ಮೇಟಿಗೆ ಅನ್ಯಾಯ ಮಾಡಿಲ್ಲ: ವಿಜಯಾನಂದ ಕಾಶಪ್ಪನವರ್
ಬಾಗಲಕೋಟೆ, ಅಕ್ಟೋಬರ್ 10: ಬಾಗಲಕೋಟೆ ಶಾಸಕ ಎಚ್. ವೈ. ಮೇಟಿಯವರ 72ನೇ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕ್ಷೇತ್ರದ ರಾಮಪುರ ಗ್ರಾಮದಲ್ಲಿ ನಿರ್ಮಿಸಲಾಗಿದ್ದ ಭವ್ಯ ವೇದಿಕೆಯ ಅಭಿಮಾನಿಗಳು ತಂದ ಬೃಹತ್ ಕೇಕ್ ಕಟ್ ಮಾಡುವ ಮೂಲಕ ಹೆಚ್ ವೈ ಮೇಟಿ ಹುಟ್ಟುಹಬ್ಬ ಆಚರಿಸಿಕೊಂಡರು.
ಈ ವೇಳೆ ವಿಜಯಾನಂದ ಕಾಶಪ್ಪನವರ್ ಮಾತನಾಡಿ, "ಮೇಟಿಯವರು ನನ್ನ ತಂದೆಯ ಸಮಾನ. ಅವರಿಗೆ ಯಾವತ್ತೂ ನಾನು ಅನ್ಯಾಯ ಮಾಡಿಲ್ಲ. ನನ್ನ ತಾಯಿಯ ಮೇಲೆ ಮತ್ತು ಕೂಡಲಸಂಗಮನಾಥನ ಮೇಲೆ ಪ್ರಮಾಣ ಮಾಡಿ ಹೇಳ್ತಿನಿ" ಎಂದರು.

ಮೇಟಿಯವರು ಮತ್ತು ಕಾಶಪ್ಪನವರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಸಮರ್ಥನೆ ಮಾಡಿಕೊಂಡರು. ಯಾರೋ ಕೆಲವರು ಬ್ರಿಟಿಷರ್ ವಂಶದವರು ನಮ್ಮಲ್ಲಿದ್ದಾರೆ. ನಮ್ಮಬ್ಬರಿಗೆ ಭಿನ್ನಾಬಿಪ್ರಾಯ ಬರುವಂತೆ ನೋಡಿಕೊಳ್ತಿದ್ದಾರೆ ಅಂತ ಆರೋಪಿಸಿದರು.
ಮೊದಲ ಬಾರಿಗೆ ಇಷ್ಟೊಂದು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲಾಗುತ್ತಿದ್ದು,ರಾಸಲೀಲೆ ಪ್ರಕರಣದ ನಂತರವೂ ತಮ್ಮ ವರ್ಚಸ್ಸು ಕುಂದಿಲ್ಲ ಎಂದು ತೋರಿಸುವ ಪ್ರಯತ್ನ ಮೇಟಿ ಮಾಡಿದ್ದಾರೆ.
ಅತಿ ಹೆಚ್ಚು ಜನರನ್ನು ಸೇರಿಸಿ ಸಿಎಮ್,ಕೆಪಿಸಿಸಿ ಮತ್ತು ಹೈಕಮಾಂಡ್ ಗೆ ತಮ್ಮ ಪ್ರಭಾವ ತೋರ್ಪಡಿಸಿ ೨೦೧೮ರ ಕಾಂಗ್ರೆಸ್ ಟಿಕೆಟ್ ಪುನಃ ಪಡೆಯುವ ಕಾರ್ಯಕ್ರಮದ ಮೂಲಕ ವ್ಯಕ್ತವಾಗಿದೆ.
ಸಮಾವೇಶದಲ್ಲಿ ಹೆಚ್ ವೈ ಮೇಟಿ ಅಭಿಮಾನಿಗಳು ಮಾಲಾರ್ಪಣೆ ಮಾಡಲು ಶುಭಾಶಯ ಕೋರಲು ಮುಂದಾದ ವೇಳೆ ನೂಕುನುಗ್ಗಲು ಉಂಟಾಗಿರುವುದು ಕೂಡ ಕಂಡು ಬಂತು.
ಕಾರ್ಯಕ್ರಮದಲ್ಲಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ ಆರ್ ಪಾಟಿಲ್, ಬಾಗಲಕೋಟೆ ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ,ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಪ್ರಮುಖ ಗಣ್ಯರು ಹಾಜರಾಗಿದ್ದರು.
ಕಾರ್ಯಕ್ರಮ ಜನ್ಮ ದಿನಾಚರಣೆ ಆದರೂ ಪಕ್ಕಾ ರಾಜಕೀಯ ಸಮಾವೇಶ ಎಂಬಂತೆ ಬಿಂಬಿತವಾಗಿತ್ತು. ಕ್ಷೆತ್ರದ ವಿವಿಧ ಹಳ್ಳಿಗಳಿಂದ ಮೇಟಿ ಅಭಿಮಾನಿಗಳು, ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications