ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ಸಿಗೆ ಬೇಡಿಕೆ ಇಟ್ಟ ಎಸ್ಕಾಂಗಳು
ಬೆಂಗಳೂರು, ಡಿಸೆಂಬರ್ 09 : ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಹೆಚ್ಚಳ ಮಾಡಬೇಕು ಎಂದು ಕೆಇಆರ್ಸಿಗೆ ಮನವಿ ಮಾಡಿವೆ. ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲು 2019ರ ಮಾರ್ಚ್ ತನಕ ಕಾಲಾವಕಾಶವಿದೆ.
ಪ್ರತಿ ಯೂನಿಟ್ಗೆ 1 ರಿಂದ 1.65 ರೂ. ದರ ಹೆಚ್ಚಳ ಮಾಡಲು ಅವಕಾಶ ನೀಡಬೇಕು ಎಂದು ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ)ಕ್ಕೆ ಮನವಿ ಮಾಡಲಾಗಿದೆ.
2018-19ರಲ್ಲಿ ಪ್ರತಿ ಯೂನಿಟ್ಗೆ 82 ಪೈಸೆಯಿಂದ 1.62 ರೂ. ಹೆಚ್ಚಳ ಮಾಡುವಂತೆ ಎಸ್ಕಾಂಗಳು ಮನವಿ ಮಾಡಿದ್ದವು. ವಿವಿಧ ಭಾಗಗಳಿಗೆ ಅನ್ವಯವಾಗುವಂತೆ 20 ರಿಂದ 60 ಪೈಸೆಯೆಷ್ಟು ದರ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿತ್ತು.

ಕೆಇಆರ್ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ದರ ಹೆಚ್ಚಿಸಲು ಕೋರಿಕೆ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನವಾಗಿತ್ತು. ಈಗ ಪ್ರಸ್ತಾವನೆ ಬಂದಿದೆ. ಆದರೆ, ಈ ಬಗ್ಗೆ ತೀರ್ಮಾನಕ್ಕೆ ಬರಲು ಮಾರ್ಚ್ ತನಕ ಕಾಲಾವಕಾಶವಿದೆ' ಎಂದು ಹೇಳಿದ್ದಾರೆ.
2017-18ನೇ ಸಾಲಿನಲ್ಲಿ ಪ್ರತಿ ಯೂನಿಟ್ಗೆ 1.48 ರೂ.ನಂತೆ ದರ ಹೆಚ್ಚಿಸಲು ಎಸ್ಕಾಂಗಳು ಕೋರಿಕೆ ಸಲ್ಲಿಸಿದ್ದವು. ಆಗ ಸರಾಸರಿ 48 ಪೈಸೆ ಹೆಚ್ಚಳ ಮಾಡಲಾಗಿತ್ತು.
ಬೆಂಗಳೂರು ನಗರ ಸೇರಿದಂತೆ 8 ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಬೆಸ್ಕಾಂ 2019-20ನೇ ಸಾಲಿನಲ್ಲಿ ಪ್ರತಿ ಯೂನಿಟ್ಗೆ 1 ರೂ. ದರ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications