ಸ್ವಂತ ಉದ್ಯೋಗ ಆರಂಭಿಸುವ ಆಸಕ್ತರಿಗೆ ಭರ್ಜರಿ ಆಫರ್ ಕೊಟ್ಟ ಕೈಗಾರಿಕಾ ಇಲಾಖೆ!
ಬೆಂಗಳೂರು, ಸೆ. 28: ವಿದ್ಯಾವಂತ ಯುವಕರನ್ನು ಉದ್ಯಮದತ್ತ ಆಕರ್ಷಿಸಿ, ಸ್ವಯಂ ಉದ್ಯಮಿಗಳಾಗಿ ಮಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಮ್ಮಿಕೊಂಡಿರುವ 'ಉದ್ಯಮಿಯಾಗು ಉದ್ಯೋಗ ಕೊಡು, ಹಾಗೂ ಕೈಗಾರಿಕಾ ಅದಾಲತ್' ಯೋಜನೆಗೆ ಅಕ್ಟೋಬರ್ 11ರಂದು ವಿದ್ಯುಕ್ತ ಚಾಲನೆ ದೊರೆಯಲಿದೆ.
ಅ. 11 ಮತ್ತು 12ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೊದಲ ದಿನ 'ಉದ್ಯಮಿಯಾಗು ಉದ್ಯೋಗ ಕೊಡು' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. 12ರಂದು ಕೈಗಾರಿಕಾ ಅದಾಲತ್ ನಡೆಯಲಿದ್ದು, ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ವಿನೂತನ ಕಾರ್ಯಕ್ರಮ ಇದಾಗಿದೆ.
ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಕಂದಾಯ ವಿಭಾಗದ ಕೈಗಾರಿಕಾ ಸಂಸ್ಥೆಗಳ ಮುಖಂಡರ ಜೊತೆ ನಡೆಸಿದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ನೂತನ ಉದ್ಯಮಿಗಳಿಗೆ ಮಾರ್ಗದರ್ಶನ!
ಬೆಂಗಳೂರು ಕಂದಾಯ ವಿಭಾಗದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಉದ್ಯಮಿಗಳು ಭಾಗವಹಿಸಲಿದ್ದಾರೆ.
ಮೊದಲ ದಿನ ಉದ್ಯಮಿಯಾಗು ಉದ್ಯೋಗ ಕೊಡು ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉದ್ಯಮಿಗಳು ಕೈಗಾರಿಕಾ ಕ್ಷೇತ್ರದಲ್ಲಿ ಯಶಸ್ವಿ ಸಾಧಿಸಿರುವ ಕನ್ನಡಿಗರೇ ಆದ ಕೋ ರಾಧಾಕೃಷ್ಣ, ಜಿರೋದಾ ನಿತನ್, ನಿಖಿಲ್ ಕಾಮತ್, ಪಡ್ಕೆ ಸೇರಿದಂತೆ ಮತ್ತಿತರ ಉದ್ಯಮಿಗಳನ್ನು ಆಹ್ವಾನಿಸಿ ನೂತನ ಉದ್ಯಮಿಗಳಿಗೆ ವಿಶೇಷ ಉಪನ್ಯಾಸ, ಮಾರ್ಗದರ್ಶನ, ಸಲಹೆ ನೀಡಲಿದ್ದಾರೆ.

ಉದ್ಯಮಿಗಳಿಗಿರುವ ಅವಕಾಶದ ಕುರಿತು ವಿವರಣೆ!
ಬೆಂಗಳೂರು ಕಂದಾಯ ವಿಭಾಗದ ವಿವಿಧ ಜಿಲ್ಲೆಗಳಿಂದ ಒಟ್ಟು 10 ಸಾವಿರ ಜನರು ಆಗಮಿಸಲಿದ್ದು, ವೈಮಾನಿಕ ಕ್ಷೇತ್ರ, ರಕ್ಷಣಾ ಕ್ಷೇತ್ರದಲ್ಲಿ ಉದ್ಯೋಗಗಳು, ಹೂಡಿಕೆಗಿರುವ ಅವಕಾಶಗಳ ಬಗ್ಗೆ ಚರ್ಚೆ ನಡೆಯಲಿದೆ. ಸ್ಮಾರ್ಟ್ ಆಪ್ ಉದ್ಯೋಗ ಸೃಷ್ಟಿಸುವುದು, ಆರೋಗ್ಯ ಕ್ಷೇತ್ರ, ಶಿಕ್ಷಣ, ಎಜು ಟೆಕ್ನಾಲಜಿ, ಹೂಡಿಕೆ ಮಾಡುವುದು, ಬ್ಯಾಂಕಿಂಗ್ ವಲಯದಿಂದ ಸಾಲ ಸೌಲಭ್ಯ ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳು ಜರುಗಲಿವೆ.

ಸ್ಥಳದಲ್ಲಿಯೇ ಕೈಗಾರಿಕಾ ಸಮಸ್ಯೆಗಳಿಗೆ ಪರಿಹಾರ!
2ನೇ ದಿನದ ಕೈಗಾರಿಕಾ ಅದಾಲತ್ನಲ್ಲಿ ಪ್ರಮುಖವಾಗಿ ಕೈಗಾರಿಕಾ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ಬಗ್ಗೆ ಸಚಿವರು, ಇಲಾಖೆಯ ಅಧಿಕಾರಿಗಳು ಪರಿಹರಿಸಲು ಆದ್ಯತೆ ನೀಡಲಿದ್ದಾರೆ.
ಕೈಗಾರಿಕಾ ಅದಾಲತ್ ನಡೆಸುವ ಸಂಬಂಧ ಜಿಲ್ಲಾವಾರು ವರ್ಗೀಕರಣ ಮಾಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೊತೆಗೆ ಕೈಗಾರಿಕಾ ಸಂಘಸಂಸ್ಥೆಗಳು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತಂದರೆ ಸ್ಥಳದಲ್ಲಿಯೇ ಇತ್ಯರ್ಥಪಡಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ಕೊಟ್ಟಿರುವ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, "ಕೈಗಾರಿಕಾ ಅದಾಲತ್, ಕಾರ್ಯಾಗಾರವನ್ನು 6 ವಿಭಾಗಗಳಲ್ಲಿ ನಡೆಸಲಾಗುವುದು. ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ, ಉದ್ಯಮಿದಾರರ ಮನವೊಲಿಸಲಿದೆ" ಎಂದು ಹೇಳಿದರು.
Recommended Video

ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ದ!
ಇನ್ನು ಸಭೆಯಲ್ಲಿ ಬಹುತೇಕ ಸಂಘಸಂಸ್ಥೆಯ ಮುಖ್ಯಸ್ಥರು ಪ್ರಮುಖವಾಗಿ ವಿದ್ಯುತ್ ಸೇರಿದಂತೆ ಪ್ರಮುಖ ಮೂಲಭೂತ ಸೌಲಭ್ಯಗಳ ಬಗ್ಗೆ ಸಚಿವರ ಗಮನ ಸೆಳೆದರು. ಹೀಗಾಗಿ ಉದ್ಯಮಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರ ಬದ್ದವಾಗಿದೆ. ಇದರ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಇದಕ್ಕೆ ಯಾರು ಆತಂಕಪಡುವುದು ಬೇಡ. ಇದಕ್ಕೆ ನಾವು ಬದ್ದ ಎಂದು ಸಚಿವ ನಿರಾಣಿ ವಾಗ್ದಾನ ಮಾಡಿದ್ದಾರೆ.
ಭೂಮಿ, ನೀರು, ವಿದ್ಯುತ್ ಮತ್ತು ನುರಿತ ಕೆಲಸಗಾರರನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಹೆಚ್ಚು ಕೈಗಾರಿಕೆಗಳು ಬರಬೇಕು, ಉದ್ಯೋಗ ಸೃಷ್ಟಿ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಸಚಿವ ನಿರಾಣಿ ಇದೇ ವೇಳೆ ಭರವಸೆ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications