ಅಂಬ್ಯುಲೆನ್ಸ್ಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು, ನ.9: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಆಂಬ್ಯುಲೆನ್ಸ್ಗಳ ತಡೆ ರಹಿತ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅಂಬ್ಯುಲೆನ್ಸ್ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ. ಅಲ್ಲದೆ, ಈವರೆಗೆ ಜಿಪಿಎಸ್ ಅಳವಡಿಸದ ಎಷ್ಟು ಅಂಬ್ಯುಲೆನ್ಸ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿಯನ್ನು ನೀಡುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ.
ತಯಾರಿಕೆ ವೇಳೆಯೇ ಪೂರ್ವಭಾವಿಯಾಗಿ ಆಂಬ್ಯುಲೆನ್ಸ್ಗಳಿಗೆ ಜಿಪಿಎಸ್ ಅಳವಡಿಸುವಂತೆ ರಾಜ್ಯದಲ್ಲಿರುವ ಆಂಬ್ಯುಲೆನ್ಸ್ ತಯಾರಿಕರಿಗೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಇದೇ ವೇಳೆ ಸರ್ಕಾರಕ್ಕೆ ಸಲಹೆ ನೀಡಿದೆ.
ಭಾರತ್ ಪುನರುತ್ಥಾನ ಟ್ರಸ್ಟ್ ರಾಜ್ಯದಲ್ಲಿರುವ ಎಲ್ಲಾ ಆಂಬ್ಯುಲೆನ್ಸ್ಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಳೆ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ಹಾಗೆಯೇ, ಆಂಬ್ಯುಲೆನ್ಸ್ಗಳ ನೋಂದಣಿ ವೇಳೆಯೇ ಜಿಪಿಎಸ್ ಅಳವಡಿಕೆ ಕಡ್ಡಾಯ ಮಾಡುವ ಸಂಬಂಧ ನಿಗದಿತ ನಿಯಮಗಳಿಗೆ ತಿದ್ದುಪಡಿ ತರಲಾಗಿದೆಯೇ ಅಥವಾ ಈ ಕುರಿತು ಸಕ್ಷಮ ಸಾರಿಗೆ ಪ್ರಾಧಿಕಾರಗಳು ಯಾವುದಾದರೂ ನಿರ್ದಿಷ್ಟ ಸುತ್ತೋಲೆ ಹೊರಡಿಸಿವೆಯೇ? ಎಂಬ ಬಗ್ಗೆ ಮೂರು ವಾರದಲ್ಲಿ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿರುವ ಹೈಕೋರ್ಟ್, ಡಿ.2ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.
ಸರ್ಕಾರಿ ವಕೀಲರು, ರಾಜ್ಯದಲ್ಲಿರುವ ಆಂಬುಲೆನ್ಸ್ಗಳಿಗೆ ಜಿಪಿಎಸ್ ಅಳವಡಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿ ಸಾರಿಗೆ ಮತ್ತು ಪ್ರಾದೇಶಿಕ ರಸ್ತೆ ಸುರಕ್ಷಿತ ಅಧಿಕಾರಿಗಳಿಗೆ ಮಾಸಿಕ ಪ್ರಗತಿ ವರದಿ ಸಲ್ಲಿಸುವಂತೆ 2020ರ ಮಾ.4ರಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ಹೈಕೋರ್ಟ್ಗೆ ಮಾಹಿತಿ ನೀಡಿದರು.
ಸುತ್ತೋಲೆ ಆಧರಿಸಿ ಕ್ರಮವೇನು?: ಸರ್ಕಾರ ವಾದ ಆಲಿಸಿದ ನ್ಯಾಯಪೀಠ, ಹಾಗಿದ್ದರೆ 2020ರ ಮಾ.4ರಂದು ಹೊರಡಿಸಿರುವ ಸುತ್ತೋಲೆ ಅನುಸಾರ ಇದುವರೆಗೆ ಎಷ್ಟು ವರದಿಗಳನ್ನು ಸಲ್ಲಿಸಲಾಗಿದೆ? ಒಂದೊಮ್ಮೆ ವರದಿ ಸಲ್ಲಿಕೆಯಾಗಿದ್ದರೆ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ದತ್ತಾಂಶಗಳನ್ನು ಸಂಗ್ರಹಿಸಿದ್ದಾರೆಯೇ ಎಂದು ಕೇಳಿತು.
ದತ್ತಾಂಶ ನಿರ್ವಹಣೆ ಮಾಡಿದ್ದರೆ ಮ್ಯಾನುಯೆಲ್ ಅಥವಾ ಡಿಟಿಟಲ್ ಆಗಿ ಸಂಗ್ರಹಿಸಲಾಗಿದೆಯೇ? ಆ ದತ್ತಾಂಶಗಳನ್ನು ಪರಿಶೀಲಿಸಿದಾಗ ಯಾವುದಾದರೂ ಆಂಬ್ಯುಲೆನ್ಸ್ಗಳು ಜಿಪಿಎಸ್ ಅಳವಡಿಸದಿರುವುದು ಕಂಡು ಬಂದಿದ್ದರೆ, ಅವುಗಳ ವಿರುದ್ಧ ಆಯುಕ್ತರು ಯಾವ ಕ್ರಮ ಕೈಗೊಂಡಿದ್ದಾರೆ? ಖಾಸಗಿ ಅಥವಾ ಸರ್ಕಾರಿ ಆಂಬ್ಯುಲೆನ್ಸ್ ನಿರ್ವಹಣೆದಾರರಿಗೆ ಏನಾದರೂ ಸಂವಹನ ಪತ್ರ ಕಳುಹಿಸಲಾಗಿದೆಯೇ? ಎಂದು ಸರ್ಕಾರ ಮಾಹಿತಿ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications