ಆತ್ಮಹತ್ಯೆಗೆ ಶರಣಾದ ಎಂಡೋಸಲ್ಫಾನ್ ಪೀಡಿತೆ
ಉಡುಪಿ, ನವೆಂಬರ್ 21 : ಎಂಡೋಸಲ್ಫಾನ್ ಪೀಡಿತ ಯುವತಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಪರಿಹಾರ ಹಣ, ಮಾಸಾಶನ ಹೆಚ್ಚಳ, ಉಚಿತ ಚಿಕಿತ್ಸೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎರಡು ದಿನಗಳ ಹಿಂದೆ ಎಂಡೋಸಲ್ಫೋನ್ ಸಂತ್ರಸ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
ಕುಂದಾಪುರ ತಾಲೂಕಿನ ಬೆಳ್ವೆ ಸಮೀಪದ ಆರ್ಡಿಯ ನಿವಾಸಿ ರೀತಾ ಶೆಟ್ಟಿ (21) ಮನೆ ಸಮೀಪದಲ್ಲಿನ ಬಾವಿಗೆ ಹಾರಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಡೋಸಲ್ಫಾನ್ ಪೀಡಿತೆಯಾಗಿದ್ದ ರೀತಾ ನಿತ್ಯಕರ್ಮ ಮಾಡುವುದಕ್ಕೂ ಮನೆಯವರನ್ನು ಅವಲಂಭಿಸಬೇಕಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. [ಎಂಡೋಸಲ್ಫಾನ್ ಸಂತ್ರಸ್ತರು ಸರ್ಕಾರದ ಮುಂದಿಟ್ಟ ಬೇಡಿಕೆಯೇನು?]

ರೀತಾ ಆರ್ಡಿಯ ಸುರೇಂದ್ರ ಶೆಟ್ಟಿ ಅವರ ಮಗಳು. ಈಕೆ ಎಂಡೋಸಲ್ಪಾನ್ ಪೀಡಿತೆಯಾಗಿದ್ದು ಕೈ ಮತ್ತು ಕುತ್ತಿಗೆಯ ಸ್ವಾಧೀನ ಕಳೆದುಕೊಂಡಿದ್ದಳು. ತಂದೆಯ ನೆರವಿನಿಂದ ಎಸ್ಎಸ್ಎಲ್ಸಿ ಓದಿದ್ದ ರೀತಾ ಸರ್ಕಾರದಿಂದ 3 ಸಾವಿರ ಮಾಸಿಕ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದರು. [ದಕ್ಷಿಣ ಕನ್ನಡದ ಎಂಡೋ ಪೀಡಿತರಿಗೆ ಉಚಿತ ಚಿಕಿತ್ಸೆ]
ಪ್ರತಿಭಟನೆ ನಡೆಸಿದ್ದರು : ನವೆಂಬರ್ 19ರಂದು ಪರಿಹಾರ ಹಣ, ಮಾಸಾಶನ ಹೆಚ್ಚಳ, ಉಚಿತ ಚಿಕಿತ್ಸೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಂಡೋಸಲ್ಫೋನ್ ಪೀಡಿತರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications