ಎಸಿಬಿ ರದ್ದು: ಲೋಕಯುಕ್ತ ಸಂಸ್ಥೆ ಬಗ್ಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಹೇಳಿದ್ದೇನು?
ಬೆಂಗಳೂರು, ಆಗಸ್ಟ್, 12: ಇಂದು ಹೈಕೋರ್ಟ್ ಎಸಿಬಿ ರದ್ದುಪಡಿಸಿ ಆದೇಶ ಹೊರಡಿಸಿದ್ದು, ಬೇರೆ ರಾಜ್ಯಗಳಿಗೆ ಅನುಕರಣೀಯವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ ತುಂಬಿದಂತಾಗಿದೆ ಎಂದು ಎಸ್.ಎಂ,ಕೃಷ್ಣ ಉಲ್ಲೇಖಿಸಿದ್ದಾರೆ.
ರಾಷ್ಟದಲ್ಲಿಯೇ ಮಾದರಿ ಸಾಂವಿಧಾನಿಕ ಸಂಸ್ಥೆಯಾಗಿ ಬೇರೆ ರಾಜ್ಯಗಳಿಗೆ ಅನುಕರಣೀಯವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ ತುಂಬಿದಂತಾಗಿದೆ. ಇಂದಿನ ಉಚ್ಚ ನ್ಯಾಯಾಲಯ ಉತ್ತಮ ತೀರ್ಪನ್ನು ನೀಡಿದ್ದು, ಇದು ತುಂಬಾ ಸಂತೋಷದ ವಿಚಾರವಾಗಿದೆ. ತುಂಬು ಹೃದಯದಿಂದ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕರ್ನಾಟಕ ಲೋಕಯುಕ್ತ ಸಂಸ್ಥೆ ಪ್ರಾರಂಭಗೊಂಡಿತ್ತು. ನಾನು ಮುಖ್ಯಮಂತ್ರಿಯಾಗಿದ್ದಾಗ ನೇಮಕಗೊಂಡ ದಿವಂಗತ ಜಸ್ಟಿಸ್ ಶ್ರೀ ಎನ್.ವೆಂಕಟಚಲ ಅವರು ಮತ್ತು ಜಸ್ಟಿಸ್ ಸಂತೋಷ್ ಹೆಗ್ಗಡೆಯವರ ಪರಿಶ್ರಮದಿಂದ ಈ ಸಂಸ್ಥೆ ತುಂಬಾ ಹೆಸರುವಾಸಿ ಆಗಿತ್ತು. ಆಗ ದೇಶದ ಗಮನ ಸೆಳೆದಿದ್ದ ಕರ್ನಾಟಕ ಲೋಕಯುಕ್ತ ಸಂಸ್ಥೆ ಕೆಲವು ವರ್ಷಗಳ ಹಿಂದೆ ಪರ್ಯಾಯವಾಗಿ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆ ಆಯಿತು. ಭ್ರಷ್ಟಾಚಾರ ನಿಗ್ರಹ ದಳ ಸೃಷ್ಟಿಯಿಂದ ಅದು ತನ್ನ ಘನತೆಯನ್ನು ಕಳೆದುಕೊಂಡಿತು. ಎಸಿಬಿ ಯಂತಹ ಕೃತಕ ಸಂಸ್ಥೆಯು ಜನರ ನಂಬಿಕೆಯನ್ನು ಕಳೆದುಕೊಳ್ಳುತ್ತಾ ಬಂದಿತ್ತು. ಇದು ಬಂದ ಮೇಲೆ ಜನರಿಗೆ ನ್ಯಾಯ ಸಿಗದಂತೆ ಆಯಿತು.

ಕಳೆದ ತಿಂಗಳು ಉಚ್ಚ ನ್ಯಾಯಾಲಯ ಎಸಿಬಿಯಲ್ಲಿನ ಭ್ರಷ್ಟ ವ್ಯವಸ್ಥೆ ಬಗ್ಗೆ ಬಲವಾದ ಚಾಟಿ ಬೀಸಿದ್ದು, ಇದು ಜನರ ಕಣ್ಣಲ್ಲಿ ಅಚ್ಚೆಯಾಗಿ ಉಳಿದಿದೆ. ಇಂದಿನ ತೀರ್ಪು ಉತ್ತಮವಾಗಿದೆ. ಮತ್ತೆ ಜನರ ದೃಷ್ಟಿ ಲೋಕಯುಕ್ತ ಸಂಸ್ಥೆ ಮೇಲೆ ನೆಟ್ಟಿದೆ. ನ್ಯಾಯಾಲಯದ ಮೇಲೆ ವಿಶ್ವಾಸ ಮೂಡಿಸಿ, ನ್ಯಾಯ ದೊರೆಯುವ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಇಂತಹ ತೀರ್ಪು ನೀಡಿದ ಉಚ್ಚ ನ್ಯಾಯಾಲಯಕ್ಕೆ ನನ್ನ ಅಭಿನಂದನೆಗಳು ಹಾಗೂ ಮತ್ತೆ ಲೋಕಯುಕ್ತ ಸಂಸ್ಥೆ ರಾಷ್ಟ್ರದಲ್ಲಿ ಮಾದರಿ ಸಂಸ್ಥೆಯಾಗಿ ರೂಪಿತವಾಗಬೇಕು. ಅದು ನಿರಂತರವಾಗಿ ಜನರ ಸೇವೆಯಲ್ಲಿರಲಿ ಎಂದು ಆಶಿಸುತ್ತೇನೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಕಣಟಣೆಯಲ್ಲಿ ಹೇಳಿದ್ದಾರೆ.
Recommended Video
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications