ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ಸಿಗೆ ಬೇಡಿಕೆ ಇಟ್ಟ ಎಸ್ಕಾಂಗಳು
ಬೆಂಗಳೂರು, ಡಿಸೆಂಬರ್ 09 : ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಹೆಚ್ಚಳ ಮಾಡಬೇಕು ಎಂದು ಕೆಇಆರ್ಸಿಗೆ ಮನವಿ ಮಾಡಿವೆ. ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲು 2019ರ ಮಾರ್ಚ್ ತನಕ ಕಾಲಾವಕಾಶವಿದೆ.
ಪ್ರತಿ ಯೂನಿಟ್ಗೆ 1 ರಿಂದ 1.65 ರೂ. ದರ ಹೆಚ್ಚಳ ಮಾಡಲು ಅವಕಾಶ ನೀಡಬೇಕು ಎಂದು ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ)ಕ್ಕೆ ಮನವಿ ಮಾಡಲಾಗಿದೆ.
2018-19ರಲ್ಲಿ ಪ್ರತಿ ಯೂನಿಟ್ಗೆ 82 ಪೈಸೆಯಿಂದ 1.62 ರೂ. ಹೆಚ್ಚಳ ಮಾಡುವಂತೆ ಎಸ್ಕಾಂಗಳು ಮನವಿ ಮಾಡಿದ್ದವು. ವಿವಿಧ ಭಾಗಗಳಿಗೆ ಅನ್ವಯವಾಗುವಂತೆ 20 ರಿಂದ 60 ಪೈಸೆಯೆಷ್ಟು ದರ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿತ್ತು.

ಕೆಇಆರ್ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ದರ ಹೆಚ್ಚಿಸಲು ಕೋರಿಕೆ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನವಾಗಿತ್ತು. ಈಗ ಪ್ರಸ್ತಾವನೆ ಬಂದಿದೆ. ಆದರೆ, ಈ ಬಗ್ಗೆ ತೀರ್ಮಾನಕ್ಕೆ ಬರಲು ಮಾರ್ಚ್ ತನಕ ಕಾಲಾವಕಾಶವಿದೆ' ಎಂದು ಹೇಳಿದ್ದಾರೆ.
2017-18ನೇ ಸಾಲಿನಲ್ಲಿ ಪ್ರತಿ ಯೂನಿಟ್ಗೆ 1.48 ರೂ.ನಂತೆ ದರ ಹೆಚ್ಚಿಸಲು ಎಸ್ಕಾಂಗಳು ಕೋರಿಕೆ ಸಲ್ಲಿಸಿದ್ದವು. ಆಗ ಸರಾಸರಿ 48 ಪೈಸೆ ಹೆಚ್ಚಳ ಮಾಡಲಾಗಿತ್ತು.
ಬೆಂಗಳೂರು ನಗರ ಸೇರಿದಂತೆ 8 ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಬೆಸ್ಕಾಂ 2019-20ನೇ ಸಾಲಿನಲ್ಲಿ ಪ್ರತಿ ಯೂನಿಟ್ಗೆ 1 ರೂ. ದರ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications