ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟ ಅಬಕಾರಿ ಇಲಾಖೆ
ಬೆಂಗಳೂರು, ಜೂನ್ 03 : ಕರ್ನಾಟಕದ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಹೊಸದಾಗಿ ಬೀಯರ್ ತಯಾರು ಮಾಡಲು ಅನುಮತಿ ನೀಡಿದ್ದು, ಅದನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ.
Recommended Video
ಮೈಕ್ರೋ ಬ್ರೂವರೀಸ್ ಹೊಸದಾಗಿ ಬೀಯರ್ ಉತ್ಪಾದನೆ ಮಾಡಬಹುದು. ಕಂಟೈನರ್, ಗ್ಲಾಸ್ಗಳ ಮೂಲಕ ಅವರನ್ನು ಪಾರ್ಸೆಲ್ ತೆಗೆದುಕೊಂಡು ಹೋಗಬಹುದು ಎಂದು ಅಬಕಾರಿ ಇಲಾಖೆ ಹೊಸ ಸುತ್ತೋಲೆಯಲ್ಲಿ ತಿಳಿಸಿದೆ.
ಒಬ್ಬ ವ್ಯಕ್ತಿ 2 ಲೀಟರ್ ತನಕ ಬೀಯರ್ ಪಾರ್ಸೆಲ್ ತೆಗೆದುಕೊಂಡು ಹೋಗಬಹುದು. ಮೈಕ್ರೋ ಬ್ರೂವರೀಸ್ ಬೆಳಗ್ಗೆ 9 ರಿಂದ ರಾತ್ರಿ 9ರ ತನಕ ಕಾರ್ಯ ನಿರ್ವಹಣೆ ಮಾಡಬಹುದು ಎಂದು ಅಬಕಾರಿ ಇಲಾಖೆ ಹೇಳಿದೆ. ಈ ಆದೇಶ ಜೂನ್ 30ರ ತನಕ ಜಾರಿಯಲ್ಲಿರುತ್ತದೆ.

ಈ ಆದೇಶವನ್ನು ಹೊರತುಪಡಿಸಿದರೆ ಮದ್ಯ ಖರೀದಿ ವಿಚಾರದಲ್ಲಿ ಮೇ 12ರಂದು ಹೊರಡಿಸಿದ ಎಲ್ಲಾ ಸೂಚನೆಗಳನ್ನು ಪಾಲನೆ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಜೂನ್ 30ರ ತನಕ ಇರುವ ಸ್ಟಾಕ್ಗಳನ್ನು ಖಾಲಿ ಮಾಡಲು ಈಗಾಗಲೇ ಅನುಮತಿ ಕೊಡಲಾಗಿದೆ.
ಮದ್ಯ ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ ಬಳಕೆ ಕಡ್ಡಾಯ, ಸ್ವಚ್ಚತೆ ಕಾಪಾಡಬೇಕು, ಸ್ಯಾನಿಟೈಸರ್ ಬಳಕೆ ಮಾಡಬೇಕು. ಕಂಟೈನ್ಮೆಂಟ್ ಝೋನ್ಗಳಲ್ಲಿರುವ ಮೈಕ್ರೋ ಬ್ರೂವರೀಸ್ ಬಂದ್ ಮಾಡಬೇಕು ಎಂದು ತಿಳಿಸಲಾಗಿದೆ.
ಕೊರೊನಾ ವೈರಸ್ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿತ್ತು. ಮೇ 4ರಂದು ಮದ್ಯದ ಅಂಗಡಿ ತೆರೆಯಲು ಸರ್ಕಾರ ಅವಕಾಶ ನೀಡಿತ್ತು. ಪಾರ್ಸೆಲ್ ಮಾತ್ರ ತೆಗೆದುಕೊಂಡು ಹೋಗಲು ಅನುಮತಿ ಕೊಡಲಾಗಿತ್ತು.
ಮೇ ತಿಂಗಳಿನಲ್ಲಿ ಕರ್ನಾಟಕದ ಅಬಕಾರಿ ಇಲಾಖೆ 1387.20 ಕೋಟಿ ಆದಾಯಗಳಿಸಿದೆ. ಆದರೆ, ಕಳೆದ ವರ್ಷದ ಮೇ ತಿಂಗಳಿಗೆ ಹೋಲಿಕೆ ಮಾಡಿದರೆ ಆದಾಯ ಕಡಿಮೆಯಾಗಿದೆ.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಪಬ್-ವೈನ್ ಸೆಂಟರ್ಗಳಿಗೆ ಅಪ್ರಾಪ್ತರ ಪ್ರವೇಶ ನಿಷೇಧಕ್ಕೆ ಹೈಕೋರ್ಟ್ ಸೂಚನೆ; ಐಡಿ ಪರಿಶೀಲಿಸಲು ಸಲಹೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications