ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ; "ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್ಸಿನಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ"
ಬೆಂಗಳೂರು, ನವೆಂಬರ್ 18: ಕಾಂಗ್ರೆಸ್ ಹೈಕಮಾಂಡ್ ಎಂಬುದು ಸತ್ತು ಹೋಗಿದೆ. ಹೈಕಮಾಂಡ್ ಎಂದರೆ ಎಐಸಿಸಿ ಅಧ್ಯಕ್ಷರು ಇರಬೇಕು. ಕರ್ನಾಟಕದ ಕಾಂಗ್ರೆಸ್ ನಾಯಕರು ಎಐಸಿಸಿ ಅಧ್ಯಕ್ಷರೆಂದು ತಿಳಿದುಕೊಂಡೇ ಇಲ್ಲ. ಅವರು ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರೆಂದು ಇವತ್ತಿಗೂ ತಿಳಿದುಕೊಂಡಂತಿದೆ. ಮಲ್ಲಿಕಾರ್ಜುನ್ ಖರ್ಗೆಯವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಗಾದೆಯ ಥರ ಕಾಂಗ್ರೆಸ್ಸಿನಲ್ಲಿ ಇದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದರು.
ಇಂದು ಮಾಧ್ಯಮಗಳ ಜೊತೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಬಿಹಾರದಲ್ಲಿ ಎಲ್ಲೂ ಕೂಡ ಎಐಸಿಸಿ ಅಧ್ಯಕ್ಷರ ಫೋಟೊಗಳೇ ಇರಲಿಲ್ಲ. ಅವರಿಗೆ ಅಲ್ಲಿ ಮಹತ್ವ ಇರಲಿಲ್ಲ, ರಾಹುಲ್ ಗಾಂಧಿಗೆ ಮಹತ್ವ ಇತ್ತು. ಅಂದರೆ ಹೈಕಮಾಂಡ್ ಯಾರು? ಮಾನ್ಯ ಖರ್ಗೆಯವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಗಾದೆಯ ಥರ ಕಾಂಗ್ರೆಸ್ಸಿನಲ್ಲಿ ಇದ್ದಾರೆ. ಅದರಿಂದಾಗಿ ಪರಿಸ್ಥಿತಿ ಹೀಗಾಗಿದೆ ಎಂದು ಹೇಳಿದರು.

ಕಾಂಗ್ರೆಸ್ಸಿನವರು ಒಂದು ಕಡೆ ನಾಯಕತ್ವ ಬದಲಾವಣೆ ಆಗಬೇಕು ಎನ್ನುತ್ತಾರೆ. ಮತ್ತೊಂದು ಕಡೆ ಸಚಿವಸಂಪುಟ ಪುನಾರಚನೆ ಮಾತು ಕೇಳಿಸುತ್ತಿದೆ. ಗುಜರಾತ್ನಲ್ಲಿ ಬೆಳಿಗ್ಗೆ ರಾಜೀನಾಮೆ ಕೊಟ್ಟು ಎರಡನೇ ದಿನ ಬೆಳಿಗ್ಗೆ ಬೇರೆ ಸಚಿವಸಂಪುಟವೇ ರಚನೆ ಆಯಿತು. ಇಲ್ಲಿ ಒಂದು ವರ್ಷದಿಂದ ಸಚಿವಸಂಪುಟ ಪುನಾರಚನೆ ದೊಡ್ಡ ಕಾರ್ಯಕ್ರಮದಂತಿದೆ ಎಂದು ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಗಿ ನುಡಿದರು.
ಪ್ರಿಯಾಂಕ್ ಖರ್ಗೆಯವರು ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿಸಿದ್ದಾರೆ. ಅವರು ಹೇಳಿರುವ ಮಾತುಗಳೆಲ್ಲವೂ ಅಪ್ಪಟ ಸುಳ್ಳು ಎಂದು ಟೀಕಿಸಿದರು. ತಮ್ಮ ಕ್ಷೇತ್ರ ಚಿತ್ತಾಪುರದಲ್ಲಿ ಪಥ ಸಂಚಲನ ಆಗಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ, ಇವತ್ತು ಪಥ ಸಂಚಲನ ನಡೆದಿದೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು.
ನನ್ನ ಕೈಯಲ್ಲಿ ಅಧಿಕಾರವಿದ್ದರೆ ಇವತ್ತೇ ಆರೆಸ್ಸೆಸ್ ನಿಷೇಧಿಸುವುದಾಗಿ ಪ್ರಿಯಾಂಕ್ ಹೇಳಿದ್ದರು. ಅದು ಅವರಿಗೆ ಈ ಜನ್ಮದಲ್ಲಿ ಆಗಲಾರದ ವಿಷಯ ಎಂದು ಸವಾಲೆಸೆದರು. ನೀವು ಅನುಮತಿ ಕೊಟ್ಟಿದ್ದಾಗಿ ಹೇಳಿದ್ದೀರಿ; ಅದು ನಿಮ್ಮ ಅನುಮತಿಯಲ್ಲ; ಅದು ನ್ಯಾಯಾಲಯದಿಂದ ಸಿಕ್ಕಿದೆ. ಸರಣಿ ಸುಳ್ಳು ಹೇಳುವ ಸುಳ್ಳುಗಾರ ಇದ್ದರೆ ಅದು ಪ್ರಿಯಾಂಕ್ ಖರ್ಗೆ ಎಂದರು. ಇರಲಾರದೆ ಇರುವೆ ಬಿಟ್ಟುಕೊಂಡು ಈಗ ಕಚ್ಚಿಸಿಕೊಂಡು ಓಡಾಡುತ್ತಿದ್ದಾರೆ, ಅವರಿಗೆ ಇರುವೆ ಬಹಳ ಕಚ್ಚಿದೆ ಎಂದು ತಿಳಿಸಿದರು.
ಬಾಂಬ್ ಸ್ಫೋಟದ ವಿಷಯವನ್ನು ಧರ್ಮ- ಜಾತಿಗೆ ಹೋಲಿಕೆ ಮಾಡಬಾರದೆಂದು ಪದೇಪದೇ ಹೇಳುತ್ತೇವೆ. ಆದರೆ ಆಗಿದ್ದೇನು? ಸಂಸತ್ ಮೇಲೆ ದಾಳಿ, ಪುಲ್ವಾಮಾ ದಾಳಿ- ಒಂದು ಧರ್ಮದವರಿಂದ ನಡೆದಿದೆ. ದಾಳಿಯ ಹಿನ್ನೆಲೆ ಗಮನಿಸಿದರೆ ಅದು ಒಂದು ಧರ್ಮದವರೇ ಆಗಿದ್ದಾರೆ ಯಾಕೆ ಎಂದು ಕೇಳಿದರು. ಅವರೆಲ್ಲರನ್ನೂ ನಾವು ಹುತಾತ್ಮರು ಎಂದು ಕರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು. ದೇಶಕ್ಕೆ ಆಪತ್ತು ಬಂದಾಗ ಅದನ್ನು ವಿರೋಧಿಸಿ ಹೋರಾಟ ಮಾಡಿ ಬಲಿದಾನ ಆದರೆ ಅದನ್ನು ಹುತಾತ್ಮರೆಂದು ಗುರುತಿಸಬಹುದು ಎಂದು ವಿಶ್ಲೇಷಿಸಿದರು. ಇಲ್ಲಿ ಸ್ವಾರ್ಥ ಸಾಧನೆಯ ಚಟುವಟಿಕೆಯಲ್ಲಿ ಬಲಿಯಾಗಿದ್ದಾರೆ ಎಂದರು.
ನಮ್ಮ ಮೆಟ್ರೋಗೆ ಬಾಂಬ್ ಬೆದರಿಕೆ ಸುಳ್ಳಿರಬಹುದು. ನಿಜ ಇರಲೂ ಬಹುದು. ಆದರೆ, ಈಚೆಗೆ ಅದು ಹೆಚ್ಚಾಗುತ್ತಿದೆ. ಇದೆಲ್ಲದಕ್ಕೂ ಆಡಳಿತ ನಡೆಸುವ ಸರಕಾರವೇ ಕಾರಣ. ಆಡಳಿತ ಮಾಡುವ ಸರಕಾರವು ತಪ್ಪು ಮಾಡಿದವರಿಗೆ ಶಿಕ್ಷೆ ಸಿಗುವಂತೆ ವರ್ತಿಸಿದರೆ, ಇಂಥವನ್ನು ತಡೆಯಬಹುದು. ಸಾಮಾಜಿಕ ಜಾಲತಾಣದ ಪೋಸ್ಟ್ಗೆ ಸಂಬಂಧಿಸಿ ಪೊಲೀಸರನ್ನು ಕಳುಹಿಸಿ ಬಂಧಿಸುತ್ತಾರೆ; ಆದರೆ, ಈ ರೀತಿ ಕ್ರಿಮಿನಲ್ ಚಟುವಟಿಕೆ ನಡೆದಾಗ ಯಾಕೆ ಈ ಸರಕಾರ ತೆಪ್ಪಗಿರುತ್ತದೆ ಎಂದು ಪ್ರಶ್ನೆ ಹುಟ್ಟುತ್ತಿದೆ ಎಂದು ತಿಳಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications