ಅಗಲಿದ ನಿಷ್ಠಾವಂತ ಅಧಿಕಾರಿಗೆ ಕಣ್ಣೀರಾದ ಕರ್ನಾಟಕ
Recommended Video

ಬೆಂಗಳೂರು, ಡಿಸೆಂಬರ್ 29: ಕೆಲವರ ಸಾವನ್ನು ಅರಗಿಸಿಕೊಳ್ಳುವುದು ಕಷ್ಟ.
ಲೋಕಾಯುಕ್ತ ಸಂಸ್ಥೆಯಲ್ಲಿದ್ದಾಗ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನ ಎನಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ(47) ಅನಾರೋಗ್ಯದಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದಾಗಲೇ ಇಡೀ ರಾಜ್ಯವೂ ಅವರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿತ್ತು.
ಆದರೆ ಯಾರ ಪ್ರಾರ್ಥನೆಯೂ ಫಲಿಸದೆ ಅವರು ಇಹಲೋಕ ತ್ಯಜಸಿದರು. ಎಚ್ 1 ಎನ್ 1 ಖಾಯಿಲೆಯಿಂದ ಬಳಲುತ್ತಿದ್ದ ಶೆಟ್ಟಿ ಅವರಿಗೆ ಹೈದರಾಬಾದಿನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದು, ದಿಟ್ಟ ಅಧಿಕಾರಿಯನ್ನು ನೆನೆದು ಅವರ ಅಭಿಮಾನಿಗಳೂ ಕಣ್ಣೀರಾಗಿದ್ದಾರೆ.
|
ಐಪಿಎಸ್ ನಿಮ್ಮ ಬಗ್ಗೆ ನಮಗೆ ಹೆಮ್ಮೆಯಿದೆ
ಐಪಿಎಸ್ ನ ಒಂದು ರತ್ನ ಮಧುಕರ್ ಶೆಟ್ಟಿ. ಕರ್ನಾಟಕದ ಅಕ್ರಮ ಗಣಿಗಾರಿಕೆಯ ವಿರುದ್ಧ ಯಶಸ್ವಿಯಾಗಿ ಹೋರಾಡಿದ ಅವರಿಗೆ ವಿಧಿ ಬರಹದ ವಿರುದ್ಧ ಹೋರಾಡಲು ಸಾಧ್ಯವಾಗಲಿಲ್ಲ! ನಮಗೆಲ್ಲರಿಗೂ ನಿಮ್ಮ ಬಗ್ಗೆ ಹೆಮ್ಮೆ ಇದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ- ಸಂದೀಪ್ ಮಿತ್ತಲ್ ಐಪಿಎಸ್
|
ಪೊಲೀಸ್ ಮಾತ್ರವಲ್ಲ, ಒಬ್ಬ ಅತ್ಯುತ್ತಮ ಮನುಷ್ಯ
ಅವರು ಕೇವಲ ಒಬ್ಬ ಅತ್ಯುತ್ತಮ ಐಪಿಎಸ್ ಅಧಿಕಾರಿ ಮಾತ್ರವಲ್ಲ. ಒಮ್ಮೆ ಅತ್ಯುತ್ತಮ ಮನುಷ್ಯ ಸಹ. ಅವರೊಂದಿಗೆ ತರಬೇತಿ ಪಡೆದಿದ್ದು ನಮ್ಮ ಭಾಗ್ಯ. ಓಂ ಶಾಂತಿ ಎಂದಿದ್ದಾರೆ ಅಮಿತಾಭ್ ಠಾಕೂರ್
|
ಒಳ್ಳೆಯವರನ್ನು ದೇವರು ಬೇಗ ಕರೆದುಕೊಳ್ಳುತ್ತಾನೆ!
ಒಳ್ಳೆಯ ವ್ಯಕ್ತಿಗಳನ್ನು ದೇವರು ಬೇಗ ಕರೆದುಕೊಳ್ಳುತ್ತಾನೆ. ಪ್ರಾಮಾಣಿಕ, ಧೈರ್ಯವಂತ ಮತ್ತು ಜನಪರ ಪೊಲೀಸ್ ಅಧಿಕಾರಿ ಮಧುಕರ ಶೆಟ್ಟಿಯವರ ಅಕಾಲಿಕ ಮರಣ ಅದನ್ನು ಸಾಬೀತುಪಡಿಸಿದೆ. 2018 ರ ದುರಂತ ಇದು ಎಂದಿದ್ದಾರೆ ವೈಭವ್ ಮಿಶ್ರಾ.
|
ಪ್ರಾಮಾಣಿಕರು ಹೀಗೆ ಹೋಗುವುದು ದುರಂತ!
ನಮ್ಮವರಿಗೆ UPSC ವಿಚಾರದಲ್ಲಿ ಮಾಹಿತಿ ಕಡಿಮೆ, ಬಹಳ ಬೇಗ ಖಾಸಗಿ ವೃತ್ತಿಪರ ಶಿಕ್ಷಣಕ್ಕೆ ಪೂರಕ ವ್ಯವಸ್ಥೆಯ ಹುಟ್ಟು ಒಂದು ಕಾರಣವಿರಬಹುದು. ಹಾಗಾಗಿ ಅದರ ಬೆನ್ನತ್ತಿ ಹೋಗುವವರು ಕಡಿಮೆ, ಪಾಸಾಗುವವರು ಇನ್ನೂ ಕಡಿಮೆ,ಸ್ವಂತ ರಾಜ್ಯಕ್ಕೆ ಕ್ಯಾಡರ್ ಆಗುವ, ದಕ್ಷರು ಬೆರಳೆಣಿಕೆ ಮಾತ್ರ. ಅಂತವರು ಹೀಗೆ ಹೋಗುವುದು ದುರಂತ ಎಂದಿದ್ದಾರೆ ಕಿರಣ್
|
ರಾಜಕಾರಣಿಗಳದ್ದು ಮೊಸಳೆ ಕಣ್ಣೀರು
ಈ ವ್ಯಕ್ತಿ ಸಮಾಜಕ್ಕಾಗಿ ಕೆಲಸ ಮಾಡಿದರು, ಆದರೆ ಸಮಾಜ ಅವರ ವೃತ್ತಿಬದುಕನ್ನು ಕಿತ್ತುಕೊಂಡಿತು! ಭಾರತದಲ್ಲಿ ಪ್ರಾಮಾಣಿಕತೆಗೆ ಬೆಲೆಯಿಲ್ಲ. ತಥಾಕಥಿತ ರಾಜಕಾರಣಿಗಳು ಈಗ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ! ಮಧುಕರ್ ಶೆಟ್ಟಿ ಅವರೇ, ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ ಕೇಶವ್ ಎಂಬುವವರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications