ಆರ್‌ಟಿಸಿಯಲ್ಲಿ ಹೆಸರು ಸೇರಿಸದ ಕೆಜಿಎಫ್ ತಹಸೀಲ್ದಾರ್ ಗೆ ಹೈಕೋಟ್ ಛೀಮಾರಿ

ಬೆಂಗಳೂರು. ಜೂ.10. ಜಮೀನು ಖರಿದಿಸಿದ್ದ ವ್ಯಕ್ತಿಯೊಬ್ಬರ ಹೆಸರಿಗೆ ಕಂದಾಯ ದಾಖಲೆಗಳನ್ನು ಮಾಡಿಕೊಡದ ಕೆಜಿಎಫ್ ತಹಸೀಲ್ದಾರ್ ಸುಜಾತಾರಾಮ್ ಅವರನ್ನು ಹೈಕೋರ್ಟ್ ಶುಕ್ರವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಖುದ್ದಾಗಿ ಹಾಜರಾದ ಅವರಿಗೆ ಛೀಮಾರಿ ಹಾಕಿರುವ ಹೈಕೋರ್ಟ್ ಕಂದಾಯ ದಾಖಲೆ ಸರಿಪಡಿಸಲು 24 ಗಂಟೆಗಳ ಗಡುವು ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಕೋರ್ಟ್ ಆದೇಶಗಳನ್ನು ಹಗುರವಾಗಿ ಕಾಣುವ ಅಧಿಕಾರಿಗಳನ್ನು ಜೈಲಿಗೆ ಕಳಿಸಿ 'ಜ್ಞಾನೋದಯ' ಮಾಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ತೀಕ್ಷ್ಣ ಮಾತುಗಳಲ್ಲಿ ಹೇಳಿದೆ.

ಹೈಕೋರ್ಟ್ ತಡೆಯಾಜ್ಞೆ ಇದ್ದರೂ ಕಂದಾಯ ದಾಖಲೆಗಳಲ್ಲಿ ಜಮೀನು ಖರೀದಿದಾರರ ಹೆಸರು ಬದಲಿಸಿ ಬೇರೊಬ್ಬರ ಹೆಸರು ಸೇರಿಸಸಿರುವ ಕುರಿತು ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕೆಜಿಎಫ್ ತಹಿಶೀಲ್ದಾರ್ ಪ್ರಕರಣದಲ್ಲಿ ಹೈಕೋರ್ಟ್ ಸರ್ಕಾರಿ ಅಧಿಕಾರಿಗಳ ಕಾರ್ಯವೈಖರಿಯನ್ನು ಕಟುವಾಗಿ ತರಾಟೆಗೆ ತೆಗೆದುಕೊಂಡಿತು.

Entry in Revenue records issue: After HC came out heavily aginst KGF Tahasildar

ಸೊಣ್ಣಪ್ಪ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಕೆಜಿಎಫ್ ತಹಿಶೀಲ್ದಾರ್ ಸುಜಾತಾರಾಮ್ ವಿಚಾರಣೆಗೆ ಹಾಜರಾಗಿದ್ದರು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ತಹಶೀಲ್ದಾರರ ಕ್ರಮ ಸಮರ್ಥಿಸಿಕೊಳ್ಳಲು ಮುಂದಾದರು. ಆಗ ಸಿಟ್ಟಾದ ಸಿಜೆ, ಹೈಕೋರ್ಟ್ ತಡೆಯಾಜ್ಞೆ ಇದ್ದರೂ, ತಹಸೀಲ್ದಾರ್ ಕಂದಾಯ ದಾಖಲೆಗಳನ್ನು ತಿದ್ದಿದ್ದು ಹೇಗೆ? ಇದು ಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ. ಕೋರ್ಟ್ ಆದೇಶಗಳ ಬಗ್ಗೆ ಅಧಿಕಾರಿಗಳಲ್ಲಿ ಇಷ್ಟೊಂದು ಅಸಡ್ಡೆ ಕರ್ನಾಟಕದಲ್ಲೇ ನೋಡಿದ್ದು. ನ್ಯಾಯಾಲಯದ ಘನತೆ ಬಗ್ಗೆ ಅಧಿಕಾರಿಗಳಲ್ಲಿ ಕಿಂಚಿತ್ತೂ ಪರಿಜ್ಞಾನ ಇಲ್ಲ. ಕೋರ್ಟ್ ಘನತೆ ಏನು? ಕೋರ್ಟ್ ಆದೇಶ ಏನು? ಹೈಕೋರ್ಟ್‌ನ ಪರಮಾಧಿಕಾರ ಏನು ಅನ್ನೋದನ್ನು ಅಧಿಕಾರಿಗಳನ್ನು ಜೈಲಿಗೆ ಕಳಿಸಿ ಜ್ಞಾನೋದಯ ಮಾಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.

ಬೇಷರ್ ಕ್ಷಮೆ:

ಅಲ್ಲದೆ ಸಿಜೆ , ಪೊಲೀಸರನ್ನು ಕರೆಸಿ ತಹಶೀಲ್ದಾರ್ ಅವರನ್ನು ಜೈಲಿಗೆ ಕಳಿಸುವ ಎಚ್ಚರಿಕೆ ನೀಡಿದರು. ಆಗ ತಹಶೀಲ್ದಾರ್ ಬೇಷರತ್ ಕ್ಷಮೆಯಾಚಿಸಿದರು. ಕಂದಾಯ ದಾಖಲೆಗಳಲ್ಲಿ ಆಗಿರುವ ತಪ್ಪನ್ನು 24 ಗಂಟೆಗಳಲ್ಲಿ ಸರಿಪಡಿಸಲಾಗುವುದು ಕೊನೆಯ ಅವಕಾಶ ನೀಡಿ ಎಂದು ಸರ್ಕಾರದ ಪರ ವಕೀಲರು ಪರಿ ಪರಿಯಾಗಿ ಮನವಿ ಮಾಡಿದರು.

Recommended Video

      AAP ಸಚಿವರು ಮಾಡಿದ ಕೆಲಸಕ್ಕೆ ಜನರ ಛೀಮಾರಿ | OneIndia Kannada

      ತಪ್ಪು ಸರಿಪಡಿಸಲು ಕೊನೆಯ ಅವಕಾಶ ನೀಡಲಾಗುವುದು. ಆಗಿರುವ ತಪ್ಪು ಸರಿಪಡಿಸಿ ಇಲ್ಲವಾದರೆ ಜೈಲಿಗೆ ಹೋಗಲು ಸಿದ್ಧರಾಗಿ. ಸೋಮವಾರ (ಜೂ.13) ಮತ್ತೇ ಅರ್ಜಿ ವಿಚಾರಣೆ ನಡೆಸಲಾಗುವುದು. ತಹಶೀಲ್ದಾರ್ ಆ ದಿನ ಖುದ್ದು ಹಾಜರಿರಬೇಕು. ತಹಶೀಲ್ದಾರ್ ಕ್ರಮ ಸಮಧಾನ ತರದಿದ್ದಿದ್ದರೆ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೋರ್ಟ್ ಎಚ್ಚರಿಕೆ ನೀಡಿತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+