ಕರ್ನಾಟಕ ಕೇಂದ್ರೀಯ ವಿವಿಗೆ ಪ್ರವೇಶ ಪರೀಕ್ಷೆ
ಗುಲಬರ್ಗ, ಜೂ. 6 : ಗುಲಬರ್ಗಾದ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಜೂನ್ 7 ಮತ್ತು 8ರಂದು ರಾಜ್ಯದ 14 ಕೇಂದ್ರಗಳನ್ನು ಒಳಗೊಂಡಂತೆ ದೇಶದ 29 ಕೇಂದ್ರಗಳಲ್ಲಿ ಏಕಕಾಲಕ್ಕೆ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತಿದೆ.
ಪದವಿಪೂರ್ವ ಪರೀಕ್ಷೆ ಪಾಸಾದವರೂ ವಿಶ್ವವಿದ್ಯಾಲಯದ ನೇರ ವಿದ್ಯಾರ್ಥಿಗಳಾಗುವ ಸುವರ್ಣಾವಕಾಶವನ್ನು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಒದಗಿಸಿದೆ. ಇಂಜಿನಿಯರಿಂಗ್ ಮತ್ತು ಸೈನ್ಸ್ ದ್ವಿಪದವಿ ಕೋರ್ಸ್ ಗಳನ್ನು ಒಳಗೊಂಡಂತೆ 8 ದ್ವಿಪದವಿ, 15 ಪಿಎಚ್ಡಿ ಪದವಿಗಳ ಒಟ್ಟು 758 ಸೀಟುಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳು ಖುದ್ದಾಗಿ ರಾಜ್ಯದ ಪ್ರಮುಖ ನಗರಗಳಿಗೆ ಭೇಟಿ ಕೊಟ್ಟು ಅಲ್ಲಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರ ಪರಿಣಾಮವಾಗಿ ಕರ್ನಾಟಕದಲ್ಲಿ ವ್ಯಾಪಕ ಪ್ರತಿಕ್ರಿಯೆ ದೊರೆತಿದೆ. ವಿಶ್ವವಿದ್ಯಾಲಯ ಸ್ಥಾಪನೆಗೊಂಡು 5 ವರ್ಷಗಳಲ್ಲಿ ಈ ಮಟ್ಟದ ಪ್ರತಿಕ್ರಿಯೆ ದೊರೆತಿರಲಿಲ್ಲ.
ದ್ವಿಪದವಿಯ 280, ಸ್ನಾತಕೋತ್ತರ ಪದವಿಯ 420 ಮತ್ತು ಸಂಶೋಧನಾ ಪದವಿಯ 58 ಸೀಟುಗಳು ಸೇರಿ 6448 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಅಭ್ಯರ್ಥಿಗಳಲ್ಲಿ ಶೇ.46ರಷ್ಟು ವಿದ್ಯಾರ್ಥಿಗಳು ಗುಲಬರ್ಗಾದಲ್ಲಿ ಪ್ರವೇಶ ಪರೀಕ್ಷೆ ಬರೆಯುತ್ತಿರುವುದು ವಿಶೇಷ. ಒಟ್ಟಾರೆ ಕರ್ನಾಟಕದಿಂದ ಶೇ.81.3ರಷ್ಟು ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಶೇ.18.7ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಗುಲಬರ್ಗಾದಲ್ಲಿ ಪರೀಕ್ಷೆ ಬರೆಯಲಿರುವ ಸುಮಾರು 3,000 ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲು ಗುಲಬರ್ಗಾದ ಅಪ್ಪಾ ಇಂಜಿನಿಯರಿಂಗ್ ಕಾಲೇಜು, ಪಿಡಿಎ ಇಂಜಿನಿಯರಿಂಗ್ ಕಾಲೇಜು ಮತ್ತು ಅಂಬೇಡ್ಕರ್ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
ವಿದ್ಯಾರ್ಥಿಗಳು ಜೂನ್ 3ರಿಂದ ಪ್ರವೇಶಪತ್ರ (ಹಾಲ್ ಟಿಕೆಟ್) ವಿಶ್ವವಿದ್ಯಾಲಯದ ವೆಬ್ ಸೈಟ್ ನಿಂದ ಪಡೆದುಕೊಳ್ಳುತ್ತಿದ್ದಾರೆ. ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.cuk.ac.in ವೆಬ್ ಸೈಟ್ ಸಂಪರ್ಕಿಸಬಹುದು. ಅಗತ್ಯವಿದ್ದರೆ ಈ ಕೆಳಕಂಡ ಸಹಾಯವಾಣಿಗೂ ಕರೆ ಮಾಡಬಹುದಾಗಿದೆ.
098456 34309
096114 89979
099721 91661
08477-226706
08477-226705
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications