ಹಿರೇಮಠ-ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಬಾಗಲಕೋಟೆ.
More From
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications