ಕುಡಿಯೋದೇ ನನ್ನ ವೀಕ್ನೆಸ್ಸೂ: ನೋಟು ಬ್ಯಾನ್ ನಡುವೆಯೂ ಭಾರೀ ತೆರಿಗೆ ಸಂಗ್ರಹ
ನೋಟು ಬ್ಯಾನ್ ನಡುವೆಯೂ ಮದ್ಯ ಮಾರಾಟದಲ್ಲಿ ಗಣನೀಯ ಹೆಚ್ಚಳ, ಆ ಮೂಲಕ ಸರಕಾರಕ್ಕೆ ಕಳೆದ ಐವತ್ತು ದಿನಗಳಲ್ಲಿ ಸುಮಾರು 300 ಕೋಟಿಗೂ ಅಧಿಕ ಮೊತ್ತದ ತೆರಿಗೆ ಸಂಗ್ರಹವಾಗಿದೆ.
ಬೆಂಗಳೂರು, ಡಿ 31: ಐನೂರು ಮತ್ತು ಸಾವಿರ ರೂಪಾಯಿಯ ನೋಟು ನಿಷೇಧದ ಬಿಸಿ ಮದ್ಯ ಮಾರಾಟಕ್ಕೆ ತಟ್ಟಿಲ್ಲ, ಬದಲಿಗೆ ತೆರಿಗೆ ಸಂಗ್ರಹ ಹೆಚ್ಚಾಗುವ ಮೂಲಕ ಸರಕಾರಕ್ಕೆ ಅಬಕಾರಿ ಇಲಾಖೆ ತನ್ನ ಪಾಲನ್ನು ತುಸು ಹೆಚ್ಚಾಗಿಯೇ ನೀಡಿದೆ.
ನೋಟು ನಿಷೇಧದ ನಂತರ ಮದ್ಯಪ್ರಿಯರು ಕ್ಯಾಷ್ ಲೆಸ್ ವ್ಯವಹಾರಕ್ಕೆ ಹೆಚ್ಚಾಗಿ ಒಗ್ಗುತ್ತಿರುವುದು ಒಂದೆಡೆಯಾದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ರಾಜಸ್ವ ಸಂಗ್ರಹಣೆಯಲ್ಲಿ ಸುಮಾರು ಶೇ. 15ರಷ್ಟು ವೃದ್ದಿಯಾಗಿದೆ. (ಜ.1ರಿಂದ ಎಟಿಎಂನಲ್ಲಿ ದಿನಕ್ಕೆ 4,500 ರು. ಸಿಗುತ್ತೆ)

ಕಳೆದ ವರ್ಷ ನ 9ರಿಂದ ಡಿ 25ನೇ ತಾರೀಖಿನವರೆಗೆ ಅನ್ವಯವಾಗುವಂತೆ, 1,724 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು. ಈ ವರ್ಷಕ್ಕೆ ಹೋಲಿಸಿದರೆ 2,030 ಕೋಟಿ ರೂ. ಹಣ ಸಂಗ್ರಹವಾಗಿದೆ. ಆ ಮೂಲಕ 306 ಕೋಟಿ ಅಧಿಕ ರಾಜಸ್ವ ಮೊತ್ತ ರಾಜ್ಯ ಬೊಕ್ಕಸಕ್ಕೆ ಬಂದಿದೆ.
ಕಳೆದ ವರ್ಷಕ್ಕಿಂತ ಆದಾಯದಲ್ಲಿ ಗಣನೀಯ ಹೆಚ್ಚಳವಾಗಿರುವುದು ತೆರಿಗೆ ಪ್ರಮಾಣ ಹೆಚ್ಚಿಸಿರುವುದರಿಂದ ಎನ್ನುವುದು ಅಬಕಾರಿ ಇಲಾಖೆಯ ಅಪರ ಆಯುಕ್ತ ವಿಶ್ವರೂಪ್ ಅವರ ಅಭಿಪ್ರಾಯ.
ಬ್ಯಾನ್ ಆಗಿರುವ ನೋಟುಗಳಲ್ಲೇ ಕೆಲವು ಬಾರ್ ಅಂಡ್ ರೆಸ್ಟೋರೆಂಟ್ಗಳು ಮದ್ಯವನ್ನು ಭಾರೀ ಪ್ರಮಾಣದಲ್ಲಿ ಸಂಗ್ರಹಿಸಿ ಇಟ್ಟುಕೊಂಡಿರುವುದು ತೆರಿಗೆ ಹೆಚ್ಚಳಕ್ಕೆ ನೀಡಬಹುದಾದ ಪ್ರಮುಖ ಕಾರಣಗಳಲ್ಲಿ ಒಂದು.
ರಾಜ್ಯ ಸರಕಾರದ ಬೊಕ್ಕಸಕ್ಕೆ ತೆರಿಗೆ ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿರುವುದನ್ನು ನೋಡಿದರೆ, ನೋಟು ನಿಷೇಧದ ನೆಪ ಹೇಳದೇ ತೆರಿಗೆ ಸಂಗ್ರಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿರುವ ಹಿಂದೆ ರಾಜಕೀಯ ಅಡಗಿದೆಯೇ ಎಂದು ಅನುಮಾನಿಸುವಂತಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications