ಎರಿಕ್ಸನ್ ಇಂಡಿಯಾ, ಸೇವ್ ದಿ ಚಿಲ್ಡ್ರನ್ ಸಂಸ್ಥೆಗಳಿಂದ 6 ಆಂಬ್ಯುಲೆನ್ಸ್ ಹಸ್ತಾಂತರ
ಬೆಂಗಳೂರು, ಆ. 29: ನಗರಗಳಿಂದ ದೂರದಲ್ಲಿರುವ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷವಾಗಿ ಕೋವಿಡ್ ನಂತರದ ತುರ್ತು ಅಗತ್ಯ ಸೇವೆಗಳ ಮಹತ್ವದ ಬಗ್ಗೆ ಗಮನವಹಿಸಿ, ಎರಿಕ್ ಸನ್ ಇಂಡಿಯಾ ಮತ್ತು ಸೇವ್ ದಿ ಚಿಲ್ಡ್ರನ್ ಸಂಸ್ಥೆಯ ಸಹಯೋಗದೊಂದಿಗೆ 6 ಅಂಬುಲ್ಯೆನ್ಸ್ಗಳು ಹಸ್ತಾಂತರಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯ ಸಾರ್ವಜನಿಕ ಆಸ್ಪತ್ರೆ , ಉತ್ತರ ಕನ್ನಡ ಜಿಲ್ಲೆಯ ಗೊಕರ್ಣ ಸರ್ಕಾರಿ ಆಸ್ಪತ್ರೆ, ಕೋಲಾರ ಜಿಲ್ಲೆಯ ಕ್ಯಾಲನೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್ ಸಮುದಾಯ ಆರೋಗ್ಯ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು ಆಸ್ಪತ್ರೆ, ಮತ್ತು ಮೈಸೂರಿನ ಸೇಂಟ್ ಆನ್ನಿ ಆಸ್ಪತ್ರೆಗಳಿಗೆ ಆಂಬ್ಯುಲೆನ್ಸ್ ನೀಡಲಾಗಿದೆ.
ಗ್ರಾಮೀಣ ಭಾಗದ ಜನ ತುರ್ತು ಸಂದರ್ಭಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿರುವ ಆಸ್ಪತ್ರೆಗಳನ್ನು ತಲುಪಲು ಈ ಆಂಬ್ಯುಲೆನ್ಸ್ಗಳು ಸಹಾಯಕವಾಗುತ್ತವೆ.

ಬೆಂಗಳೂರು ಗ್ರಾಂಮಾಂತರ ಜಿಲ್ಲೆ ಸಿಇಓ ರಮೇಶ ರೆಡ್ಡಿ, ತಹಶೀಲ್ದಾರ್ ಹೆಚ್ ಬಾಲಕೃಷ್ಣ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಶ್ರೀ ಪ್ರಾದೇಶಿಕ ಆರೋಗ್ಯಾಧಿಕಾರಿ ಗಂಗಾಧರ್ ಇತರರು ಹಸಿರು ನಿಶಾನೆ ತೋರಿಸುವುದುರ ಮೂಲಕ ಆಂಬ್ಯುಲೆನ್ಸ್ಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎರಿಕ್ಸನ್ ಇಂಡಿಯಾ ಗ್ಲೋಬಲ್ ಸರ್ವೀಸ್ ಎಂ.ಡಿ. ಅಮಿತಾಬ್ ರಾಯ್, "ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಜೀವ ಉಳಿಸಲು ಅಂಬ್ಯಲೇನ್ಸ್ಗಳು ಸಹಾಯಕವಾಗಬಲ್ಲದು ಎಂದು ಬಾವಿಸುತ್ತಾ, ಸಾರಿಗೆ ವ್ಯವಸ್ಥೆಯಲ್ಲಿನ ತೊಡಕುಗಳನ್ನು ನಿವಾರಿಸಲು ಸಹಾಯವಾಗುತ್ತದೆ. ಇಂತಹ ಕಾರ್ಯಗಳು ಕರ್ನಾಟಕದಲ್ಲಿ ಆರೋಗ್ಯ ಸೇವೆಗಳ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪೂರಕವಾಗಿದೆ.

ಸೇವ್ ದಿ ಚಿಲ್ಡ್ರನ್ ಸಂಸ್ಥೆಯ ಮುಖ್ಯ ಕಾರ್ಯಕ್ರಮ ಅಧಿಕಾರಿಗಳಾದ ಅನಂದಿತ್ ರಾಯ್ ಚೌದರಿ, "ಭಾರತದಲ್ಲಿ ಕೋವಿಡ್ 19ರ ಎರಡನೇ ಅಲೇ ಬಂದುಹೊದ ಮೇಲೆ ಆರೋಗ್ಯ ಇಲಾಖೆಗಳ ಮೂಲಸೌಕರ್ಯಗಳನ್ನು ಸುಧಾರಿಸುವ ಅವಶ್ಯಕತೆ ಹೆಚ್ಚಾಗಿದೆ. ಇಂದಿರಿಂದಾಗಿ ದೂರದ ಸ್ಥಳಗಳಲ್ಲಿ ವಾಸಿಸುವ, ಅಂಚಿನ ಬಾಗದಲ್ಲಿರುವ ಸಮುದಾಯಗಳಿಗೂ ಸೇವಾ ಸೌಲಭ್ಯಗಳೂ ದೊರಕಬೇಕು. ಕೋವಿಡ್ ಸಾಂಕ್ರಾಮಿಕ ರೋಗವು ಆರೋಗ್ಯ ವ್ಯವಸ್ಥೆಯ ಮೇಲೆ ಅಗಾಧವಾದ ಮತ್ತು ನಿರಂತರವಾದ ಪರಿಣಾಮ ಬೀರಿದೆ. ಅನೇಕ ಇತರೆ ಕ್ಷೇತ್ರಗಳೂ ಸುಧಾರಿಸುವಲ್ಲಿ ಇನ್ನು ಹೆಣಗಾಡುತ್ತವೆ. ಇಂತಹ ಸಂದರ್ಭಗಳಲ್ಲಿ ಅಂಬ್ಯುಲೆನ್ಸ್ ಸೇವೆಯು ಅತ್ಯಂತ ಸವಾಲಿನದಾಯಕವಾಗಿದೆ. ಇದರ ನಿವಾರಣೆಗಾಗಿ ನಮ್ಮ ಸಂಸ್ಥೆ ಪಾಲುದಾರರಾಗಲು ಹರ್ಷವೆನಿಸುತ್ತದೆ," ಎಂದರು.
ಕರ್ನಾಟಕದ ಜೊತೆಗೆ ಜಾರ್ಖಂಡ್, ಆಸ್ಸಾಂ, ತೆಲಂಗಾಣ, ಬಿಹಾರ, ಪಶ್ಚಿಮ ಬಂಗಾಳ, ತಮಿಳನಾಡು, ರಾಜಸ್ಥಾನ್ ಉತ್ತರಪ್ರದೇಶಗಳಲ್ಲಿ ಎರಿಕ್ಸನ್ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ 30 ಅಂಬ್ಯುಲೆನ್ಸ್ಗಳನ್ನು ಆರೋಗ್ಯ ಇಲಾಖೆಗಳಿಗೆ ನೀಡಲಾಗಿದೆ ಎಂದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications