ವಿದ್ಯುತ್ ದರ ಹೆಚ್ಚಳ ಮಾಡಿ : ಎಸ್ಕಾಂ ಮನವಿ

ರಾಜ್ಯದ ಎಲ್ಲ ಐದು ವಿದ್ಯುತ್ ವಿತರಣಾ ಕಂಪನಿಗಳು (ಎಸ್ಕಾಂ)ಗಳು ಶುಕ್ರವಾರ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸಿವೆ. ಐದು ಕಂಪನಿಗಳು ಸರಾಸರಿ 66 ಪೈಸೆ ಹೆಚ್ಚಳ ಕೋರಿವೆ. ಕಳೆದ ಸಾಲಿನಲ್ಲಿಯೂ ಎಸ್ಕಾಂಗಳು ಪ್ರತಿ ಯೂನಿಟ್ಗೆ ಸರಾಸರಿ 70 ಪೈಸೆ ಹೆಚ್ಚಳ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದವು. ಆದರೆ, ಕೆಇಆರ್ಸಿ 23 ಪೈಸೆ ಹೆಚ್ಚಳ ಮಾಡಿತ್ತು.
ಪ್ರಸ್ತಾವನೆಯಲ್ಲಿ ದರ ಹೆಚ್ಚಳಕ್ಕೆ ಸಮರ್ಥನೆ ನೀಡಿದರು ಎಸ್ಕಾಂಗಳು ಸದ್ಯ 61,705 ಮಿ.ಯೂ. ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ. ಮುಂದಿನ ವರ್ಷದಲ್ಲಿ 62,959 ಮಿ.ಯೂ. ವಿದ್ಯುತ್ ಪೂರೈಸುವ ಗುರಿ ಹೊಂದಿದ್ದೇವೆ. ಆದ್ದರಿಂದ, ಒಟ್ಟಾರೆ ಅಂದಾಜು ವಹಿವಾಟು 24,469 ಕೋಟಿಯಿಂದ 27,772 ಕೋಟಿ ರೂ.ಗಳಿಗೆ ಹೆಚ್ಚಳವಾಗಲಿದೆ ಎಂದು ತಿಳಿಸಿವೆ. (ಹೊಸ ಸರ್ಕಾರ ಬರುವ ಮೊದಲೇ ಕರೆಂಟ್ ಶಾಕ್)
ರೈತರ ಪಂಪ್ಸೆಟ್ಗಳು, ಸರ್ಕಾರದ ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆ ಗ್ರಾಹಕನ್ನು ಹೊರತುಪಡಿಸಿ, ಇತರ ಎಲ್ಲ ಗ್ರಾಹಕರಿಗೆ ಅನ್ವಯವಾಗುವಂತೆ ದರ ಪರಿಷ್ಕರಣೆ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಲಾಗಿದೆ. ಕೆಇಆರ್ಸಿಯು ಈ ಪ್ರಸ್ತಾವನೆ ಬಗ್ಗೆ ಮುಂದಿನ ಮೂರು ತಿಂಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದೆ.
ಪ್ರಸ್ತಾವನೆ ಬಗ್ಗೆ ಕೆಇಆರ್ಸಿ ಪರಿಶೀಲಿಸಿ, ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಂದಲೂ ಅಹವಾಲು ಸ್ವೀಕರಿಸಲಿದೆ. ನಂತರ ದರ ಏರಿಕೆಯನ್ನು ನಿರ್ಧರಿಸಲಿದೆ. ಆದ್ದರಿಂದ ಏಪ್ರಿಲ್ ಹೊತ್ತಿಗೆ ಗ್ರಾಹಕರಿಗೆ ತಕ್ಕಮಟ್ಟಿಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟುಲಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications