ಸಿಎಂ ಸ್ಥಾನ ಮಕ್ಕಳಾಟವಲ್ಲ, ಸಿದ್ದುಗೆ ಈಶ್ವರಪ್ಪ ಪಾಠ!
ಕೊಪ್ಪಳ, ನ.11 : ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ಮಸೂದೆಯನ್ನು ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆ ಎಂಬುದು ಮಕ್ಕಳಾಟವಲ್ಲ ಅದು ಜವಾಬ್ದಾರಿಯುತ ಹುದ್ದೆ, ಅದನ್ನು ಮರೆತು ಹಿಂದುಗಳ ಭಾವನೆಗೆ ಧಕ್ಕೆ ತರುವಂತಹ ಇಂತಹ ಕಾನೂನು ರೂಪಿಸಲಾಗಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.
ಕೊಪ್ಪಳದಲ್ಲಿ ಸೋಮವಾರ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತೆ ಸಿದ್ಧಪಡಿಸಿರುವ ರಾಜ್ಯ ಸರ್ಕಾರದ ಮೂಢನಂಬಿಕೆ ನಿಷೇಧ ಮಸೂದೆ 2013ನ್ನು ಜಾರಿಗೊಳಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದರು. ತಮ್ಮ ವಿರೋಧದ ನಡುವೆಯೂ ಕಾಯ್ದೆ ಜಾರಿಯಾದರೆ, ಸಿಎಂ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದರು.

ಮುಖ್ಯಮಂತ್ರಿ ಸ್ಥಾನವೆಂಬುದು ಮಕ್ಕಳಾಟವಲ್ಲ, ಜವಾಬ್ದಾರಿಯುತ ಹುದ್ದೆ ಎಂಬುದನ್ನು ಮರೆತಿರುವ ಸಿದ್ದರಾಮಯ್ಯ, ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗುವಂತೆ ಸಿದ್ಧಪಡಿಸಲಾಗಿರುವ ಮೂಢನಂಬಿಕೆ ನಿಷೇಧ ಮಸೂದೆಯನ್ನು ವಿರೋಧದ ನಡುವೆಯೂ ಜಾರಿಗೊಳಿಸಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ-ಮುಸ್ಲಿಂರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ, ಶಾದಿ ಭಾಗ್ಯ ಯೋಜನೆ ಜಾರಿಗೊಳಿಸಿ ಅಲ್ಪಸಂಖ್ಯಾತರನ್ನು ಓಲೈಸುವ ಮೂಲಕ ಸಮಾಜವನ್ನು ಒಡೆಯುವ ಕೆಲಸದಲ್ಲಿ ತೊಡಗಿದೆ ಎಂದು ವಾಗ್ದಾಳಿ ನಡೆಸಿದರು. ಶಾದಿ ಭಾಗ್ಯ ಯೋಜನೆ ರಾಜ್ಯದ ಎಲ್ಲಾ ಸಮುದಾಯಕ್ಕೂ ವಿಸ್ತರಿಸಬೇಕು. ಯೋಜನೆಯ ಹೆಸರನ್ನು ಶಾದಿ ಭಾಗ್ಯ ಬದಲು ಕಲ್ಯಾಣ ಭಾಗ್ಯ ಎಂದು ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ 2013ರನ್ನು ಮಂಡಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ. ಸದನದವೊಳಗೆ ಮತ್ತು ಹೊರಗೆ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ನಡೆಸಲಿದೆ ಎಂದು ಈಶ್ವರಪ್ಪ ಹೇಳಿದರು. (ಮೂಢನಂಬಿಕೆ ಮಸೂದೆ : ಸಿಎಂ, ಸಚಿವರ ಗೊಂದಲ)
ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಈಶ್ವರಪ್ಪ, ಬಿಜೆಪಿಗೆ ಯಡಿಯೂರಪ್ಪ ಸೇರಿದಂತೆ ಎಲ್ಲರೂ ಅನಿವಾರ್ಯ, 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯ ಬಿಜೆಪಿ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications