Get Updates
Get notified of breaking news, exclusive insights, and must-see stories!

ಸ್ಮಾರ್ಟ್‌ಮೀಟರ್ ಟೆಂಡರ್‌ ಪ್ರಕ್ರಿಯೆಯಲ್ಲಿ ಬೃಹತ್‌ ಭ್ರಷ್ಟಾಚಾರ ಆರೋಪ: ಸ್ಪಷ್ಟನೆ ನೀಡಿದ ಕೆ ಜೆ ಜಾರ್ಚ್‌

ಬೆಂಗಳೂರು, ಮಾರ್ಚ್‌ 26: ಸ್ಮಾರ್ಟ್‌ಮೀಟರ್ ಟೆಂಡರ್‌ ಪ್ರಕ್ರಿಯೆಯಲ್ಲಿ ಬೃಹತ್‌ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ. ಈ ಸ್ಮಾರ್ಟ್‌ಮೀಟರ್ ಟೆಂಡರ್ ಕುರಿತು ಇಂಧನ ಸಚಿವರಾದ ಕೆ ಜೆ ಜಾರ್ಚ್‌ ಅವರು ಪ್ರತಿಕ್ರಿಯಿಸಿದ್ದು, ಸ್ಮಾರ್ಟ್‌ಮೀಟರ್ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ, ಈ ಕುರಿತ ಬಿಜೆಪಿಯ ಆರೋಪಗಳಲ್ಲಿ ಹುರಳಿಲ್ಲ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ ಜೆ ಜಾರ್ಜ್‌ ಅವರು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ ಸಿ) ಆದೇಶದಂತೆ ರಾಜ್ಯದಲ್ಲಿ ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಮಾತ್ರ ಮೀಟರ್ ಅಳವಡಿಸಲಾಗುತ್ತಿದೆ. ಅದಕ್ಕಾಗಿ ಕೆಟಿಪಿಪಿ ಕಾಯ್ದೆ ಅನುಸಾರ ಟೆಂಡರ್ ಕರೆದು ನಂತರ ಪ್ರಿಬಿಡ್‌ ಸಭೆಯಲ್ಲಿ ಆಸಕ್ತ ಬಿಡ್ಡುದಾರರ ಪ್ರಶ್ನೆಗಳಿಗೆ ಉತ್ತರಿಸಲಾಗಿತ್ತು. ಬಳಿಕ ಅತಿ ಕಡಿಮೆ ಬಿಡ್ ಮಾಡಿದ್ದ ರಾಜಶ್ರೀ ಎಂಟರ್ ಪ್ರೈಸಸ್‌ನವರಿಗೆ ಗುತ್ತಿಗೆ ನೀಡಲಾಗಿದೆ ಎಂದು ಹೇಳಿದರು.

Energy Minister KJ George Asserts Transparency in Smart Meter Tender Process

ಬಿಜೆಪಿಯವರು ವಿಧಾನಸಭೆಯಲ್ಲಿ ಸ್ಮಾರ್ಟ್ ಮೀಟರ್ ಪ್ರಸ್ತಾಪಿಸಿದಾಗ ಉತ್ತರ ಕೊಡುವುದಾಗಿ ಹೇಳಿದ್ದೆ. ಅದರಂತೆ ಮಾರನೇ ದಿನ ಉತ್ತರ ಕೊಡಲು ಸಿದ್ಧವಾಗಿಯೇ ಬಂದು ಕಲಾಪ ಆರಂಭವಾಗುವಾಗ ಅವಕಾಶ ಕೇಳಿದ್ದೆ. ಆದರೆ, ಸಭಾಧ್ಯಕ್ಷರು ಬಜೆಟ್ ಕುರಿತ ಚರ್ಚೆಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಉತ್ತರಿಸಿದ ಬಳಿಕ ನನಗೆ ಉತ್ತರಿಸಲು ಅವಕಾಶ ನೀಡುವುದಾಗಿ ಹೇಳಿದರು. ಆದರೆ, ಮುಖ್ಯಮಂತ್ರಿಗಳ ಉತ್ತರದ ವೇಳೆಯೇ ಬಿಜೆಪಿಯವರು ಗದ್ದಲ ಮಾಡಿ ಕಲಾಪ ನಡೆಸಲು ಅವಕಾಶ ಕೊಡಲಿಲ್ಲ. ಗಲಾಟೆ ಮಾಡಿ ಉತ್ತರ ಕೊಡಲೂ ಅವಕಾಶ ನೀಡಲಿಲ್ಲ. ಹಾಗಾಗಿ ನನಗೆ ಉತ್ತರ ನೀಡಲು ಸಾಧ್ಯವಾಗಲಿಲ್ಲ. ಇದನ್ನು ಮುಚ್ಚಿಟ್ಟು ಬಿಜೆಪಿಯವರು ನನ್ನ ಮೇಲೆ ವೃಥಾರೋಪ ಮಾಡುತ್ತಿದ್ದಾರೆ ಎಂದರು.

Take a Poll

ಕೇಂದ್ರ ಸರ್ಕಾರದ ಪರಿಷ್ಕೃತ ವಿತರಣಾ ವಲಯ ಯೋಜನೆ (ಆರ್ ಡಿಎಸ್ಎಸ್) ಜಾರಿಗೊಳಿಸಿದ್ದರೆ ಅಥವಾ ಕೇಂದ್ರ ಸರ್ಕಾರದ ನಿರ್ದೇಶನದಂತೆ ನಾವು ಮುಂದುವರಿದಿದ್ದರೆ ಹೊಸ ಮತ್ತು ತಾತ್ಕಾಲಿಕ ಸ್ಥಾಪನಗಳ ಜತೆಗೆ ಹಾಲಿ ಸ್ಥಾಪನಗಳಿಗೂ (2.16 ಕೋಟಿ) ಸ್ಮಾರ್ಟ್ ಮೀಟರ್ ಅಳವಡಿಸಬೇಕಿತ್ತು. ಆದರೆ, ಗ್ರಾಹಕರ ಮೇಲೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಅದನ್ನು ಜಾರಿಗೊಳಿಸಲಿಲ್ಲ. ಕೆಇಆರ್‌ಸಿ ಆದೇಶದಂತೆ ಹೊಸ ಮತ್ತು ತಾತ್ಕಾಲಿಕ ಸ್ಥಾಪನಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸಲಾಗುತ್ತಿದೆ. ನಮಗೆ ಜನಹಿತ ಮುಖ್ಯವಾಗಿದ್ದರಿಂದ ಈ ನಿರ್ಧಾರ ಕೈಗೊಂಡೆವು ಎಂದು ಹೇಳಿದರು.

ಆರ್‌ ಡಿಎಸ್‌ಎಸ್‌ ಅನುಷ್ಠಾನಗೊಳಿಸಿರುವ ರಾಜ್ಯಗಳ ವಿದ್ಯುತ್‌ ಸರಬರಾಜು ಕಂಪನಿಗಳು ಎಲ್ಲಾ ಮನೆಗಳಲ್ಲಿ ಏಕ ಕಾಲದಲ್ಲಿ (Bulk replacement) ಸ್ಮಾರ್ಟ್ ಮೀಟರ್ ಅಳವಡಿಸಿ ಅದಕ್ಕೆ ಪೂರಕವಾದ ತಾಂತ್ರಿಕ ನಿರ್ವಹಣೆ ವೆಚ್ಚವನ್ನು ಪ್ರತಿ ತಿಂಗಳ ಬಿಲ್‌ನಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತವೆ. ಅಂದರೆ, ಕಂತಿನಲ್ಲಿ ಸ್ಮಾರ್ಟ್‌ಮೀಟರ್‌ ಹಾಗೂ ತಾಂತ್ರಿಕ ನಿರ್ವಹಣೆ ವೆಚ್ಚವನ್ನು ಗ್ರಾಹಕರಿಂದ ವಸೂಲಿ ಮಾಡುತ್ತವೆ. ಆದರೆ, ನಮ್ಮ ರಾಜ್ಯದಲ್ಲಿ ಇರುವ ನಿಯಮದ ಪ್ರಕಾರ, ವಿದ್ಯುತ್‌ ಮೀಟರ್‌ಗಳನ್ನು ಗ್ರಾಹಕರೇ ಭರಿಸಬೇಕು.

ಆರ್‌ಡಿಎಸ್ಎಸ್‌ ಅನುಷ್ಠಾನಗೊಳಿಸದ ಕಾರಣ ನಮ್ಮಲ್ಲಿ ಹೊಸ ಮತ್ತು ತಾತ್ಕಲಿಕ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸುತ್ತಿರುವುದರಿಂದ ಮೀಟರ್‌ ದರವನ್ನು (ಸಿಂಗಲ್‌ ಫೇಸ್ - 4,998 ರೂ.) ಆ ಗ್ರಾಹಕರೇ ಭರಿಸಬೇಕಾಗುತ್ತದೆ. ಪ್ರತಿ ತಿಂಗಳ ತಾಂತ್ರಿಕ ನಿರ್ವಹಣೆ ವೆಚ್ವವನ್ನು ಬೆಸ್ಕಾಂ ಭರಿಸಿ, ನಂತರ ದರ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ತಾತ್ಕಾಲಿಕ ಸಂಪರ್ಕಕ್ಕೆ ಪ್ರಿ-ಪೇಯ್ಡ್‌ಗೆ ಮಾತ್ರ ಅವಕಾಶವಿದ್ದು, ಪೋಸ್ಟ್‌ ಪೇಯ್ಡ್‌ ಆಯ್ಕೆ ಇರುವುದಿಲ್ಲ. ಹೊಸ ಸಂಪರ್ಕಗಳಿಗೆ ಪ್ರಿ-ಪೇಯ್ಡ್‌ ಹಾಗೂ ಪೋಸ್ಟ್‌-ಪೇಯ್ಡ್‌ ಆಯ್ಕೆ ಲಭ್ಯವಿರುತ್ತದೆ ಎಂದು ಹೇಳಿದರು.

ಕೇಂದ್ರ ಇಂಧನ ಪ್ರಾಧಿಕಾರದ ನಿರ್ದೇಶನದಂತೆ 2021-22 ನೇ ಸಾಲಿನಲ್ಲಿ ಆರ್‌ಡಿಎಸ್ (RDSS- Revamped Distribution Sector Scheme) ಯೋಜನೆ ರೂಪಿಸಿದ್ದು, ಕೇಂದ್ರದ ಇಂಧನ ಸಚಿವಾಲಯವು ಮಾರ್ಗಸೂಚಿ ಹೊರಡಿಸಿ, ವಿದ್ಯುತ್‌ ಸರಬರಾಜು ತಮ್ಮ ಸಬ್ಸಿಡಿ ಸೇರಿದಂತೆ ಎಲ್ಲಾ ಬಾಕಿಗಳನ್ನು ಪಾವತಿಸಿದ್ದರೆ ಸ್ಮಾರ್ಟ್ ಮೀಟರ್ ಅಳವಡಿಸಲು ಕೇಂದ್ರದಿಂದ ಪ್ರತಿ ಮೀಟರ್ಗೆ ಗರಿಷ್ಠ 900 ರೂ. ಅಥವಾ ಮೀಟರ್ ದರದ ಶೇ. 15ರಷ್ಟನ್ನು ಸಬ್ಸಿಡಿಯಾಗಿ ನೀಡುವುದಾಗಿ ಹೇಳಿತ್ತು. ಅದರಂತೆ ದೇಶದ ಇತರೆ ರಾಜ್ಯಗಳು ಯೋಜನೆಯಡಿ, ಏಕಕಾಲದಲ್ಲಿ ಎಲ್ಲಾ ಗ್ರಾಹಕರ ಸ್ಥಾಪನಗಳಿಗೂ ಸ್ಮಾರ್ಟ್ ಮೀಟರ್ ಅಳವಡಿಸಿದ್ದವು. ಆದರೆ, ನಮ್ಮ ರಾಜ್ಯ ಆಗ ಯೋಜನೆ ಅಳವಡಿಸಿಕೊಂಡಿರಲಿಲ್ಲ ಎಂದು ತಿಳಿಸಿದರು.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು 2024ರ ಫೆಬ್ರವರಿ 6 ಮತ್ತು ಮಾರ್ಚ್‌ 6ರಂದು ಹೊರಡಿಸಿದ್ದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಎಲ್ಲ ತಾತ್ಕಾಲಿಕ ಸ್ಥಾಪನಗಳು ಹಾಗೂ ಹೊಸ ಸ್ಥಾಪನಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಸೂಚಿಸಿತ್ತು. ಅದರಂತೆ, ಕೇಂದ್ರ ವಿದ್ಯುತ್ ಸಚಿವಾಲಯ ನಿಗದಿಪಡಿಸಿರುವ ಸಾಮಾನ್ಯ ಬಿಡ್ಡಿಂಗ್ ದಾಖಲೆ (Standard Bidding Document)ಗಳ ಪ್ರಕಾರ ಹಾಗೂ ಕೆಟಿಪಿಪಿ ಕಾಯ್ದೆ ಅನುಸಾರ 2024ರ ಸೆ. 26ರಂದು ಟೆಂಡರ್ ಕರೆಯಲಾಗಿತ್ತು. ಈ ಬಗ್ಗೆ ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ ಟೆಂಡರ್‌ ಪ್ರಕಟಣೆಯನ್ನೂ ಹೊರಡಿಸಲಾಗಿತ್ತು. ಈ ಟೆಂಡರ್‌ನಲ್ಲಿ ಕಡಿಮೆ ದರ ಬಿಡ್‌ ಮಾಡಿದ್ದ ರಾಜಶ್ರೀ ಎಲೆಕ್ಟ್ರಿಕಲ್ಸ್‌ ಸಂಸ್ಥೆಗೆ 2024ರ ಡಿಸೆಂಬರ್‌ 23ರಂದು ಗುತ್ತಿಗೆ ನೀಡಲಾಯಿತು ಎಂದು ಹೇಳಿದರು.

ರಾಜ್ಯದಲ್ಲಿ ಆರ್‌ಡಿಎಸ್ ಯೋಜನೆ ಜಾರಿಯಲ್ಲಿ ಇಲ್ಲದಿರುವುದರಿಂದ ಸ್ಮಾರ್ಟ್ ಮೀಟರ್ ದರ ಹಾಗು ಅಡ್ವಾನ್ಸ್‌ಡ್‌ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (AMI) ತಂತ್ರಜ್ಞಾನದ ದರವನ್ನು ಟೆಂಡರ್‌ ಮೂಲಕ ಪ್ರತ್ಯೇಕವಾಗಿ ಪಡೆಯಲಾಗಿರುತ್ತದೆ. ಕೆಟಿಪಿಪಿ ಕಾಯ್ದೆಯ ಕೆಡಬ್ಲ್ಯು 4ರ ನಿಬಂದನೆ ಅನ್ವಯ, ಹಣಕಾಸು ವಹಿವಾಟನ್ನು ನಿಗದಿಪಡಿಸಲಾಗಿರುತ್ತದೆ. ಅದರಂತೆ, 354 ಕೋಟಿ ರೂ. ವಹಿವಾಟು ಹೊಂದಿರುವ ರಾಜಶ್ರೀ ಎಲೆಕ್ಟ್ರಿಕಲ್ಸ್‌ ಸಂಸ್ಥೆಯು ಸುಮಾರು 15 ವರ್ಷಗಳಿಂದ ಅಸ್ತಿತ್ವದಲ್ಲಿದೆ.

ಕ್ಲಾಸ್ 1 ಸೂಪರ್ ಗ್ರೇಡ್ ಎಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದಾರೆ. ಸಾಮಾನ್ಯ ಬಿಡ್ಡಿಂಗ್‌ ದಾಖಲೆ (SBD) ಹಾಗೂ ಟೆಂಡರ್‌ನಲ್ಲಿ ವಿಧಿಸಿರುವ ಷರತ್ತಿನಂತೆ ಸ್ಮಾರ್ಟ್‌ ಮೀಟರ್‌ ತಯಾರಿಸುವ ಮೂರು ಕಂಪನಿಗಳಾದ ಸ್ನೈಡರ್‌, ಜೀನಸ್‌ ಮತ್ತು ಓಪಸ್‌ ಜತೆ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಅದೇ ರೀತಿ ಎಸ್‌ಬಿಡಿ ಮತ್ತು ಟೆಂಡರ್‌ನಲ್ಲಿ ವಿಧಿಸಿರುವ ಷರತ್ತಿನಂತೆ, ಸಾಫ್ಟ್‌ವೇರ್‌ ಸೇವೆ ಒದಗಿಸುವ ಕಂಪನಿಯಾದ ಬಿಸಿಐಟಿಎಸ್‌ರವರ ಜತೆಗೂ ಒಡಂಬಡಿಕೆ ಮಾಡಿಕೊಂಡಿರುತ್ತಾರೆ ಎಂದು ವಿವರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+