Deepavali Festival: ʼದೀಪ ಹಚ್ಚಿ ದೀಪಾವಳಿ ಆಚರಿಸಿ: ಹಸಿರು ಪಟಾಕಿಯನ್ನಷ್ಟೇ ಸಿಡಿಸಿʼ
ಬೆಂಗಳೂರು, ಅಕ್ಟೋಬರ್ 19: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.

ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ತನ್ನ ಹಲು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪಟಾಕಿ ತ್ಯಜಿಸುವಂತೆ ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಲು ಮನವಿ ಮಾಡಬೇಕು ಎಂದೂ ಪರಿಸರ ಸಚಿವರು ಮನವಿ ಮಾಡಿದ್ದಾರೆ.
ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಹೊಮ್ಮುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುತ್ತದೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ಪಟಾಕಿಗಳನ್ನು ತ್ಯಜಿಸೋಣ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರು ಕರೆ ನೀಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications