ಕರ್ನಾಟಕ ವಿಧಾನಸಭೆ ಎಲೆಕ್ಷನ್ನಲ್ಲಿ ಇವಿಎಂ ಗ್ಯಾರಂಟಿ!
ಬೆಂಗಳೂರು, ಜನವರಿ 10: ರಾಜ್ಯ ಕಾಂಗ್ರೆಸ್ ಸರ್ಕಾರದ ಸತತ ಒತ್ತಡದ ನಡುವೆಯೂ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಇವಿಎಂ ಅಳವಡಿಕೆ ಇದೆಯೋ ಇಲ್ಲವೋ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ.
ಬುಧವಾರ ಕೇಂದ್ರ ಚುನಾವಣಾ ಆಯೋಗದ ಮಹಾ ನಿರ್ದೇಶಕ ದಿಲೀಪ್ ಶರ್ಮಾ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಓಟಿಂಗ್ ಮೆಷಿನ್ ಬಳಕೆ ಪ್ರಕಟಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಸರ್ವಿಸ್ ಮ್ಯಾನ್, ಎನ್ಆರ್ಐಗಳ ಆನ್ಲೈನ್ ಮತದಾನಕ್ಕೆ ಅವಕಾಶ ನೀಡಿದ್ದು, ಮತದಾನಕ್ಕೆ 3 ದಿನ ಮುಂಚಿತದವರೆಗೂ ಎನ್ಆರ್ಐಗಳ ಮತದಾರ ಪಟ್ಟಿಗೆ ನೋಂದಣಿ ಮಾಡಿಕೊಳ್ಳಬಹುದು.
ಚುನಾವಣೆ ಅಭ್ಯರ್ಥಿಗಳ ವೆಚ್ಚವನ್ನು 28 ಲಕ್ಷ ರೂ.ಗೆ ನಿಗದಿ ಮಾಡಲಾಗಿದ್ದು, ಹೆಚ್ಚಿನ ಹಣ ಖರ್ಚು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಉಪಚುನಾವಣೆ ಆಯುಕ್ತ ಸಂದೀಪ್ ಸಕ್ಸೇನಾ ಮಾತನಾಡಿ, ಚುನಾವಣಾ ಪ್ರಚಾರಕ್ಕೆ ತೆರಳುವ ಪಕ್ಷಗಳು, ರಾಜಕೀಯ ಮುಖಂಡರು ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕು. 25 ಸಾವಿರ ಸೇವಾ ಮತದಾರರಿಗೆ ಪೋಸ್ಟಲ್ ಬ್ಯಾಲೆಟ್ಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಈ ಬಾರಿ ಎಲೆಕ್ಟ್ರಾನಿಕ್ ಮತ ಯಂತ್ರಗಳು ಜತೆಗೆ ವಿವಿ ಪ್ಯಾಟ್ ಯಂತ್ರಗಳನ್ನು ಬಳಕೆ ಮಾಡಲಾಗುತ್ತದೆ. ಇದರಿಂದ ಮತದಾರರಿಗೆ ತಾವು ಯಾರಿಗೆ ಮತದಾನ ಮಾಡಿದ್ದು ಎಂದು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೆ, ಡಿಜಿಟಲ್ ಮ್ಯಾಪ್ ಬಳಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಕೇಂದ್ರ ಉಪಚುನಾವಣಾ ಆಯುಕ್ತ ಉಮೇಶ್ ಸಿನ್ಹಾ ಮಾತನಾಡಿ, ಗುರುತಿನ ಸಂಖ್ಯೆ ಬಗ್ಗೆ ತಿಳಿಯುವ ಚುನಾವಣಾ ಅಪ್ಲಿಕೇಷನ್ ಬಿಡುಗಡೆ ಮಾಡಲಾಗಿದ್ದು, 9731979898 ಸಂಖ್ಯೆಗೆ ಎಸ್ಎಂಎಸ್ ಕಳುಹಿಸಿದರೆ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ, ಸಂಖ್ಯೆ, ವಿಳಾಸ ಸೇರಿದಂತೆ ಚುನಾವಣಾ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.
ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್, ದೀರೇಂದ್ರ ಓಝ, ನಿಖಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಉಪಸ್ಥಿತರಿದ್ದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications