ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅಂಬುತೀರ್ಥದಲ್ಲಿ ಸೆಲ್ಫಿ ತೆಗೆಯಲು ಹೋಗಿ ನದಿಗೆ ಬಿದ್ದಿದ್ದ ಯುವಕನ ಮೃತದೇಹ ಪತ್ತೆ
ಚಿಕ್ಕಮಗಳೂರು, ಆಗಸ್ಟ್.09: ಸೆಲ್ಫಿ ತೆಗೆಯಲು ಹೋಗಿ ನದಿಗೆ ಬಿದ್ದು, ಪ್ರಾಣ ಕಳೆದುಕೊಂಡ ಎಂಜಿನಿಯರ್ ಮೃತದೇಹ 15 ದಿನಗಳ ಬಳಿಕ ಪತ್ತೆಯಾಗಿದೆ. ಮೃತನ ಹೆಸರು ಕಿರಣ್ ಎಂದು ತಿಳಿದು ಬಂದಿದ್ದು, ಇವರು ಮಂಗಳೂರು ಸಮೀಪದ ತುಂಬೆ ಗ್ರಾಮದ ನಿವಾಸಿಯಾಗಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಅಂಬುತೀರ್ಥದಲ್ಲಿ ಈ ಘಟನೆ ಸಂಭವಿಸಿದ್ದು, ಬಂಡೆಯ ಮೇಲೆ ನಿಂತು ಸೆಲ್ಫಿ ತೆಗೆಯುವಾಗ ಕಾಲು ಜಾರಿ ಕಿರಣ್ ನದಿಗೆ ಬಿದ್ದಿದ್ದರು. ಇದೀಗ ಕಿರಣ್ ಮೃತ ದೇಹ ಮಾಗುಂಡಿ ಸಮೀಪದ ಭದ್ರಾ ನದಿಯಲ್ಲಿ ಪತ್ತೆಯಾಗಿದೆ.
ಸೆಲ್ಫಿ ಹುಚ್ಚು : ಹೇಮಾವತಿ ನದಿಯಲ್ಲಿ ಕೊಚ್ಚಿ ಹೋದ ಯುವಕ
ಧಾರಾಕಾರ ಮಳೆಯಾದ ಹಿನ್ನಲೆಯಲ್ಲಿ ಭದ್ರಾ ನದಿಯಲ್ಲಿ ಕಿರಣ್ ಮೃತ ದೇಹ ತೇಲಿ ಬಂದಿದೆ. ಮಂಗಳೂರಿನಿಂದ ಚಿಕ್ಕಮಗಳೂರಿಗೆ ಕಿರಣ್ ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗ ಈ ದುರ್ಘಟನೆ ಸಂಭವಿಸಿತ್ತು. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
engineer dead found river selfie chikkamagaluru district news ಪ್ರವಾಸ ಸೆಲ್ಫಿ ಚಿಕ್ಕಮಗಳೂರು ಜಿಲ್ಲಾಸುದ್ದಿ
English summary
Engineer body was found 15 days later. Engineer died fallen into river while taking selfie in Ambuthirtha in chikkamagaluru district