ಗುತ್ತಿಗೆದಾರ ಸಚಿನ್ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ: ಈಶ್ವರ ಖಂಡ್ರೆ ಹೇಳಿದ್ದೇನು?

ಬೆಂಗಳೂರು, ಜನವರಿ 02: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಪಾಂಚಾಳ ಅವರಿಗೆ ಐವರು ಸೋದರಿಯರಿದ್ದು, ಒಬ್ಬರಿಗಾದರೂ ಸರ್ಕಾರಿ ನೌಕರಿ ನೀಡುವಂತೆ ತಾವು ಮನವಿ ಮಾಡುವುದಾಗಿದೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿನ್ ಪಾಂಚಾಳ ಸಾವು ಅತ್ಯಂತ ದುಃಖದಾಯಕ, ಅವರು ನನ್ನ ಮತಕ್ಷೇತ್ರದವರಾಗಿದ್ದು, ಈ ದುರ್ಘಟನೆಯ ಬಳಿಕ ತಾವು ಹೋಗಿ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಸ್ವತಂತ್ರ ತನಿಖೆಯ ಭರವಸೆ ನೀಡಿದ್ದೆ. ಈಗ ಪ್ರಕರಣವನ್ನು ಸರ್ಕಾರ ಸಿಓಡಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

Eshwar Khandre Appeals For Government Job For One Of Sachin Panchal s Family Members

ಬಿಜೆಪಿಯವರಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರದ ವಿರುದ್ಧ ಮಾತನಾಡಲು ಯಾವುದೇ ವಿಚಾರ ಇಲ್ಲ. ಹೀಗಾಗಿ ಅಪಪ್ರಚಾರದಲ್ಲಿ ನಿರತವಾಗಿದೆ. ಪ್ರಿಯಾಂಕ್ ಖರ್ಗೆ ವಿರುದ್ಧವೂ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರ ಮೇಲೆ ಹಲವು ಭ್ರಷ್ಟಾಚಾರ ಆರೋಪ, ಅಕ್ರಮದ ಆರೋಪ ಇದೆ, ಆ ಬಗ್ಗೆ ಯಾರೂ ಮಾತನಾಡಲ್ಲ. ಆದರೆ ಪ್ರಿಯಾಂಕ್ ಖರ್ಗೆ ವಿರುದ್ಧ ಡೆತ್ ನೋಟ್ ನಲ್ಲಿ ಯಾವುದೇ ಆರೋಪ ಇಲ್ಲದಿದ್ದರೂ ರಾಜೀನಾಮೆ ಕೇಳುವುದು ಅಸಮಂಜಸ, ಇದು ರಾಜಕೀಯ ಪ್ರೇರಿತ ಎಂದರು.

ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿದ್ದು, ಅವು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗುತ್ತಿವೆ, ಮಾನವ -ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು, ಕಾರಿಡಾರ್ ನಿರ್ಮಿಸಲು ಕ್ಯಾಂಪಾದಲ್ಲಿರುವ ರಾಜ್ಯದ 1400 ಕೋಟಿ ರೂ. ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರ ಬಳಿಗೆ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗ ತೆಗೆದುಕೊಂಡು ಹೋಗಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದು, ಶೀಘ್ರವೇ ಎಲ್ಲ ಸಚಿವರಿಗೂ ಪತ್ರ ಬರೆಯಲಾಗುವುದು ಎಂದರು.

ಆಗಸ್ಟ್ 12ರಂದು ಬೆಂಗಳೂರಿನಲ್ಲಿ ನಡೆದ ಮಾನವ-ಆನೆ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಜಾರ್ಖಂಡ್ ರಾಜ್ಯದ ಸಚಿವರು ಕೂಡ ಕೇಂದ್ರಕ್ಕೆ ನಿಯೋಗದಲ್ಲಿ ಆಗಮಿಸಲು ಸಮ್ಮಿತಿಸಿದ್ದರು.

ಕರ್ನಾಟಕ ಮತ್ತು ಕೇರಳ ನಡುವೆ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಸಂಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್ ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ. ಹೀಗಾಗಿ ರಾತ್ರಿ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದರು.

ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್ ಕಂಪನಿಗಳಿಗೆ ತಿಳಿಸಿರುವುದಾಗಿ ಹೇಳಿದರು.

ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್ ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ರಾಜ್ಯದ ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಅಭಯಾರಣ್ಯ, ಮೀಸಲು ಅರಣ್ಯ, ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ವಿವಿಧ ಅರಣ್ಯಗಳಲ್ಲಿ ಹಲವಾರು ವರ್ಷಗಳಿಂದ ಅರಣ್ಯವಾಸಿಗಳು ಜೀವಿಸುತ್ತಿದ್ದು, ಗಂಡ, ಹೆಂಡತಿ ಒಳಗೊಂಡು ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+