ಹಕ್ಕುಚ್ಯುತಿ: ನನಗ್ಯಾವ ಹೆದರಿಕೆಯೂ ಇಲ್ಲ- ಹಿರೇಮಠ್

ಡಿಕೆ ಶಿವಕುಮಾರ್, ರಮೇಶಕುಮಾರ್ ಮತ್ತು ರೋಶನ್ ಬೇಗ್ ಅವರು ಕರ್ನಾಟಕದ ಮಂತ್ರಿಮಂಡಲದಲ್ಲಿ ಸ್ಥಾನ ಪಡೆಯಬಾರದು. ಏಕೆಂದರೆ ಅವರು ಭ್ರಷ್ಟರು. ಹಾಗಾಗಿ ಅವರನ್ನು ತಡೆಯಲು ನನ್ನ ಹೋರಾಟ ಮುಂದುವರಿಸುವೆ ಎಂದು ಹಿರೇಮಠ್ ಸ್ಪಷ್ಟಪಡಿಸಿದ್ದಾರೆ.
ಹಿರೇಮಠ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಯಾವ ದಾಖಲೆಯೂ ಇಲ್ಲ ಎಂದು ಸಂತೋಷ್ ಲಾಡ್, ಯಡಿಯೂರಪ್ಪ, ಜನಾರ್ದನ ರೆಡ್ಡಿ ಸೇರಿದಂತೆ ಮುಂತಾದವರು ಹೇಳುತ್ತಿದ್ದರು. ಅದೇ ರೀತಿ ರಮೇಶ್ ಕುಮಾರ್ ಸಹ ದಾಖಲೆಗಳಿಲ್ಲ ಎಂದು ಹೇಳುತ್ತಿದ್ದಾರೆ. ದಾಖಲೆ ಇಲ್ಲದೆ ಯಾವುದೇ ಆರೋಪ ಮಾಡುವುದಿಲ್ಲ. ಈ ಬಗ್ಗೆ ಕಾನೂನು ಹೋರಾಟ ಮುಂದುವರಿಸುವುದಾಗಿ ಪುನರುಚ್ಚರಿಸಿದ್ದಾರೆ.
ರಮೇಶ್ ಕುಮಾರ್ ಅವರು ಒತ್ತುವರಿ ಮಾಡಿರುವ ಅರಣ್ಯ ಭೂಮಿಯ ಸರ್ವೆ ನಡೆಸುವ ಸಂದರ್ಭದಲ್ಲಿ ಬಾಲಸುಬ್ರಹ್ಮಣ್ಯಂ ಅವರನ್ನು ಅಲ್ಲಿಗೆ ಹೋಗದಂತೆ ಒತ್ತಡ ಹೇರಲಾಗಿತ್ತು. ಒತ್ತುವರಿ ತೆರವು ಆದೇಶದಿಂದ ಇಲ್ಲಿಯವರೆಗೆ ಆ ಜಾಗ ಉಳಿಸಿಕೊಳ್ಳಲು ರಮೇಶ್ ಕುಮಾರ್ ಅವರು ಮಾಡಿರುವ ತಂತ್ರಗಳು ಅನೇಕ ಪ್ರಾಮಾಣಿಕ ಅಧಿಕಾರಿಗಳಲ್ಲಿ ಅಸಹನೆ ಮೂಡಿಸಿದೆ. ಆ ನಡುವೆಯೂ ಅವರು ಮತ್ತು ಅಧಿಕಾರಿಗಳ ತಂಡ ಅಲ್ಲಿಗೆ ಹೋಗಿ ಸರ್ವೆ ನಡೆಸಿ ಅಕ್ರಮ ಪತ್ತೆ ಹಚ್ಚಿದೆ. ಇದಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳೂ ಇವೆ.
ಎಸ್ಆರ್ ಹಿರೇಮಠ್ ಇನ್ನೂ ಏನು ಹೇಳಿದ್ದಾರೆಂದರೆ...
ಸದನದಲ್ಲಿ ಹಕ್ಕುಚ್ಯುತಿಯಂತಹ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ಆ ಮೂಲಕ ನನ್ನ ನೈತಿಕ ಸ್ಥೈರ್ಯ ಕುಗ್ಗಿಸಲು ಸಾಧ್ಯವಿಲ್ಲ. ಭ್ರಷ್ಟರ ವಿರುದ್ಧ ಹೋರಾಟವನ್ನು ಮುಂದುವರಿಸುತ್ತೇನೆ. ಮಾಜಿ ಸ್ಪೀಕರ್ ಹಾಗೂ ಶಾಸಕ ರಮೇಶ್ ಕುಮಾರ್ ಅವರು 60 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿರುವುದು ನಿಜ. ಅವರು ಭ್ರಷ್ಟರಲ್ಲ ಎಂದು ಹೇಳಿಕೊಳ್ಳುವುದಾದರೆ ಮೊದಲು ಆ ಭೂಮಿಯನ್ನು ಸರ್ಕಾರಕ್ಕೆ ಹಿಂದಿರುಗಿಸಲಿ. ಭ್ರಷ್ಟರ ವಿರುದ್ಧ ಕೊನೆ ಉಸಿರಿರುವವರೆಗೂ ಹೋರಾಟ ಮಾಡುತ್ತೇನೆ.
ಇನ್ನು ರಮೇಶ್ ಕುಮಾರ್ ಮಂಡಿಸಿರುವ ಹಕ್ಕುಚ್ಯುತಿ ಕಾನೂನು ಪ್ರಕಾರ ಸಬಲವಾಗಿಲ್ಲ. ಬದಲಿಗೆ, ಅದರಿಂದ ಅವರು ನಮ್ಮ ಹೋರಾಟಕ್ಕೆ ಹೆಚ್ಚು ಪ್ರೇರಣೆ ನೀಡಿದರು. 60 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿರುವ ಬಗ್ಗೆ ದಾಖಲೆಗಳು, ಬಾಲಸುಬ್ರಹ್ಮಣ್ಯಂ ವರದಿ, ಅರಣ್ಯ ಇಲಾಖೆಯವರು ಸಭೆ ನಡೆಸಿದ ಸಂದರ್ಭದಲ್ಲಿನ ಘಟನೆ ಕಣ್ಣೆದುರಿಗೇ ಇದೆ.
ಬಾಲಸುಬ್ರಹ್ಮಣ್ಯಂ ಅವರು ನೀಡಿರುವ ವರದಿ ಸಂಬಂಧ ಕ್ರಮ ಕೈಗೊಳ್ಳುವಂತೆ ಒಂದು ಸಾವಿರ ಪುಟಗಳ ದಾಖಲೆಗಳ ವಿವರಗಳನ್ನು ಈಗಾಗಲೇ ಹೈಕೋರ್ಟ್ಗೆ ನೀಡಲಾಗಿದೆ ಎಂದು ತಿಳಿಸಿದ ಹಿರೇಮಠರು ತತ್ಸಂಬಂಧಿತ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications