ಆರೋಗ್ಯ ತಪಾಸಣೆ ಮಾಡಿಸಿಕೊಂಡ ಸಾಲುಮರದ ತಿಮ್ಮಕ್ಕ
ಬೆಂಗಳೂರು, ಸೆಪ್ಟೆಂಬರ್. 14: ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಾಲು ಮರದ ತಿಮ್ಮಕ್ಕ ಬೆಂಗಳೂರಿನ ಜಯನಗರದ ಅಪೊಲೋ ಆಸ್ಪತ್ರೆಗೆ ಆಗಮಿಸಿ ತಪಾಸಣೆ ಮಾಡಿಕೊಂಡು ತೆರಳಿದ್ದಾರೆ.
ಕಳೆದ ಫೆಬ್ರವರಿಯಲ್ಲೂ ಉಸಿರಾಟ ಸಮಸ್ಯೆಯಿಂದ ತಿಮ್ಮಕ್ಕ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ್ದ ಪರಿಸರ ಹೋರಾಟಗಾರ್ತಿ ಗುಣಮುಖರಾಗಿ ಮನೆ ಸೇರಿದ್ದರು.(ಫೆಬ್ರವರಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ತಿಮ್ಮಕ್ಕ)

ಬೆನ್ನು ಮತ್ತು ಸೊಂಟ ನೋವಿನಿಂದ ಬಳಲುತ್ತಿದ್ದ ತಿಮ್ಮಕ್ಕ ಆರೋಗ್ಯದ ಬಗ್ಗೆ ಅಂಥ ಗಂಭೀರ ಚಿಂತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಳಿಕಲ್ ಗ್ರಾಮದ ತಿಮ್ಮಕ್ಕಅನಾರೋಗ್ಯಕ್ಕೆ ಮತ್ತೆ ಮತ್ತೆ ಗುರಿಯಾಗುತ್ತಿರುವುದು ಪರಿಸರ ವಾದಿಗಳಲ್ಲಿ ಆತಂಕ ಮೂಡಿಸಿದೆ.
ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಸೋಮವಾರ ಹರಿದಾಡಿತ್ತು.












Click it and Unblock the Notifications