ಸೂತಕದ ಮನೆಯಲ್ಲಿ ಡಿಕೆಶಿ, ಎಚ್ಡಿಕೆ ಪರಸ್ಪರ ಎದುರಾದಾಗ!
ರಾಜ್ಯ ರಾಜಕಾರಣದಲ್ಲಿ ಉತ್ತರ ಪಶ್ಚಿಮದಂತಿರುವ ಎಚ್ ಡಿ ಕುಮಾರಸ್ವಾಮಿ ಮತ್ತು ಡಿ ಕೆ ಶಿವಕುಮಾರ್, ಸೂತಕದ ಮನೆಯಲ್ಲಿ ರಾಜಕೀಯ ಮಾಡದೇ, ಆತ್ಮೀಯತೆಯಿಂದ ಮಾತನಾಡಿ ನೆರೆದಿದ್ದವರು ಹುಬ್ಬೇರಿಸುವಂತೆ ಮಾಡಿದರು.
ರಾಮನಗರ, ಜುಲೈ 23: ಸೂತಕದ ಮನೆಯಲ್ಲೂ ರಾಜಕೀಯ ಮೇಲಾಟ ನಡೆಸುವ ಅದೆಷ್ಟೋ ಘಟನೆಗಳು ನಮ್ಮ ಮುಂದಿವೆ.
ರಾಜ್ಯ ರಾಜಕಾರಣದಲ್ಲಿ ಉತ್ತರ ಪಶ್ಚಿಮದಂತಿರುವ ದೇವೇಗೌಡ್ರ ಕುಟುಂಬ ಮತ್ತು ಡಿ ಕೆ ಶಿವಕುಮಾರ್, ಸೂತಕದ ಮನೆಯಲ್ಲಿ ರಾಜಕೀಯ ಮಾಡದೇ, ಆತ್ಮೀಯತೆಯಿಂದ ಮಾತನಾಡಿ ನೆರೆದಿದ್ದವರು ಹುಬ್ಬೇರಿಸುವಂತೆ ಮಾಡಿದರು.

ರಾಮನಗರ ತಾಲೂಕಿನ ಹುಣಸೇನಹಳ್ಳಿಯ ನಿವಾಸಿಯಾಗಿರುವ ನಂಜಪ್ಪನವರು ಶುಕ್ರವಾರ (ಜುಲೈ 21) ವಿಧಿವಶರಾಗಿದ್ದರು. ಶನಿವಾರ ನಡೆದ ಇವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಇಂಧನ ಸಚಿವ ಡಿ ಕೆ ಶಿವಕುಮಾರ್ ಆಗಮಿಸಿದ್ದರು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ನಂಜಪ್ಪನವರಿಗೆ ಅಂತಿಮ ನಮನ ಸಲ್ಲಿಸಿ ಡಿಕೆಶಿ ಹೊರಡುವ ವೇಳೆ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಥಳಕ್ಕೆ ಆಗಮಿಸುತ್ತಿದ್ದರು. ಕುಮಾರಸ್ವಾಮಿ ಬರುತ್ತಿರುವುದನ್ನು ಗಮನಿಸಿದ ಡಿ ಕೆ ಶಿವಕುಮಾರ್, ಕಾರಿನಿಂದ ಇಳಿದು ಕುಮಾರಸ್ವಾಮಿ ಬಳಿ ಹೋದರು.
ಕುಮಾರಸ್ವಾಮಿ ಕಾರು ಬಳಿ ಹೋಗಿ, ಕೈಕುಲುಕಿ ಕೆಲ ನಿಮಿಷ ಇಬ್ಬರೂ ನಾಯಕರು ಆತ್ಮೀಯತೆಯಿಂದ ಮಾತನಾಡಿಸಿದರು. ನಂತರ ಡಿ ಕೆ ಶಿವಕುಮಾರ್ ಬೆಂಗಳೂರು ಕಡೆ ತೆರಳಿದರೆ, ಕುಮಾರಸ್ವಾಮಿ ಮೃತ ನಂಜಪ್ಪನವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟರು.
ಇಬ್ಬರೂ ನಾಯಕರು ಒಬ್ಬರೊನ್ನಬ್ಬರು ಎದುರಾದಾಗ ಗುಸುಗುಸು ಮಾತನಾಡಲು ಆರಂಭಿಸಿದ ಸ್ಥಳೀಯರು, ಇಬ್ಬರೂ ಆತ್ಮೀಯತೆಯಿಂದ ಮಾತನಾಡುತ್ತಿದ್ದಾಗ ಆಶ್ಚರ್ಯಚಕಿತರಾಗಿ ನೋಡುತ್ತಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications