Malur Result: ಮಾಲೂರು ಕ್ಷೇತ್ರದ ಮರು ಎಣಿಕೆ: ಫಲಿತಾಂಶ ಮಾತ್ರ ಪ್ರಕಟ ಮಾಡುವಂತಿಲ್ಲ!
ಕೋಲಾರ, ನವೆಂಬರ್ 10 : ಸುಪ್ರೀಂಕೋರ್ಟ್ ಆದೇಶದಂತೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಇಂದು ನಡೆದಿದೆ. 023ರ ಚುನಾವಣೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಈ ಮರು ಎಣಿಕೆ ನಡೆಯುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಇವಿಎಂ ಮರು ಎಣಿಕೆ ನಡೆದಿದ್ದು, ಎಲ್ಲಾ ಚಿತ್ತ ಮಾಲೂರು ಕ್ಷೇತ್ರದತ್ತ ಇದೆ.
2023ರ ಚುನಾವಣೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಈ ಮರು ಎಣಿಕೆ ನಡೆದಿದೆ. ಕೋಲಾರ ಹೊರವಲಯದ ತೋಟಗಾರಿಕಾ ವಿವಿ ಕ್ಯಾಂಪಸ್ ನಲ್ಲಿ ಮತ ಎಣಿಕೆ ಕಾರ್ಯ ನಡೆದಿದೆ. ಮತ ಏಣಿಕೆ ನಡೆದರು ಇಂದು ಯಾವುದೇ ಫಲಿತಾಂಶ ಪ್ರಕಟವಾಗುವುದಿಲ್ಲ. ಇಂದು ಚುನಾವಣಾಧಿಕಾರಿಗಳು ಪಲಿತಾಂಶವನ್ನು ಪ್ರಕಟ ಮಾಡುವಂತಿಲ್ಲ . ಮುಚ್ಚಿದ ಲಕೋಟೆಯಲ್ಲಿ ಪಲಿತಾಂಶವನ್ನ ಕೋರ್ಟ್ ಗೆ ತಲುಪಿಸಬೇಕು. ಕೋರ್ಟ್ ಆದೇಶ ಪ್ರಕಾರ ಇಂದು ಮರು ಮತ ಎಣಿಕೆ ಕಾರ್ಯ ನಡೆದಿದ್ದು, ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಇವಿಎಂ ಮರು ಎಣಿಕೆ ನಡೆದಿದೆ.

ಇನ್ನೂ ಮತ ಎಣಿಕೆಯ ಸಂದರ್ಭದಲ್ಲಿ ಪಕ್ಷದ ಏಜೆಂಟ್ ಗಳನ್ನು ಪೊಲೀಸರು ತಪಾಸಣೆ ಮಾಡಿ ಒಳಗೆ ಬಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಪಡೆದರು. ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಪೋನ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ನಿಷೇಧ ಮಾಡಲಾಗಿತ್ತು. ಅಲ್ಲದೇ ಮಾಧ್ಯಮದವರಿಗೂ ಚುನಾವಣಾಧಿಕಾರಿಗಳು ನಿಷೇಧ ಹೇರಿದ್ದಾರೆ. ಇಂದಿನ ಮತ ಎಣಿಕೆ ನಡೆಯುತ್ತಿರುವ ಕಡೆ ಮಾಧ್ಯಮಗಳಿಗೂ ಸೇರಿದಂತೆ ಮುಖಂಡರಿಗೂ ಸಹಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ನಿಷೇಧವನ್ನ ಹಾಕಲಾಗಿತ್ತು.
ಕಳೆದ 2023 ರಲ್ಲಿ ನಡೆದಿದ್ದ ವಿಧಾನ ಸಭಾ ಚುನಾವಣೆ ವೇಳೆ, ಮಾಲೂರು ವಿಧಾನ ಸಭಾ ಕ್ಷೇತ್ರದದಲ್ಲಿ ತ್ರಿಕೋನ ಸ್ಪರ್ದೆ ಏರ್ಪಟ್ಟು ಅಂತಿಮವಾಗಿ ಕಾಂಗ್ರೆಸ್ ಗೆಲುವು ಕಂಡಿತ್ತು. 2023 ರ ಸಂದರ್ಭದಲ್ಲಿ ಮತ ಎಣಿಕೆ ಸಮರ್ಪಕ ವಾಗಿ ಆಗಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥಗೌಡ ಕೋರ್ಟ್ ಮೆಟ್ಟಿಲು ಏರಿದ್ದರು. ಬಳಿಕ ಹೈಕೋರ್ಟ್ ನಲ್ಲಿ ಹಾಗೂ ಸುಪ್ರಿಂ ಕೋರ್ಟ್ ನಲ್ಲಿ ಮರು ಮತ ಎಣಿಕೆಗೆ ಆದೇಶಿಸಲಾಗಿತ್ತು. 2023 ರಲ್ಲಿ ಹಾಲಿ ಶಾಸಕ ಕಾಂಗ್ರೆಸ್ ನ ಕೆವೈ ನಂಜೇಗೌಡ ಅವರು 50955 ಮತಗಳನ್ನ ಪಡೆದಿದ್ದರು, ಬಿಜೆಪಿಯ ಕೋಡಿಹಳ್ಳಿ ಮಂಜುನಾಥ್ ಗೌಡ 50707 ಮತಗಳು, ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್- 49362 ಮತಗಳನ್ನ ಪಡೆದಿದ್ದರು.
-
ವಾಹನ ಸವಾರರಿಗೆ ಗುಡ್ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ -
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications