Government Employee: ಸರ್ಕಾರಿ ನೌಕರರಿಗೆ ವಿಮೆ, ಪ್ರೀಮಿಯಂ ಮತ್ತು ಪಾಲಿಸಿ ಮೊತ್ತ
ಬೆಂಗಳೂರು, ಅಕ್ಟೋಬರ್ 28: ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ ಸಿಬ್ಬಂದಿ ವರ್ಗದವರು ಸ್ವ-ಇಚ್ಛೆಯಿಂದ ವಿಮೆ ಮಾಡಿಸುವ ಬಗ್ಗೆ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ ಅಡಿ ವಿಮೆ ಮಾಡಿಸಬಹುದು. ಈ ಕುರಿತು ಸರ್ಕಾರಿ ನೌಕರರಿಗೆ ಮಾಹಿತಿಯನ್ನು ನೀಡಲಾಗಿದೆ.
ಈ ಕುರಿತು ಮತ್ತೊಮ್ಮೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ರವರ ಕಛೇರಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರವರ ಕಛೇರಿ, ಕರ್ನಾಟಕ ರಾಜ್ಯ ಸುತ್ತೋಲೆಯನ್ನು ಹೊರಡಿಸಿದೆ. ಸರ್ಕಾರದ ಸುತ್ತೋಲೆ ದಿನಾಂಕ 27/08/2024 ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯು ರಾಜ್ಯ ಸರ್ಕಾರದ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ ಸಿಬ್ಬಂದಿ ವರ್ಗದವರು ಪ್ರಧಾನ ಮಂತ್ರಿ ಜನ್ ಸುರಕ್ಷಾ ಯೋಜನೆಗಳ ಅಡಿಯಲ್ಲಿ ಸ್ವಇಚ್ಛೆಯಿಂದ ವಿಮೆ ಮಾಡಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
ವಿಮೆಯ ವಿವರಗಳು: ಸರ್ಕಾರದ ಸಾಮಾಜಿಕ ಭದ್ರತಾ ವಿಮಾ ಯೋಜನೆಗಳು ನೌಕರರು ತಮ್ಮ ಜೀವನದ ಅನಿಶ್ಚಿತತೆಗಳನ್ನು ಮತ್ತು ಆರ್ಥಿಕ ತೊಂದರೆಗಳನ್ನು ಎದುರಿಸಲು ಆರ್ಥಿಕ ಭದ್ರತೆಯನ್ನು ನೀಡುತ್ತದೆ. ಪ್ರಧಾನ ಮಂತ್ರಿ ಜನ್ ಸುರಕ್ಷಾ ಯೋಜನಗಳಾದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJDY) ಯೋಜನಯು ಅವಧಿ ವಿಮಾ (Term Insurance) ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ (PMSAY) ಅಪಘಾತ ವಿಮ ಯೋಜನೆಯಾಗಿದ್ದು, ಅತಿ ಕಡಿಮೆ ಪ್ರೀಮಿಯಂನಲ್ಲಿ ರೂ. 1 ಲಕ್ಷ ವಿಮಾ ಸೌಲಭ್ಯ ಒದಗಿಸುತ್ತಿದೆ ಎಂದು ಹೇಳಿದೆ.
ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJDY) ಪ್ರೀಮಿಯಂ ವಾರ್ಷಿಕ 436 ರೂ.ಗಳು. ವಯಸ್ಸಿನ ಮಿತಿ 18 ರಿಂದ 50 ವರ್ಷಗಳು. ಪಾಲಿಸಿ ಮೊತ್ತ 2 ಲಕ್ಷ. ಯಾವುದೇ ಕಾರಣದಿಂದ ಮರಣ ಸಂಭವಿಸಿದರೆ ಈ ವಿಮೆ ಉಪಯೋಗಕ್ಕೆ ಬರಲಿದೆ. ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ. ವಾರ್ಷಿಕ ಪ್ರೀಮಿಯಂ 20 ರೂ.ಗಳು. ವಯಸ್ಸಿನ ಮಿತಿ 18 ರಿಂದ 70 ವರ್ಷಗಳು. ಪಾಲಿಸಿ ಮೊತ್ತ 2 ಲಕ್ಷ ರೂ.ಗಳು. ಅಪಘಾತವಾಗಿ ಮೃತಪಟ್ಟರೆ ಅಥವ ಶಾಶ್ವತ ಒಟ್ಟು ಅಂಗವೈಕಲ್ಯಕ್ಕೆ 2 ಲಕ್ಷ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ.
ಸದರಿ ವಿಮೆಯನ್ನು ಅಧಿಕಾರಿ/ ಸಿಬ್ಬಂದಿಗಳು ಸ್ವ-ಇಚ್ಛೆಯಿಂದ ಮಾಡಿಸಬಹುದಾಗಿರುತ್ತದೆ. ಆದ್ದರಿಂದ ಸದರಿ ವಿಷಯವನ್ನು ತಮ್ಮ ಘಟಕದ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳ ಗಮನಕ್ಕೆ ತರುವಂತೆ ಹಾಗೂ ಈ ಬಗ್ಗೆ ಹೆಚ್ಆರ್ಎಂಎಸ್-2 ತಂತ್ರಾಂಶದಲ್ಲಿ ಸಂಯೋಜಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಸುತ್ತೋಲೆ ಹೇಳಿದೆ.
ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJDY). ಈ ಯೋಜನೆಯು ಒಂದು ವರ್ಷದ ಕವರ್ ಟರ್ಮ್ ಜೀವ ವಿಮಾ ಯೋಜನೆಯಾಗಿದ್ದು, ವರ್ಷದಿಂದ ವರ್ಷಕ್ಕೆ ನವೀಕರಿಸಬಹುದಾಗಿದೆ, ಯಾವುದೇ ಕಾರಣದಿಂದ ಸಾವಿಗೆ ಜೀವ ವಿಮಾ ರಕ್ಷಣೆಯನ್ನು ನೀಡುತ್ತದೆ. ಯಾವುದೇ ಕಾರಣದಿಂದ ಚಂದಾದಾರರ ಮರಣದ ಸಂದರ್ಭದಲ್ಲಿ ರೂ. 2 ಲಕ್ಷವನ್ನು ಪಾವತಿಸಬೇಕಾಗುತ್ತದೆ. ಪಾವತಿಸಬೇಕಾದ ಪ್ರೀಮಿಯಂ ಪ್ರತಿ ಚಂದಾದಾರರಿಗೆ ವಾರ್ಷಿಕ ರೂ. 436 ಆಗಿದೆ. ಪಾಲಿಸಿಯ ಅವಧಿಯ ಮಧ್ಯದಲ್ಲಿ ಮೊದಲ ಬಾರಿಗೆ PMJJBY ಅಡಿಯಲ್ಲಿ ದಾಖಲಾಗುವವರಿಗೆ, ಅನುಪಾತದ ಪ್ರೀಮಿಯಂ ಪಾವತಿಯನ್ನು ಅನುಮತಿಸಲಾಗಿದೆ.
* ಜೂನ್, ಜುಲೈ ಮತ್ತು ಆಗಸ್ಟ್ನಲ್ಲಿ ನೋಂದಣಿಗಾಗಿ ರೂ. 436ರ ಪೂರ್ಣ ವಾರ್ಷಿಕ ಪ್ರೀಮಿಯಂ ಪಾವತಿಸಬೇಕು.
* ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ದಾಖಲಾತಿಗಾಗಿ ಅನುಪಾತದ ಪ್ರೀಮಿಯಂ. 342 ಪಾವತಿಸಬೇಕು
* ಡಿಸೆಂಬರ್, ಜನವರಿ ಮತ್ತು ಫೆಬ್ರವರಿಯಲ್ಲಿ ದಾಖಲಾತಿಗಾಗಿ ಅನುಪಾತದ ಪ್ರೀಮಿಯಂ ರೂ. 228 ಪಾವತಿಸಬೇಕಾಗುತ್ತದೆ.
* ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳ ದಾಖಲಾತಿಗಾಗಿ ರೂ. 114 ಪಾವತಿಸಬೇಕು.
ಆದಾಗ್ಯೂ, ಯೋಜನೆಯ ಅಡಿಯಲ್ಲಿ ನವೀಕರಣದ ಸಮಯದಲ್ಲಿ ಪೂರ್ಣ ವರ್ಷದ ಪ್ರೀಮಿಯಂ ರೂ 436 ಅನ್ನು ಪಾವತಿಸಬೇಕಾಗುತ್ತದೆ. ಮೊದಲ ಬಾರಿಗೆ ನೋಂದಾಯಿಸಿಕೊಳ್ಳುವ ಚಂದಾದಾರರಿಗೆ, ಪ್ರೀಮಿಯಂನ ಸ್ವಯಂ-ಡೆಬಿಟ್ ದಿನಾಂಕದಿಂದ ಪ್ರಾರಂಭವಾಗುತ್ತದೆ. ಆದಾಗ್ಯೂ, ಯೋಜನೆಗೆ ದಾಖಲಾದ ದಿನಾಂಕದಿಂದ ಮೊದಲ 30 ದಿನಗಳಲ್ಲಿ ಸಂಭವಿಸುವ ಮರಣಕ್ಕೆ (ಅಪಘಾತದಿಂದ ಹೊರತುಪಡಿಸಿ) ವಿಮಾ ರಕ್ಷಣೆಯು ಲಭ್ಯವಿರುವುದಿಲ್ಲ (ಹಣಕಾಸು ಅವಧಿ) ಮತ್ತು ಮರಣದ ಸಂದರ್ಭದಲ್ಲಿ (ಅಪಘಾತದ ಕಾರಣ ಹೊರತುಪಡಿಸಿ). ಯಾವುದೇ ಹಕ್ಕು ಸ್ವೀಕಾರಾರ್ಹವಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications