Get Updates
Get notified of breaking news, exclusive insights, and must-see stories!

ಸ್ವಂತ ಉದ್ಯೋಗ ಆರಂಭಿಸುವ ಆಸಕ್ತರಿಗೆ ಭರ್ಜರಿ ಆಫರ್ ಕೊಟ್ಟ ಕೈಗಾರಿಕಾ ಇಲಾಖೆ!

ಬೆಂಗಳೂರು, ಸೆ. 28: ವಿದ್ಯಾವಂತ ಯುವಕರನ್ನು ಉದ್ಯಮದತ್ತ ಆಕರ್ಷಿಸಿ, ಸ್ವಯಂ ಉದ್ಯಮಿಗಳಾಗಿ ಮಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಮ್ಮಿಕೊಂಡಿರುವ 'ಉದ್ಯಮಿಯಾಗು ಉದ್ಯೋಗ ಕೊಡು, ಹಾಗೂ ಕೈಗಾರಿಕಾ ಅದಾಲತ್' ಯೋಜನೆಗೆ ಅಕ್ಟೋಬರ್ 11ರಂದು ವಿದ್ಯುಕ್ತ ಚಾಲನೆ ದೊರೆಯಲಿದೆ.

ಅ. 11 ಮತ್ತು 12ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೊದಲ ದಿನ 'ಉದ್ಯಮಿಯಾಗು ಉದ್ಯೋಗ ಕೊಡು' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. 12ರಂದು ಕೈಗಾರಿಕಾ ಅದಾಲತ್ ನಡೆಯಲಿದ್ದು, ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ವಿನೂತನ ಕಾರ್ಯಕ್ರಮ ಇದಾಗಿದೆ.

ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಕಂದಾಯ ವಿಭಾಗದ ಕೈಗಾರಿಕಾ ಸಂಸ್ಥೆಗಳ ಮುಖಂಡರ ಜೊತೆ ನಡೆಸಿದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ನೂತನ ಉದ್ಯಮಿಗಳಿಗೆ ಮಾರ್ಗದರ್ಶನ!

ನೂತನ ಉದ್ಯಮಿಗಳಿಗೆ ಮಾರ್ಗದರ್ಶನ!

ಬೆಂಗಳೂರು ಕಂದಾಯ ವಿಭಾಗದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಉದ್ಯಮಿಗಳು ಭಾಗವಹಿಸಲಿದ್ದಾರೆ.

ಮೊದಲ ದಿನ ಉದ್ಯಮಿಯಾಗು ಉದ್ಯೋಗ ಕೊಡು ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉದ್ಯಮಿಗಳು ಕೈಗಾರಿಕಾ ಕ್ಷೇತ್ರದಲ್ಲಿ ಯಶಸ್ವಿ ಸಾಧಿಸಿರುವ ಕನ್ನಡಿಗರೇ ಆದ ಕೋ ರಾಧಾಕೃಷ್ಣ, ಜಿರೋದಾ ನಿತನ್, ನಿಖಿಲ್ ಕಾಮತ್, ಪಡ್ಕೆ ಸೇರಿದಂತೆ ಮತ್ತಿತರ ಉದ್ಯಮಿಗಳನ್ನು ಆಹ್ವಾನಿಸಿ ನೂತನ ಉದ್ಯಮಿಗಳಿಗೆ ವಿಶೇಷ ಉಪನ್ಯಾಸ, ಮಾರ್ಗದರ್ಶನ, ಸಲಹೆ ನೀಡಲಿದ್ದಾರೆ.

ಉದ್ಯಮಿಗಳಿಗಿರುವ ಅವಕಾಶದ ಕುರಿತು ವಿವರಣೆ!

ಉದ್ಯಮಿಗಳಿಗಿರುವ ಅವಕಾಶದ ಕುರಿತು ವಿವರಣೆ!

ಬೆಂಗಳೂರು ಕಂದಾಯ ವಿಭಾಗದ ವಿವಿಧ ಜಿಲ್ಲೆಗಳಿಂದ ಒಟ್ಟು 10 ಸಾವಿರ ಜನರು ಆಗಮಿಸಲಿದ್ದು, ವೈಮಾನಿಕ ಕ್ಷೇತ್ರ, ರಕ್ಷಣಾ ಕ್ಷೇತ್ರದಲ್ಲಿ ಉದ್ಯೋಗಗಳು, ಹೂಡಿಕೆಗಿರುವ ಅವಕಾಶಗಳ ಬಗ್ಗೆ ಚರ್ಚೆ ನಡೆಯಲಿದೆ. ಸ್ಮಾರ್ಟ್ ಆಪ್ ಉದ್ಯೋಗ ಸೃಷ್ಟಿಸುವುದು, ಆರೋಗ್ಯ ಕ್ಷೇತ್ರ, ಶಿಕ್ಷಣ, ಎಜು ಟೆಕ್ನಾಲಜಿ, ಹೂಡಿಕೆ ಮಾಡುವುದು, ಬ್ಯಾಂಕಿಂಗ್ ವಲಯದಿಂದ ಸಾಲ ಸೌಲಭ್ಯ ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳು ಜರುಗಲಿವೆ.

ಸ್ಥಳದಲ್ಲಿಯೇ ಕೈಗಾರಿಕಾ ಸಮಸ್ಯೆಗಳಿಗೆ ಪರಿಹಾರ!

ಸ್ಥಳದಲ್ಲಿಯೇ ಕೈಗಾರಿಕಾ ಸಮಸ್ಯೆಗಳಿಗೆ ಪರಿಹಾರ!

2ನೇ ದಿನದ ಕೈಗಾರಿಕಾ ಅದಾಲತ್‍ನಲ್ಲಿ ಪ್ರಮುಖವಾಗಿ ಕೈಗಾರಿಕಾ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ಬಗ್ಗೆ ಸಚಿವರು, ಇಲಾಖೆಯ ಅಧಿಕಾರಿಗಳು ಪರಿಹರಿಸಲು ಆದ್ಯತೆ ನೀಡಲಿದ್ದಾರೆ.

ಕೈಗಾರಿಕಾ ಅದಾಲತ್ ನಡೆಸುವ ಸಂಬಂಧ ಜಿಲ್ಲಾವಾರು ವರ್ಗೀಕರಣ ಮಾಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೊತೆಗೆ ಕೈಗಾರಿಕಾ ಸಂಘಸಂಸ್ಥೆಗಳು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತಂದರೆ ಸ್ಥಳದಲ್ಲಿಯೇ ಇತ್ಯರ್ಥಪಡಿಸಲಿದ್ದಾರೆ.

ಈ ಬಗ್ಗೆ ಮಾಹಿತಿ ಕೊಟ್ಟಿರುವ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, "ಕೈಗಾರಿಕಾ ಅದಾಲತ್, ಕಾರ್ಯಾಗಾರವನ್ನು 6 ವಿಭಾಗಗಳಲ್ಲಿ ನಡೆಸಲಾಗುವುದು. ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ, ಉದ್ಯಮಿದಾರರ ಮನವೊಲಿಸಲಿದೆ" ಎಂದು ಹೇಳಿದರು.

Recommended Video

    Sreesanth ಅಂದು 10 ಲಕ್ಷಕ್ಕಾಗಿ ಹಾಗೆ ಮಾಡಿದ್ದೇಕೆ | Oneindia Kannada
    ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ದ!

    ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ದ!

    ಇನ್ನು ಸಭೆಯಲ್ಲಿ ಬಹುತೇಕ ಸಂಘಸಂಸ್ಥೆಯ ಮುಖ್ಯಸ್ಥರು ಪ್ರಮುಖವಾಗಿ ವಿದ್ಯುತ್ ಸೇರಿದಂತೆ ಪ್ರಮುಖ ಮೂಲಭೂತ ಸೌಲಭ್ಯಗಳ ಬಗ್ಗೆ ಸಚಿವರ ಗಮನ ಸೆಳೆದರು. ಹೀಗಾಗಿ ಉದ್ಯಮಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರ ಬದ್ದವಾಗಿದೆ. ಇದರ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಇದಕ್ಕೆ ಯಾರು ಆತಂಕಪಡುವುದು ಬೇಡ. ಇದಕ್ಕೆ ನಾವು ಬದ್ದ ಎಂದು ಸಚಿವ ನಿರಾಣಿ ವಾಗ್ದಾನ ಮಾಡಿದ್ದಾರೆ.

    ಭೂಮಿ, ನೀರು, ವಿದ್ಯುತ್ ಮತ್ತು ನುರಿತ ಕೆಲಸಗಾರರನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಹೆಚ್ಚು ಕೈಗಾರಿಕೆಗಳು ಬರಬೇಕು, ಉದ್ಯೋಗ ಸೃಷ್ಟಿ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಸಚಿವ ನಿರಾಣಿ ಇದೇ ವೇಳೆ ಭರವಸೆ ನೀಡಿದ್ದಾರೆ.

    More From
    Prev
    Next
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+