ಸಿಮಿ ಉಗ್ರರು ಧಾರವಾಡದಲ್ಲಿ 10 ತಿಂಗಳಿದ್ದರೂ ತಿಳಿಯಲಿಲ್ಲ ಏಕೆ?
ಚರ್ಚ್ ಸ್ಟ್ರೀಟ್ನಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆ ಈಗ ಸಂಪೂರ್ಣವಾಗಿ ಉತ್ತರ ಕರ್ನಾಟಕದ ಧಾರವಾಡದತ್ತ ತಿರುಗಿದೆ. ಮಧ್ಯ ಪ್ರದೇಶದಲ್ಲಿ ತಪ್ಪಿಸಿಕೊಂಡಿರುವ ಐವರು ಸಿಮಿ ಉಗ್ರರು ಚರ್ಚ್ ಸ್ಟ್ರೀಟ್ ಸ್ಫೋಟಕ್ಕೂ ಮೊದಲು ಧಾರವಾಡದಲ್ಲಿ 10 ತಿಂಗಳುಗಳ ಕಾಲ ತಂಗಿದ್ದ ವಿಷಯ ಬೆಳಕಿಗೆ ಬಂದಿದೆ.
ಈ ಉಗ್ರರು ಸುಮಾರು ಒಂದೂವರೆ ವರ್ಷಗಳಿಂದ ತಲೆತಪ್ಪಿಸಿಕೊಂಡು ತಿರುಗುತ್ತಿದ್ದಾರೆ. ಆದರೆ, 10 ತಿಂಗಳುಗಳ ಕಾಲ ಕರ್ನಾಟಕದಲ್ಲಿ ಸುಳಿವು ಕೂಡ ಸಿಗದಂತೆ ಬದುಕಿದ್ದುದು ಹೇಗೆ ಎಂಬುದೇ ಈಗ ಎದ್ದಿರುವ ಪ್ರಶ್ನೆ. [ಬೆಂಗಳೂರಲ್ಲಿ ಇಲ್ಲಿಯವರೆಗೆ 5 ಬಾರಿ ಬಾಂಬ್ ಸ್ಫೋಟ]

ಸುಳ್ಳು ದಾಖಲೆ ಸೃಷ್ಟಿಸಿದ್ದರು : ಪ್ರಸ್ತುತ ಈ ಉಗ್ರರು ತಂಗಿದ್ದ ಮನೆಯ ಮಾಲೀಕನನ್ನು ಪೊಲೀಸರು ಪ್ರಶ್ನೆಗೊಳಪಡಿಸಿದ್ದಾರೆ. ಮನೆಯ ಮಾಲೀಕ ಶಿವಾಜಿ ರಾವ್ ಕುಲಕರ್ಣಿ ಅವರಿಗೂ ಇವರು ಯಾರು, ಎಲ್ಲಿಂದ ಬಂದಿದ್ದರು ಎಂಬುದು ತಿಳಿದಿರಲಿಲ್ಲ. ಏಕೆಂದರೆ ಉಗ್ರರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಮನೆಯನ್ನು ಬಾಡಿಗೆಗೆ ಪಡೆದಿದ್ದರು. [ದಕ್ಷಿಣ ಭಾರತದಲ್ಲಿ ಸಿಮಿಗೆ ಇದೆ ಶಕ್ತಿಯುತ ಜಾಲ]
ಸುತ್ತಲೂ ವಾಸಿಸುತ್ತಿದ್ದ ಯಾರಿಗೂ ಇವರ ಕುರಿತು ತಿಳಿದಿರಲಿಲ್ಲ. ಮನೆಯಲ್ಲಿದ್ದ ಐವರೂ ಯಾರೊಂದಿಗೂ ಬೆರೆಯುತ್ತಿರಲಿಲ್ಲ. ಯಾವುದೇ ರೀತಿಯ ಸಂಶಯಾಸ್ಪದ ವರ್ತನೆಯೂ ಕಂಡುಬಂದಿರಲಿಲ್ಲ ಎಂದು ಅವರನ್ನು ನೋಡಿದವರು ತಿಳಿಸಿದ್ದಾರೆ.
ಈ ಉಗ್ರರಿಗಾಗಿ ಸುಮಾರು ಒಂದೂವರೆ ವರ್ಷಗಳಿಂದ ಪೊಲೀಸ್ ಇಲಾಖೆ ಹುಡುಕುತ್ತಿದೆ. ಆದರೆ, ಇನ್ನೂ ಅವರ ಫೋಟೊಗಳನ್ನು ಪೊಲೀಸ್ ಠಾಣೆಗಳಿಗೆ ಬಿಡುಗಡೆಗೊಳಿಸಿಲ್ಲ. ಪುಣೆ ಮತ್ತು ಚೆನ್ನೈ ಸ್ಫೋಟಗಳಲ್ಲಿ ಈ ಸಿಮಿ ಉಗ್ರರ ಕೈವಾಡವಿರುವುದು ತಿಳಿದ ಮೇಲೆಯೂ ಅವರ ಫೋಟೊಗಳನ್ನು ಬಿಡುಗಡೆ ಮಾಡಿಲ್ಲ. ಪೊಲೀಸರ ಈ ವರ್ತನೆ ಅಚ್ಚರಿ ಮೂಡಿಸಿದೆ. [ಗುಪ್ತ ಮಾಹಿತಿ ಪತ್ತೆಗೆ ಟೆಕ್ಕಿಗಳ ಪಡೆ]
ಕರ್ನಾಟಕ ಪೊಲೀಸರಲ್ಲಿ ಇವರ ಫೋಟೊಗಳೇ ಇರಲಿಲ್ಲ. ಚರ್ಚ್ ಸ್ಟ್ರೀಟ್ನಲ್ಲಿ ಸ್ಫೋಟ ಸಂಭವಿಸಿದ ಮೇಲೆಯೇ ಅವರು ಮಧ್ಯ ಪ್ರದೇಶ ಪೊಲೀಸರಲ್ಲಿ ಉಗ್ರರ ಫೋಟೊ ಕಳುಹಿಸುವಂತೆ ಕೋರಿದ್ದಾರೆ.[ಬಾಂಬ್ ಸ್ಫೋಟ ನಂತರದ 10 ಪ್ರಮುಖ ಬೆಳವಣಿಗೆ]
ಈಗ ಎದ್ದಿರುವ ಪ್ರಶ್ನೆಯೆಂದರೆ ಇವರೆಲ್ಲರ ಫೋಟೊಗಳನ್ನು ಪೊಲೀಸ್ ಠಾಣೆಗಳಿಗೆ ಕಳುಹಿಸಲಾಗಿತ್ತೇ? ಹಾಗೆ ಮಾಡಿದ್ದರೆ ಧಾರವಾಡದಲ್ಲಿ 10 ತಿಂಗಳ ಕಾಲ ತಂಗಿದ್ದ ಅವರನ್ನು ಹಿಡಿಯಲು ಅವಕಾಶವಿತ್ತಲ್ಲವೇ?
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications