ನೈಟ್ ಕರ್ಫ್ಯೂ: ಪಾರ್ಟಿ ಪ್ರಿಯರಿಗೆ ಅಘಾತ ಕೊಟ್ಟ ಅಬಕಾರಿ ಸಚಿವ ಎಚ್. ನಾಗೇಶ್!
ಬೆಂಗಳೂರು, ಡಿ. 23: ಇಂಗ್ಲೆಂಡ್ನಲ್ಲಿ ಕೊರೊನಾ ವೈರಸ್ ಹೊಸ ಪ್ರಬೇಧ ಕಂಡು ಬಂದಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯಾದ್ಯಂತ ಮತ್ತೊಮ್ಮೆ ನೈಟ್ ಕರ್ಫ್ಯೂ ಹೇರಲಾಗಿದೆ. ನೈಟ್ ಕರ್ಫ್ಯೂ ಜಾರಿಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶ ಮಾಡಿದ್ದರೆ. ಇದರಿಂದಾಗಿ ಭರ್ಜರಿ ಹೊಸವರ್ಷಾಚರಣೆ ಮಾಡುವ ಉಮೇದಿನಲ್ಲಿದ್ದ ಪಾರ್ಟಿ ಪ್ರೀಯರಿಗೆ ನಿರಾಸೆಯಂತೂ ಆಗಿದೆ. ಇದೇ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ಮತ್ತೊಂದು ಅಘಾತವನ್ನು ಅಬಕಾರಿ ಸಚಿವ ಎಚ್. ನಾಗೇಶ್ ಅವರು ಕೊಟ್ಟಿದ್ದಾರೆ.
ಜೊತೆಗೆ ಹೊಸ ವರ್ಷ ಹಾಗೂ ಕ್ರಿಸ್ಮಸ್ ಆಚರಣೆಗೆ ನೈಟ್ ಕರ್ಫ್ಯೂನಿಂದಾಗಿ ಕರಿನೆರಳು ಬಿದ್ದಿದೆ. ಕೊರೊನಾ ರೂಪಾಂತರ ವೈರಾಣು ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 23ರ ರಾತ್ರಿಯಿಂದ ಜನವರಿ 2 ರವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಅಷ್ಟೂ ದಿನಗಳ ಕಾಲ ಪ್ರತಿದಿನ ರಾತ್ರಿ 10 ರಿಂದ ಬೆಳಗಿನ 6 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸಿಎಂ ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಅಬಕಾರಿ ಸಚಿವ ಎಚ್. ನಾಗೇಶ್ ಅವರು ಮದ್ಯ ಪ್ರೀಯರಿಗೆ ನಿರಾಸೆಯಾಗುವಂತಹ ಮತ್ತೊಂದು ಆದೇಶ ಮಾಡಿದ್ದಾರೆ. ಇನ್ನೇನೂ ಕೊರೊನಾ ವೈರಸ್ ಆತಂಕ ಕಡಿಮೆಯಾಯಿತು, ಹೊಸ ವರ್ಷಕ್ಕೆ ಭರ್ಜರಿ ಮಾರ್ಟಿ ಮಾಡಬಹುದು ಅಂದುಕೊಂಡಿದ್ದವರಿಗೆ ಅಘಾತವಾಗಿದೆ.

ಮದ್ಯದ ಅಂಗಡಿಗಳು ಬಂದ್
ಈ ಬಗ್ಗೆ ಕೋಲಾರದಲ್ಲಿ ಮಾತನಾಡಿರುವ ಅಬಕಾರಿ ಸಚಿವ ಎಚ್. ನಾಗೇಶ್ ಅವರು, ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಹಿನ್ನಲೆಯಲ್ಲಿ ರಾತ್ರಿ 10 ಗಂಟೆಯ ನಂತರ ಮದ್ಯ ಮಾರಾಟವನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಇಡೀ ರಾಜ್ಯಾದ್ಯಂತ 10 ಗಂಟೆಗೆ ಮದ್ಯದ ಅಂಗಡಿಗಳು ಬಂದ್ ಆಗಲಿವೆ. ಜೊತೆಗೆ ಈ ಮಾರ್ಗಸೂಚಿಯನ್ನು ಪಾಲಿಸದಿದ್ದಲ್ಲಿ ಲಿಕ್ಕರ್ ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆಯನ್ನು ನಾಗೇಶ್ ಅವರು ಕೊಟ್ಟಿದ್ದಾರೆ.

ಪಬ್-ಕ್ಲಬ್ ಎಲ್ಲವೂ ಬಂದ್
ರಾಜ್ಯದಲ್ಲಿ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್ ಎಲ್ಲವೂ ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬಂದ್ ಆಗಲಿವೆ. ಸರ್ಕಾರಕ್ಕೆ ಮದ್ಯದದಿಂದ ಬರುವ ಆದಾಯಕ್ಕಿಂತ ಜನರ ಜೀವ ರಕ್ಷಣೆ ಸರ್ಕಾರಕ್ಕೆ ಮುಖ್ಯವಾಗಿದೆ. ಹೀಗಾಗಿ ಮದ್ಯದ ಅಂಗಡಿಗಳನ್ನು ಕಟ್ಟುನಿಟ್ಟಾಗಿ ಬಂದ್ ಮಾಡಲಾಗುವುದು ಎಂದು ಸಚಿವ ನಾಗೇಶ್ ಹೇಳಿದ್ದಾರೆ.

ಲೈಸನ್ಸ್ ರದ್ದು ಮಾಡುವ ಎಚ್ಚರಿಕೆ
ಹೊಸ ಮಾರ್ಗಸೂಚಿ ಪಾಲನೆಯಲ್ಲಿ ಅಬಕಾರಿ ಇಲಾಖೆಯ ಪಾತ್ರ ಬಹು ಮುಖ್ಯವಾಗಿದೆ. ಎಲ್ಲಾ ಬಾರ್ ಲೈಸನ್ಸ್ ಮಾಲೀಕರಿಗೆ ಇಮೇಲ್ ಮೂಲಕ ಹೊಸ ಮಾರ್ಗಸೂಚಿ ಕಳಿಸಿದ್ದೇವೆ ಎಂದು ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಎಚ್ ನಾಗೇಶ್ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅಬಕಾರಿ ಆದೇಶ ಉಲ್ಲಂಘಿಸಿ ಎಣ್ಣೆ ಅಂಗಡಿ ಓಪನ್ ಮಾಡಿದರೆ ಕಠಿಣಕ್ರಮ ಕಟ್ಟಿಟ್ಟ ಬುತ್ತಿ ಎಂದು ಇಲಾಖೆ ಸೂಚಿಸಿದೆ.
Recommended Video

ಕಳೆಗುಂದಿದ ಹೊಸ ವರ್ಷಚಾರಣೆ
ಕೊರೊನಾ ವೈರಸ್ ಕಮ್ಮಿಯಾಗಿದೆ. ಇನ್ನೇನೂ ಹೊಸ ವರ್ಷಾಚರಣೆಯನ್ನು ರಂಗೇರುವಂತೆ ಮಾಡಬೇಕು ಎಂದುಕೊಂಡಿದ್ದ ಪಾರ್ಟಿ ಪ್ರೀಯರಿಗೆ ರೂಪಾಂತರಿ ವೈರಸ್ ನಿರಾಸೆ ತಂದಿದೆ. ಇಡೀ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿ ಇರುವುದರಿಂದ ತಡರಾತ್ರಿ ಪಾರ್ಟಿಗಳಿಗೆ ಅವಕಾಶವಿರುವುದಿಲ್ಲ. ಜೊತೆಗೆ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಹಾನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಸೂಚಿಸಿದ್ದಾರೆ. ಹೀಗಾಗಿನ ಪಾರ್ಟಿ ಪ್ರೀಯರು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮನೆಯಲ್ಲಿ ಇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications