Property: ಭೂಮಿಗೆ ಬಂಗಾರದ ಬೆಲೆ: ಭೂಮಿ ಕಬಳಿಸುವವರ ವಿರುದ್ದ ಕ್ರಮಕ್ಕೆ ಸೂಚನೆ
ತುಮಕೂರು: ಭೂಮಿಗೆ ಬಂಗಾರದ ಬೆಲೆ ಬಂದಿರುವ ಹಿನ್ನೆಲೆಯಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಕೂಡಲೇ ಪೊಲೀಸ್ ದೂರು ದಾಖಲಿಸುವುದರ ಜೊತೆಗೆ ಅರಣ್ಯ ಅಪರಾಧ ಕಾಯಿದೆಯಡಿಯೂ ಪ್ರಕರಣ ದಾಖಲಿಸುವಂತೆ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ತುಮಕೂರಿನಲ್ಲಿಂದು ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಈಶ್ವರ ಬಿ ಖಂಡ್ರೆ ಅವರು, ತುಮಕೂರು ಬಯಲು ಸೀಮೆ ಇಲ್ಲಿ ಇರುವ ಅರಣ್ಯ ಪ್ರದೇಶವೇ ಕಡಿಮೆ. ಇದರಲ್ಲಿ ಒತ್ತುವರಿಯೂ ಆಗಿದೆ. ಜೊತೆಗೆ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯದ ಮೇಲೆ ಹಕ್ಕು ಚಲಾಯಿಸುತ್ತಿದ್ದರೆ, ಇನ್ನು ಕೆಲವು ಕಡೆ ಅಕ್ರಮ ಮಂಜೂರಾತಿ ಆಗಿದೆ ಈ ಬಗ್ಗೆ ಅರಣ್ಯಾಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಚಿರತೆ ಸೆರೆಗೆ ಬೋನಿಡಲು ಸೂಚನೆ
ತುಮಕೂರು ಜಿಲ್ಲೆಯ 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಚಿರತೆ - ಮಾನವ ಸಂಘರ್ಷವಿದ್ದು ಜನ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಈಶ್ವರ ಖಂಡ್ರೆ ಕೂಡಲೇ 31 ಹೊಸ ಬೋನುಗಳನ್ನು ಖರೀದಿಸಲು ಸಮ್ಮತಿ ಸೂಚಿಸಿದರು. ಯಾವುದೇ ಗ್ರಾಮದ ಬಳಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಬಂದರೆ ಕೂಡಲೇ ವನ್ಯಜೀವಿ ವಿಭಾಗದ ಸಿಬ್ಬಂದಿ ಕಳಿಸಿ, ಪರಿಶೀಲಿಸಿ ಚಿರತೆ ಸಂಚಾರ ಖಚಿತವಾದರೆ, ಬೋನುಗಳನ್ನು ಇಡಲು ತುರ್ತು ಕ್ರಮ ವಹಿಸುವಂತೆ ಸಚಿವರು ಸೂಚಿಸಿದರು.
ಕ್ಷೀಣಿಸಿದ ಅರಣ್ಯಗಳಲ್ಲಿ ಬರುವ ಮುಂಗಾರಿನಲ್ಲಿ ಸಸಿ ನೆಟ್ಟು ಅರಣ್ಯ ಸಂವರ್ಧನೆ ಮಾಡಲೂ ಸೂಚಿಸಿದ ಈಶ್ವರ ಖಂಡ್ರೆ, ನಗರ ಪ್ರದೇಶಗಳ ರಸ್ತೆ ಬದಿಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲು ಕ್ರಮ ವಹಿಸಬೇಕು, ರಸ್ತೆ ಬದಿಯ ಸಸಿಗಳ ಸುತ್ತ ಕನಿಷ್ಠ 3 ಅಡಿ ಮಣ್ಣಿಸುವಂತೆ ನಿಗಾ ವಹಿಸಬೇಕು, ಎಷ್ಟು ಸಸಿ ಬದುಕಿ ಉಳಿದಿವೆ ಎಂಬ ಬಗ್ಗೆ ಆಡಿಟ್ ಮಾಡಿಸಬೇಕು ಎಂದು ತಿಳಿಸಿದರು.ತಿಪಟೂರಿನಲ್ಲಿ ಕಮಾಂಡ್ ಸೆಂಟರ್ ತೆರೆಯಲು ಕ್ರಮ ವಹಿಸುವಂತೆಯೂ ಸಚಿವರಾದ ಈಶ್ವರ್ ಖಂಡ್ರೆ ಅವರಯ ತಿಳಿಸಿದರು. ಿನ್ನೂ ಈ ಸಭೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಳುಕೊಂಡಲ ಮತ್ತಿತರರು ಪಾಲ್ಗೊಂಡಿದ್ದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications